Thursday, September 17, 2026
BREAKING NEWS

state

ಚುನಾವಣೆಯೇ ಬಿಜೆಪಿ ಅಜೆಂಡಾ ಆಗಿದ್ದರೆ, ಅಭಿವೃದ್ಧಿಯೇ ಕಾಂಗ್ರೆಸ್‌ ಅಜೆಂಡಾ : ಮಾಜಿ ಸಚಿವ ರಮಾನಾಥ ರೈ

ಮಂಗಳೂರು: ಚುನಾವಣೆಯೇ ಬಿಜೆಪಿಯ ಅಜೆಂಡಾ ಆಗಿದ್ದರೆ, ಕಾಂಗ್ರೆಸ್‌ನ ಅಜೆಂಡಾ ಅಭಿವೃದ್ಧಿ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರ್ಲಕ್ಷ್ಯಕ್ಕೆ ಒಳಗಾದ ಹಾಗೂ ತಳವರ್ಗದ ಜನರ, ಅದರಲ್ಲೂ ಕೊರಗ ಸಮುದಾಯದ ಅಭಿವೃದ್ಧಿಗೆ ಪೂರಕವಾದ ಕ್ರಮಗಳಿಗೆ ಸೆ.18 ದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಆದ್ಯತೆ ದೊರೆಯಲಿದೆ ಎಂದರು. ‘ದುರ್ಬಲರು ಮತ್ತು ಬಡವರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರಗಳು ಒತ್ತು ನೀಡಿರುವುದು ಇತಿಹಾಸ. ಮೂಲನಿವಾಸಿ ಕೊರಗರು ತೀರಾ […]

ಅಧಿಕಾರಕ್ಕಾಗಿ ತನಿಖಾ ಸಂಸ್ಥೆಗಳ ದುರ್ಬಳಕೆ, ತುಳು ಭಾಷೆ ನಮ್ಮ ಅಸ್ಮಿತೆಯ ಪ್ರತೀಕ: ಮಾಜಿ ಎಂಎಲ್ಸಿ ಹರೀಶ್ ಕುಮಾರ್

ಮಂಗಳೂರು: ಕರಾವಳಿಗರಿಗೆ ತುಳು ಭಾಷೆ ಕೇವಲ ಭಾವನಾತ್ಮಕ ವಿಷಯವಲ್ಲ; ಅದು ಅಸ್ಮಿತೆಯ ಪ್ರತೀಕ. ತುಳು ಭಾಷೆಗೆ ಸೂಕ್ತ ಮಾನ್ಯತೆ ದೊರೆಯಬೇಕು ಎಂಬುದು ಕರಾವಳಿಗರ ಆಶಯವಾಗಿದ್ದು, ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬೇಡಿಕೆ ಈಡೇರುವ ನಿರೀಕ್ಷೆಯಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ನಿಕಟಪೂರ್ವ ಅಧ್ಯಕ್ಷ ಹರೀಶ್ ಕುಮಾರ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 100 ದಿನಗಳನ್ನು ಪೂರೈಸಿದ್ದು, ಜನರ ನಾಡಿಮಿಡಿತ ಅರಿತು ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. […]

District News

ರಾಷ್ಟ್ರೀಯ ಲೋಕ ಅದಾಲತ್‌ ಸೆ.19ಕ್ಕೆ, ರಾಜೀ ಸಂಧಾನದ ಮೂಲಕ ಶೀಘ್ರ ಇತ್ಯರ್ಥ: ನ್ಯಾಯಾಧೀಶ ಬಸವರಾಜ

ಮಂಗಳೂರು: ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸುವ ರಾಷ್ಟ್ರೀಯ ಲೋಕ ಅದಾಲತ್‌ ಸೆ.19ರಂದು ಜಿಲ್ಲೆಯ ವಿವಿಧ ನ್ಯಾಯಾಲಯಗಳ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪ್ರಧಾನ ನ್ಯಾಯಾಧೀಶ ಬಸವರಾಜ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಶ್ರಯದಲ್ಲಿ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡುಬಿದಿರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣದಲ್ಲಿ ಮಧ್ಯಾಹ್ನ 2.30ರಿಂದ ಲೋಕ ಅದಾಲತ್‌ […]

crime

3 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಮಂಗಳೂರು ಸಿಸಿಬಿ ಪೊಲೀಸರಿಂದ ಖೆಡ್ಡಾ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (ಎನ್‌ಸಿಐಬಿ) ಅಧಿಕಾರಿ ಎಂದು ಸುಳ್ಳು ಪರಿಚಯಿಸಿಕೊಂಡು ವಂಚನೆ ಹಾಗೂ ಸುಲಿಗೆ ನಡೆಸಿದ ಪ್ರಕರಣದಲ್ಲಿ ಬಂಧಿತನಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಲ್ಲಂ ಜಿಲ್ಲೆಯ ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ ಅಲಿಯಾಸ್ ಆಂಟನಿ (64) ಬಂಧಿತ ಆರೋಪಿ. ಆರೋಪಿಯು ತನ್ನದೇ ತಂಡ ರಚಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸುತ್ತಿದ್ದ. ಹಣಕಾಸು ವಿವಾದ, ಬ್ಯಾಂಕ್ […]

ಭೂತನಾಳ ಕೆರೆಯಲ್ಲಿ ತಾಯಿ, ಐವರು ಮಕ್ಕಳ ಶವ ಪತ್ತೆ

ವಿಜಯಪುರ: ಆ.24 ರಿಂದ ನಾಪತ್ತೆ ಆಗಿದ್ದ ತಾಯಿ ಹಾಗೂ ಐದು ಮಂದಿ ಮಕ್ಕಳ ಮೃತದೇಹಗಳು ನಗರದ ಹೊರವಲಯದ ಭೂತನಾಳ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆ ಆಗಿವೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ವಿಜಯಪುರ ತಾಲ್ಲೂಕಿನ ತೊರವಿ ಗ್ರಾಮದ ಮಲಕಾರಿ ಭೀಮರಾಯ ಜಾಲಗೇರಿ ಅವರ ಪತ್ನಿ ಶೋಭಾ ಜಾಲಗೇರಿ (45), ಮಕ್ಕಳಾದ ವಿದ್ಯಾ (16), ಸುವರ್ಣ (14), ಗೌಡೇಶ್ (10), ಸಾನಿಕಾ (7) ಹಾಗೂ ವಿಕಾಸ […]

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ವಶಕ್ಕೆ, ನ್ಯಾಯಾಲಯ ಆದೇಶ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಗುಂಡಿನ ದಾಳಿ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶ ನೀಡಿದೆ. ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಬಂಧಿತ ಆರೋಪಿಗಳು. ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರನ್ನೂ ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. […]

health

ವಿಶ್ವ ಹೃದಯ ದಿನದಂದು ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ₹1,499ಕ್ಕೆ ಹೃದಯ ತಪಾಸಣೆ: ವಿಜಯ್ ಚಂದ್ರ

ಮಂಗಳೂರು: ವಿಶ್ವ ಹೃದಯ ದಿನದ ಅಂಗವಾಗಿ ಮಂಗಳೂರಿನ ಇಂಡಿಯಾನಾ ಆಸ್ಪತ್ರೆ ವತಿಯಿಂದ ಹೃದಯ ತಪಾಸಣಾ ಪ್ಯಾಕೇಜ್‌ನ್ನು ₹1,499ರ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. ಸೆಪ್ಟೆಂಬರ್ 30, 2026ರವರೆಗೆ ಈ ಕೊಡುಗೆ ಲಭ್ಯ ಇರಲಿದೆ ಎಂದು ಇಂಡಿಯಾನಾ ಹಾಸ್ಪಿಟಲ್ ಮತ್ತು ಹಾರ್ಟ್ ಇನ್‌ಸ್ಟಿಟ್ಯೂಟ್ ಲಿಮಿಟೆಡ್ ನ ಗ್ರೂಪ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇ. ವಿಜಯ್ ಚಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಮಾನ್ಯವಾಗಿ 3,000 ದರದ ಈ ತಪಾಸಣಾ ಪ್ಯಾಕೇಜ್‌ನಲ್ಲಿ ಹೃದಯದ ಸಮಗ್ರ ತಪಾಸಣೆಗೆ ಅಗತ್ಯವಿರುವ ವಿವಿಧ ಪರೀಕ್ಷೆಗಳು ಮತ್ತು ವೈದ್ಯಕೀಯ […]

Sports

ವೇಟ್‌ಲಿಫ್ಟಿಂಗ್‌ನಲ್ಲಿ ಆಳ್ವಾಸ್‌ಗೆ ಅವಳಿ ಸಮಗ್ರ ಪ್ರಶಸ್ತಿ, ಹುಡುಗರ ವಿಭಾಗದಲ್ಲಿ 5 ಚಿನ್ನ; ಹುಡುಗಿಯರ ವಿಭಾಗದಲ್ಲಿ 5 ಚಿನ್ನ, ಬೆಳ್ಳಿ–ಕಂಚಿನ ಪದಕಗಳ ಸಾಧನೆ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಮಂಗಳೂರಿನ ಬದ್ರಿಯಾ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜು ವೇಟ್‌ಲಿಫ್ಟಿಂಗ್‌ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜು ಹುಡುಗರ ಹಾಗೂ ಹುಡುಗಿಯರ ಎರಡೂ ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿ ಗೆದ್ದು ಅವಳಿ ಗೌರವಕ್ಕೆ ಪಾತ್ರವಾಗಿದೆ. ಹುಡುಗರ ವಿಭಾಗದಲ್ಲಿ ಆಳ್ವಾಸ್ ತಂಡದ ಕ್ರೀಡಾಪಟುಗಳು ಐದು ವಿಭಾಗಗಳಲ್ಲೂ ಪ್ರಥಮ ಸ್ಥಾನ ಪಡೆದು ಐದು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡರು. 60 ಕೆ.ಜಿ. ವಿಭಾಗದಲ್ಲಿ ಸಂತೋಷ್, 71 ಕೆ.ಜಿ.ಯಲ್ಲಿ ಪ್ರಫುಲ್, […]