Thursday, July 30, 2026
BREAKING NEWS

state

ಕಾವೇರಿ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ, ಕಾನೂನು ತಜ್ಞರ ಜತೆ ಸಿಎಂ ಸಭೆ

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದ ಮತ್ತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ ಇಲಾಖೆಯ ಹಿರಿಯ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ. ಸಭೆಯಲ್ಲಿ ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳು, ರಾಜ್ಯದ ಪರವಾಗಿ ಕೈಗೊಳ್ಳಬೇಕಾದ ಮುಂದಿನ ಕ್ರಮಗಳು ಹಾಗೂ ನ್ಯಾಯಮಂಡಳಿಗಳು ಮತ್ತು ಸಂಬಂಧಿತ ಪ್ರಾಧಿಕಾರಗಳ ಮುಂದೆ ಮಂಡಿಸಬೇಕಾದ ವಾದಗಳ ಕುರಿತು ಸಮಗ್ರ ಚರ್ಚೆ ನಡೆಯಲಿದೆ. ಇದೇ ವೇಳೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾವೇರಿ ಪ್ರಕರಣಕ್ಕೆ ಸಂಬಂಧಿಸಿದ ಕಾನೂನು ಹೋರಾಟದ […]

ಯಶ್‌ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ: ಡಾ. ಮಂಜುನಾಥ ಭಂಡಾರಿ

ಮಂಗಳೂರು: ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ನೀಡಿರುವ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾನೂನಿನ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತದ ಪರವಾಗಿ ನಡೆದ ಹೋರಾಟಕ್ಕೆ ಬೆಂಬಲ ನೀಡಿದ್ದ ರಾಹುಲ್ ಗಾಂಧಿ ವಿರುದ್ಧ ನಿರಾಧಾರ ಆರೋಪ ಹಾಗೂ ಬೆದರಿಕೆ ಹಾಕಿರುವುದು […]

District News

ಯಶ್‌ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ: ಡಾ. ಮಂಜುನಾಥ ಭಂಡಾರಿ

ಮಂಗಳೂರು: ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ನೀಡಿರುವ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾನೂನಿನ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತದ ಪರವಾಗಿ ನಡೆದ ಹೋರಾಟಕ್ಕೆ ಬೆಂಬಲ ನೀಡಿದ್ದ ರಾಹುಲ್ ಗಾಂಧಿ ವಿರುದ್ಧ ನಿರಾಧಾರ ಆರೋಪ ಹಾಗೂ ಬೆದರಿಕೆ ಹಾಕಿರುವುದು […]

crime

ಬೀಳಗಿ: ಪತ್ನಿ ನೇಣಿಗೆ ಶರಣಾಗುತ್ತಿದ್ದರೂ ವಿಡಿಯೊ ಮಾಡಿದ ಪತಿ: ಕೊಲೆ ಶಂಕೆ, ಆರೋಪಿ ವಶಕ್ಕೆ

ಬೀಳಗಿ: ಪತ್ನಿ ನೇಣಿಗೆ ಶರಣಾಗಿ ಉಸಿರುಗಟ್ಟಿ ಸಾವನ್ನಪ್ಪುತ್ತಿದ್ದ ವೇಳೆ ರಕ್ಷಿಸುವ ಬದಲು ವಿಡಿಯೋ ಚಿತ್ರೀಕರಿಸಿದ ಆರೋಪ ಪತಿಯ ವಿರುದ್ಧ ಕೇಳಿಬಂದಿದ್ದು, ಈ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆ ಭಾಗ್ಯಶ್ರೀ (23) ಎಂದು ಗುರುತಿಸಲಾಗಿದೆ. 6 ವರ್ಷಗಳ ಹಿಂದೆ ಭಾಗ್ಯಶ್ರೀ ಮತ್ತು ಪ್ರವೀಣ್ ಮದುವೆ ಆಗಿದ್ದರು. ದಂಪತಿಗೆ ಮಗು ಇತ್ತು. ಪತ್ನಿ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಾಗಿ ದಂಪತಿ ನಡುವೆ ಆಗಾಗ್ಗೆ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಘಟನೆ ನಡೆದ […]

ಸುರತ್ಕಲ್: ಅಣ್ಣನಿಂದಲೇ ತಮ್ಮನ ಕೊಲೆ, ಪೊಲೀಸ್ ವಶಕ್ಕೆ, ಹಿರಿಯ ಅಧಿಕಾರಿಗಳ ದೌಡು

ಸುರತ್ಕಲ್: ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಕೊಲೆ ಮಾಡಿರುವ ಘಟನೆ ಚೊಕ್ಕಬೆಟ್ಟು ಮಠದ ಭಾನುವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿ ಆಗಿದೆ. ಕೊಲೆಯಾದ ವ್ಯಕ್ತಿಯನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಯಾಳು ಗ್ರಾಮದ ನಿವಾಸಿ ಹಾಗೂ ಚೊಕ್ಕಬೆಟ್ಟು ಮಠದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಈತನ ಅಣ್ಣ ಸೋಮನಾಥ್ (21) ಕೊಲೆ ಮಾಡಿರುವ ಆರೋಪಿ ಎನ್ನಲಾಗಿದ್ದು, ಆತನನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. […]

ಕೊಡಚಾದ್ರಿಗೆ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಕೊಡಚಾದ್ರಿಗೆ ಪ್ರವಾಸಕ್ಕೆ ಎಂದು ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪದ ಕಟ್ಟಿನಹೊಳೆಯಲ್ಲಿ ನಡೆದಿದೆ. ಮೃತ ಯುವ ಬೆಂಗಳೂರಿನ ಶ್ರೀಕಾಂತ್ (28) ಎಂದು ತಿಳಿದು ಬಂದಿದೆ. ಶ್ರೀಕಾಂತ್ ತನ್ನ ಸ್ನೇಹಿತರ ಜತೆಗೆ ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದು, ಸಂಪೇಕಟ್ಟೆ ಸಮೀಪದ ಕಟ್ಟಿನಹೊಳೆಯಲ್ಲಿರುವ ಸ್ನೇಹಿತರ ಮನೆಯಲ್ಲಿ ತಂಗಿದ್ದರು. ಶನಿವಾರ ಕೊಡಚಾದ್ರಿ ಶಿಖರ ವೀಕ್ಷಣೆಗೆ ತೆರಳಲು ಯೋಜನೆ ರೂಪಿಸಿದ್ದರು ಎಂದು ತಿಳಿದು ಬಂದಿದೆ. Related posts: ಮಂಗಳೂರು: ಮನೆ ಮೇಲೆ ಕುಸಿದು ಬಿದ್ದ […]

health

ಕ್ರಿಮ್ಸ್‌ಗೆ 200 ಎಂಬಿಬಿಎಸ್ ಸೀಟುಗಳ ಅನುಮೋದನೆ: 2026-27 ರಿಂದ ಹೆಚ್ಚುವರಿ ಪ್ರವೇಶ, ಹೊಸ ಆರೋಗ್ಯ ವಿಜ್ಞಾನ ಕೋರ್ಸ್‌

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್)ಗೆ ಮಹತ್ವದ ಉತ್ತೇಜನ ದೊರೆತಿದ್ದು, 2026-27ನೇ ಶೈಕ್ಷಣಿಕ ವರ್ಷದಿಂದ ಒಟ್ಟು 200 ಎಂಬಿಬಿಎಸ್ ಸೀಟುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ), ನವದೆಹಲಿಯಿಂದ ಅನುಮೋದನೆ ಲಭಿಸಿದೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕಿ ಡಾ. ಪೂರ್ಣಿಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈವರೆಗೆ ಕ್ರಿಮ್ಸ್‌ಗೆ 150 ಎಂಬಿಬಿಎಸ್ ಸೀಟುಗಳಿಗೆ ಮಾತ್ರ ಅನುಮತಿ ಇದ್ದು, ಇದೀಗ ಹೆಚ್ಚುವರಿ 50 ಸೀಟುಗಳನ್ನು ಮಂಜೂರು ಮಾಡಲಾಗಿದೆ. ಇದರಿಂದ ಮುಂದಿನ […]

Sports

ರಾಷ್ಟ್ರ ಮಟ್ಟಕ್ಕೆ ವೀ ವನ್ ಅಕ್ವಾ ಕೇಂದ್ರದ ಈಜುಪಟುಗಳ ಆಯ್ಕೆ

ಮಂಗಳೂರು: ಬೆಂಗಳೂರಿನ ಬಸವನಗುಡಿ ಈಜು ಕೇಂದ್ರದಲ್ಲಿ ಜುಲೈ 13ರಿಂದ 16ರವರೆಗೆ ಕರ್ನಾಟಕ ರಾಜ್ಯ ಈಜು ಸಂಸ್ಥೆ ಹಾಗೂ ಬಸವನಗುಡಿ ಈಜು ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಡೆದ ಎನ್‌ಆರ್‌ಜೆ ರಾಜ್ಯ ಜೂನಿಯರ್ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವೀ ವನ್ ಅಕ್ವಾ ಕೇಂದ್ರದ ಈಜುಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಹಲವು ಪದಕಗಳನ್ನು ಗೆದ್ದಿರುವ ಈಜುಪಟುಗಳು ಆಗಸ್ಟ್‌ನಲ್ಲಿ ಭುವನೇಶ್ವರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಈಜು ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಸ್ಪರ್ಧೆಯಲ್ಲಿ ಅಲಿಸಾ ಸ್ವೀಡೆಲ್ ರೇಗೊ ಆರು ಚಿನ್ನ ಹಾಗೂ ಕಂಚಿನ ಪದಕ ಗೆದ್ದು […]

ಅಥ್ಲೀಟ್ ಶಿವಾಜಿ ಸಾಧನೆ ಕ್ರೀಡಾಪಟುಗಳಿಗೆ ಸ್ಫೂರ್ತಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ನ್ಯೂಜೆರ್ಸಿ: ಎಕ್ಸ್‌ಟ್ರಾ ಟೈಮ್‌ನಲ್ಲಿ ಸ್ಪೇನ್‌ಗೆ ವಿಶ್ವಕಪ್ ಕಿರೀಟ; ಅರ್ಜೆಂಟೀನಾ ವಿರುದ್ಧ 1–0 ಗೋಲುಗಳ ರೋಚಕ ಜಯ

40 ನೇ ವಯಸ್ಸಿನಲ್ಲಿ ಈಜು ಕಲಿತು, ಇಂಗ್ಲಿಷ್ ಚಾನೆಲ್ ಈಜಿದ ಮೊದಲ ಮಂಗಳೂರಿಗನಾಗಿರುವದು ನನಗೆ ಹೆಮ್ಮೆ: ಡಾ. ಗುರುಪ್ರಸಾದ್

ಹೊರ ಜಿಲ್ಲೆಗಳಿಂದ ರೋಗಿಗಳ ಶಿಫಾರಸು ಮಾಡುವಾಗ ಹೆಲ್ಪ್ ಡೆಸ್ಕ್ ಸಂಪರ್ಕಿಸಿ, ನಂತರ ಪರದಾಟ ಬೇಡ, ದ.ಕ. ಜಿಲ್ಲೆಯ ರೋಗಿಗಳಿಗೂ ವೆನ್ಲಾಕ್ ಆಸ್ಪತ್ರೆ ಸೌಲಭ್ಯ ಸಿಗಲಿ: ಅಧೀಕ್ಷಕ ಡಾ. ಶಿವಪ್ರಕಾಶ್

ಮಂಗಳೂರಿನಲ್ಲಿ ಅಗಸ್ಟ್ 2 ರಿಂದ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್‌ ಷಿಪ್ ಹಬ್ಬ: ಡಾ. ಅಮರಶ್ರೀ ಅಮರನಾಥ ಶೆಟ್ಟಿ