Sunday, September 13, 2026
BREAKING NEWS

state

ಪ್ರಜಾಸೇವೆ ಮೂಲಕ ಜನರ ಮನೆಬಾಗಿಲಿಗೆ ಆಡಳಿತ: ಶಾಸಕ ಭೀಮಣ್ಣ ನಾಯ್ಕ

ಸಿದ್ದಾಪುರ: ಸರ್ಕಾರದ ಜನಪರ ಯೋಜನೆಗಳು ಕೇವಲ ದಾಖಲೆಗಳಲ್ಲಿ ಉಳಿಯದೆ, ಬಡವರು ಹಾಗೂ ಸಾಮಾನ್ಯ ಜನರ ಬದುಕಿನಲ್ಲಿ ನೈಜ ಬದಲಾವಣೆ ತರುವಂತಿರಬೇಕು. ಸರ್ಕಾರದ ಯೋಜನೆಗಳು ಜನರ ಜೀವನಕ್ಕೆ ಬೆಳಕು ನೀಡಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ದಾಪುರ ತಾಲ್ಲೂಕಿನ ಹಲಿಗೇರಿ ಹೋಬಳಿಯಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ‘ಪ್ರಜಾಸೇವೆ ಆಂದೋಲನ’ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದ ಯೋಜನೆಗಳು ಹಾಗೂ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ‘ಪ್ರಜಾಸೇವೆ’ ಆಂದೋಲನ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ಜನರು ಎದುರಿಸುತ್ತಿರುವ […]

ಕರಾವಳಿ ಕರ್ನಾಟಕದ ನಾವೀನ್ಯತೆಗೆ ‘ಎಸಿಐಸಿ ಸಹ್ಯಾದ್ರಿ’ ಉದ್ಘಾಟಿಸಿದ ಕ್ಯಾ. ಗಣೇಶ್ ಕಾರ್ಣಿಕ್

ಮಂಗಳೂರು:ಕರಾವಳಿ ಕರ್ನಾಟಕದ ತಳಮಟ್ಟದ ಆವಿಷ್ಕಾರಕರು, ಉದ್ಯಮಿಗಳು ಹಾಗೂ ನವೋದ್ಯಮಗಳಿಗೆ ಕಲ್ಪನೆಯ ಹಂತದಿಂದ ವಾಣಿಜ್ಯೀಕರಣದವರೆಗೆ ಅಗತ್ಯ ಬೆಂಬಲ ಒದಗಿಸುವ ‘ಎಸಿಐಸಿ ಸಹ್ಯಾದ್ರಿ ಫೌಂಡೇಶನ್’ ಅನ್ನು ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ಆರಂಭಿಸಲಾಯಿತು. ಭಾರತ ಸರ್ಕಾರದ ನೀತಿ ಆಯೋಗದ ಅಟಲ್ ಇನ್ನೋವೇಶನ್ ಮಿಷನ್‌ನ ಬೆಂಬಲದೊಂದಿಗೆ ಸ್ಥಾಪನೆಯಾಗಿರುವ ಅಟಲ್ ಸಮುದಾಯ ನಾವೀನ್ಯತೆ ಕೇಂದ್ರವು ಕರಾವಳಿ ಭಾಗದಲ್ಲಿ ನಾವೀನ್ಯತೆ, ಉದ್ಯಮಶೀಲತೆ ಹಾಗೂ ಸುಸ್ಥಿರ ಜೀವನೋಪಾಯಗಳನ್ನು ಉತ್ತೇಜಿಸುವ ಗುರಿ ಹೊಂದಿದೆ. ಎಸಿಐಸಿ ಸೌಲಭ್ಯದ ಉದ್ಘಾಟನೆಯ ಬಳಿಕ ಸಹ್ಯಾದ್ರಿಯ ನಾವೀನ್ಯತಾ ಮೂಲಸೌಕರ್ಯಗಳಾದ ‘ವಿಕಾನ್ […]

District News

ಪ್ರಜಾಸೇವೆ ಮೂಲಕ ಜನರ ಮನೆಬಾಗಿಲಿಗೆ ಆಡಳಿತ: ಶಾಸಕ ಭೀಮಣ್ಣ ನಾಯ್ಕ

ಸಿದ್ದಾಪುರ: ಸರ್ಕಾರದ ಜನಪರ ಯೋಜನೆಗಳು ಕೇವಲ ದಾಖಲೆಗಳಲ್ಲಿ ಉಳಿಯದೆ, ಬಡವರು ಹಾಗೂ ಸಾಮಾನ್ಯ ಜನರ ಬದುಕಿನಲ್ಲಿ ನೈಜ ಬದಲಾವಣೆ ತರುವಂತಿರಬೇಕು. ಸರ್ಕಾರದ ಯೋಜನೆಗಳು ಜನರ ಜೀವನಕ್ಕೆ ಬೆಳಕು ನೀಡಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ದಾಪುರ ತಾಲ್ಲೂಕಿನ ಹಲಿಗೇರಿ ಹೋಬಳಿಯಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ‘ಪ್ರಜಾಸೇವೆ ಆಂದೋಲನ’ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದ ಯೋಜನೆಗಳು ಹಾಗೂ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ‘ಪ್ರಜಾಸೇವೆ’ ಆಂದೋಲನ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ಜನರು ಎದುರಿಸುತ್ತಿರುವ […]

crime

3 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಮಂಗಳೂರು ಸಿಸಿಬಿ ಪೊಲೀಸರಿಂದ ಖೆಡ್ಡಾ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (ಎನ್‌ಸಿಐಬಿ) ಅಧಿಕಾರಿ ಎಂದು ಸುಳ್ಳು ಪರಿಚಯಿಸಿಕೊಂಡು ವಂಚನೆ ಹಾಗೂ ಸುಲಿಗೆ ನಡೆಸಿದ ಪ್ರಕರಣದಲ್ಲಿ ಬಂಧಿತನಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಲ್ಲಂ ಜಿಲ್ಲೆಯ ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ ಅಲಿಯಾಸ್ ಆಂಟನಿ (64) ಬಂಧಿತ ಆರೋಪಿ. ಆರೋಪಿಯು ತನ್ನದೇ ತಂಡ ರಚಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸುತ್ತಿದ್ದ. ಹಣಕಾಸು ವಿವಾದ, ಬ್ಯಾಂಕ್ […]

ಭೂತನಾಳ ಕೆರೆಯಲ್ಲಿ ತಾಯಿ, ಐವರು ಮಕ್ಕಳ ಶವ ಪತ್ತೆ

ವಿಜಯಪುರ: ಆ.24 ರಿಂದ ನಾಪತ್ತೆ ಆಗಿದ್ದ ತಾಯಿ ಹಾಗೂ ಐದು ಮಂದಿ ಮಕ್ಕಳ ಮೃತದೇಹಗಳು ನಗರದ ಹೊರವಲಯದ ಭೂತನಾಳ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆ ಆಗಿವೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ವಿಜಯಪುರ ತಾಲ್ಲೂಕಿನ ತೊರವಿ ಗ್ರಾಮದ ಮಲಕಾರಿ ಭೀಮರಾಯ ಜಾಲಗೇರಿ ಅವರ ಪತ್ನಿ ಶೋಭಾ ಜಾಲಗೇರಿ (45), ಮಕ್ಕಳಾದ ವಿದ್ಯಾ (16), ಸುವರ್ಣ (14), ಗೌಡೇಶ್ (10), ಸಾನಿಕಾ (7) ಹಾಗೂ ವಿಕಾಸ […]

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ವಶಕ್ಕೆ, ನ್ಯಾಯಾಲಯ ಆದೇಶ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಗುಂಡಿನ ದಾಳಿ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶ ನೀಡಿದೆ. ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಬಂಧಿತ ಆರೋಪಿಗಳು. ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರನ್ನೂ ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. […]

health

ಲೇಡಿಗೋಷನ್ ಆಸ್ಪತ್ರೆಗೆ ಶುದ್ಧೀಕೃತ ಜಲ ಪೂರಣ ಉಪಕರಣ ಕೊಡುಗೆ, ಮಹಿಳೆಯರ ಸ್ವಾಸ್ಥ್ಯ ಆರೋಗ್ಯಕ್ಕೆ ಸಹಕಾರಿ: ಡಾ. ದುರ್ಗಾಪ್ರಸಾದ್

ಮಂಗಳೂರು: ಆರೋಗ್ಯ ಸೇವೆ ಪಡೆಯಲು ಲೇಡಿಗೋಷನ್ ಆಸ್ಪತ್ರೆಗೆ ಆಗಮಿಸುವ ಮಹಿಳೆಯರಿಗೆ ಶುದ್ಧ ಕುಡಿಯುವ ನೀರು ಲಭ್ಯವಾಗುವಂತೆ ಸಮಾಜ ಸೇವಾ ಚಿಂತಕ ಗೆಳೆಯರ ಬಳಗದ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುದ್ಧೀಕೃತ ಜಲ ಪೂರಣ ಉಪಕರಣವನ್ನು ಕೊಡುಗೆಯಾಗಿ ನೀಡಲಾಯಿತು. ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಅಳವಡಿಸಲಾಗಿರುವ ಸುಮಾರು 80 ಲೀಟರ್ ಸಾಮರ್ಥ್ಯದ ತ್ರಿ-ಇನ್-ಒನ್ ಶುದ್ಧೀಕೃತ ಜಲ ಮರುಪೂರಣ ಉಪಕರಣವನ್ನು ಸಾರ್ವಜನಿಕರ ಬಳಕೆಗೆ ಸಮರ್ಪಿಸಲಾಯಿತು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ.ಆರ್ ಅವರು ಮಾತನಾಡಿ, ಇಂತಹ ಕ್ರಿಯಾತ್ಮಕ ಹಾಗೂ […]

Sports

Giridhar Salian: ಜಾವಲಿನ್‌ ಹಿಡಿದು ಗೆಲುವಿನೆಡೆಗೆ ಗಿರಿಧರ್ ಸಾಲಿಯಾನ್, ಇಂದು ವಿಶ್ವ ವೇದಿಕೆಯಲ್ಲಿ ಪದಕಗಳ ಬೇಟೆ

ಮಂಗಳೂರು: ಕ್ರೀಡಾಂಗಣದಲ್ಲಿ ಓಡಿ, ಜಿಗಿದು ಗೆಲ್ಲಬೇಕೆಂಬ ಕನಸು ಕಂಡಿದ್ದ ಗಿರಿಧರ್ ಸಾಲಿಯಾನ್ ಅವರ ಬದುಕಿನಲ್ಲಿ ಒಂದು ಗಾಯ ಎಲ್ಲವನ್ನೂ ಬದಲಿಸಿತ್ತು. ಕಬಡ್ಡಿ ಆಡುವ ವೇಳೆ ಸಂಭವಿಸಿದ ಅಪಘಾತದಲ್ಲಿ ಕಾಲಿನ ಒಂದಲ್ಲ, ಮೂರು ಮೂಳೆಗಳು ಮುರಿದವು. ಕ್ರೀಡೆಯಿಂದ ದೂರ ಉಳಿಯಬೇಕೆಂಬ ವೈದ್ಯರ ಸಲಹೆ ಅವರ ಮುಂದಿನ ಹಾದಿಯನ್ನು ಕತ್ತಲೆಯಾಗಿಸಿತ್ತು. ಆದರೆ, ಕ್ರೀಡಾಪಟುವಿನ ಮನಸ್ಸಿನಲ್ಲಿದ್ದ ಗೆಲ್ಲುವ ಹಂಬಲ ಮಾತ್ರ ಮುರಿಯಲಿಲ್ಲ. ಉದ್ದ ಜಿಗಿತ ಮತ್ತು ಎತ್ತರ ಜಿಗಿತದಲ್ಲಿ ಶಾಲಾ ದಿನಗಳಿಂದಲೇ ಸಾಧನೆ ಮಾಡುತ್ತಿದ್ದ ಗಿರಿಧರ್, ಗಾಯದ ಬಳಿಕ ಜಿಗಿತದ ಕ್ರೀಡೆಗಳಿಂದ […]