Tuesday, September 01, 2026
BREAKING NEWS

state

ಪಶ್ಚಿಮ ವಲಯದ ಸಾರಥ್ಯ ಆರ್. ಚೇತನ್ ಹೆಗಲಿಗೆ, ಬ್ಯಾಟನ್ ಹಸ್ತಾಂತರ, ಅಧಿಕಾರ ಸ್ವೀಕಾರ

ಮಂಗಳೂರು: ಪಶ್ಚಿಮ ವಲಯದ ನೂತನ ಪೊಲೀಸ್ ಮಹಾ ನಿರೀಕ್ಷಕರಾಗಿ ಐಪಿಎಸ್ ಅಧಿಕಾರಿ ಆರ್. ಚೇತನ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿ ಅಮಿತ್ ಸಿಂಗ್ ಅವರು, ಸಾಂಪ್ರದಾಯಿಕವಾಗಿ ಪೊಲೀಸ್ ಇಲಾಖೆಯ ಬ್ಯಾಟನ್ ಅನ್ನು ಹಸ್ತಾಂತರಿಸುವ ಮೂಲಕ ಆರ್. ಚೇತನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬಳಿಕ ನೂತನ ಪೊಲೀಸ್ ಮಹಾನಿರೀಕ್ಷಕ ಆರ್. ಚೇತನ್ ಅವರು ಅಧಿಕಾರ ವಹಿಸಿಕೊಂಡು ಪಶ್ಚಿಮ ವಲಯದ ಪೊಲೀಸ್ ಆಡಳಿತದ ಜವಾಬ್ದಾರಿಯನ್ನು […]

ಕಾರವಾರ–ಮಲ್ಲಾಪುರ ರಸ್ತೆಯಲ್ಲಿ 30 ಟನ್‌ಗೂ ಅಧಿಕ ಭಾರದ ವಾಹನಗಳ ಸಂಚಾರ ನಿಷೇಧ: ಡಿಸಿ ಲಕ್ಷ್ಮೀಪ್ರಿಯಾ ಆದೇಶ

ಕಾರವಾರ: ತಾಲೂಕಿನ ರಾಜ್ಯ ಹೆದ್ದಾರಿ 6ರ ಕಾರವಾರ–ದೇವಳಮಕ್ಕಿ–ಕೆರವಾಡಿ–ಬೋಳ್ವೆ–ಇರಪಾಗೆ–ಮಲ್ಲಾಪುರ ರಸ್ತೆಯಲ್ಲಿ 30 ಟನ್‌ಗಿಂತ ಹೆಚ್ಚಿನ ಭಾರವುಳ್ಳ ಸರಕು ಹಾಗೂ ಬೃಹತ್ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ. ಬೃಹತ್ ಹಾಗೂ ಅಧಿಕ ಭಾರದ ವಾಹನಗಳ ನಿರಂತರ ಸಂಚಾರದಿಂದ ರಸ್ತೆಯಲ್ಲಿ ದೊಡ್ಡ ಪ್ರಮಾಣದ ಗುಂಡಿಗಳು ಉಂಟಾಗಿ ರಸ್ತೆ ಹಾಳಾಗಿದೆ. ಇದರಿಂದ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳ ಸುರಕ್ಷತೆಗೆ ಅಪಾಯ ಎದುರಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. […]

District News

ಬಹುಕಾಲದಿಂದ ನನೆಗುದಿಗೆ ಬಿದ್ದಿರುವ ಮೂಡಾ ಮಾಸ್ಟರ್ ಪ್ಲಾನ್‌ಗೆ ಮೊದಲ ಆದ್ಯತೆ: ನೂತನ ಮೂಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ

ಮಂಗಳೂರು: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಸಂತೋಷ್ ಕುಮಾರ್ ಶೆಟ್ಟಿ ಅವರು, ಬಹುಕಾಲದಿಂದ ನನೆಗುದಿಗೆ ಬಿದ್ದಿರುವ ಮೂಡಾ ಮಾಸ್ಟರ್ ಪ್ಲಾನ್‌ಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸೋಮವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮಾಸ್ಟರ್ ಪ್ಲಾನ್‌ಗೆ ಸಂಬಂಧಿಸಿದ ಸಣ್ಣಪುಟ್ಟ ತೊಡಕುಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ಶೀಘ್ರವೇ ಯೋಜನೆಯನ್ನು ಅಂತಿಮಗೊಳಿಸಲು ಪ್ರಯತ್ನಿಸಲಾಗುವುದು ಎಂದರು. ಮೂಡಾ ಕೇವಲ ನಿವೇಶನಗಳ ಹಂಚಿಕೆಗೆ ಸೀಮಿತವಾಗಬಾರದು. ಬದಲಾಗಿ ಮಂಗಳೂರು ನಗರದ ಸಮಗ್ರ […]

crime

ಭೂತನಾಳ ಕೆರೆಯಲ್ಲಿ ತಾಯಿ, ಐವರು ಮಕ್ಕಳ ಶವ ಪತ್ತೆ

ವಿಜಯಪುರ: ಆ.24 ರಿಂದ ನಾಪತ್ತೆ ಆಗಿದ್ದ ತಾಯಿ ಹಾಗೂ ಐದು ಮಂದಿ ಮಕ್ಕಳ ಮೃತದೇಹಗಳು ನಗರದ ಹೊರವಲಯದ ಭೂತನಾಳ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆ ಆಗಿವೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ವಿಜಯಪುರ ತಾಲ್ಲೂಕಿನ ತೊರವಿ ಗ್ರಾಮದ ಮಲಕಾರಿ ಭೀಮರಾಯ ಜಾಲಗೇರಿ ಅವರ ಪತ್ನಿ ಶೋಭಾ ಜಾಲಗೇರಿ (45), ಮಕ್ಕಳಾದ ವಿದ್ಯಾ (16), ಸುವರ್ಣ (14), ಗೌಡೇಶ್ (10), ಸಾನಿಕಾ (7) ಹಾಗೂ ವಿಕಾಸ […]

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ವಶಕ್ಕೆ, ನ್ಯಾಯಾಲಯ ಆದೇಶ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಗುಂಡಿನ ದಾಳಿ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶ ನೀಡಿದೆ. ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಬಂಧಿತ ಆರೋಪಿಗಳು. ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರನ್ನೂ ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. […]

ಗ್ರಾ.ಪಂ, ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ, ಆರೋಪಿಗಳು ಪರಾರಿ,ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡು

ಪಡುಬಿದ್ರೆ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ (55) ಎಂಬುವವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮುದರಂಗಡಿ ಎಂಬಲ್ಲಿ ನಡೆದಿದೆ. ಮುದರಂಗಡಿ ಗ್ರಾಮದ ಪಿಲಾರು ನಿವಾಸಿ ಡೇವಿಡ್ ಡಿಸೋಜ, ಮುದರಂಗಡಿಯಲ್ಲಿರುವ ಕಚೇರಿಯಿಂದ ಹತ್ತಿರ ಮುದರಂಗಡಿ ಸಂತ್ ಫ್ರಾನ್ಸಿಸ್ ಜೆವಿಯರ್ ಚರ್ಚ್‌ನ ಎದುರು ನಿಲ್ಲಿಸಿದ್ದ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿ ಪರಾರಿ ಆಗಿದ್ದಾರೆ. ಗಂಭೀರ ಗಾಯಗೊಂಡಿದ್ದ […]

health

ಮಣಿಪಾಲ ಆರೋಗ್ಯ ಕಾರ್ಡ್ ಲಾಭ ವಿಫುಲ, ನೋಂದಣಿಗೆ ಅಗಸ್ಟ್ 31 ಕೊನೆ ದಿನ: ಡಾ. ದಿಲೀಪ್ ನಾಯಕ್

ಮಂಗಳೂರು: ಕೈಗೆಟುಕುವ ದರದಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಪಡೆಯಲು ನೆರವಾಗುವ ಮಣಿಪಾಲ ಆರೋಗ್ಯ ಕಾರ್ಡ್ 2026ರ ನೋಂದಣಿಗೆ ಆ.31 ಕೊನೆಯ ದಿನವಾಗಿದೆ. ಕರ್ನಾಟಕ ಹಾಗೂ ಕೇರಳದ ಸುಮಾರು 6.5 ಲಕ್ಷ ಮಂದಿ ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದು, ಸಾರ್ವಜನಿಕರು ನಿಗದಿತ ಅವಧಿಯೊಳಗೆ ಸದಸ್ಯತ್ವ ಪಡೆದುಕೊಳ್ಳುವಂತೆ ಮಾಹೆ ಮಂಗಳೂರು ಕ್ಯಾಂಪಸ್‌ನ ಸಹ-ಕುಲಾಧಿಪತಿ ಡಾ. ದಿಲೀಪ್ ಜಿ. ನಾಯಕ್ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಮಾಜದ ಎಲ್ಲ ವರ್ಗಗಳಿಗೂ, ಅದರಲ್ಲೂ ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ತಲುಪಿಸುವ […]

Sports

ಬಿಸಲಕೊಪ್ಪ ವಲಯ ಮಟ್ಟದ ಕ್ರೀಡಾಕೂಟಕ್ಕೆ ಬಿಇಒ ಎಂ.ಎಚ್. ನಾಯ್ಕ್ ಚಾಲನೆ

ಸಿರಸಿ: ಕ್ರೀಡಾಕೂಟಗಳು ಮಕ್ಕಳಲ್ಲಿ ಕ್ರೀಡಾ ಪ್ರತಿಭೆಯ ಜತೆಗೆ ಶಿಸ್ತು, ಸಮಯಪ್ರಜ್ಞೆ ಹಾಗೂ ತಂಡದ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ್ ಹೇಳಿದರು. ಬಿಸಲಕೊಪ್ಪದಲ್ಲಿ 2026-27ನೇ ಸಾಲಿನ 14 ವರ್ಷ ವಯೋಮಾನದೊಳಗಿನವರ ವಲಯ ಮಟ್ಟದ ಕ್ರೀಡಾಕೂಟಕ್ಕೆ ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಸಮೂಹ ಸಂಪನ್ಮೂಲ ಕೇಂದ್ರ ದಮನಬೈಲ್‌ನ ನೇತೃತ್ವ ಹಾಗೂ ಸಂಘಟನೆಯಲ್ಲಿ ಕ್ರೀಡಾಕೂಟ ಅಚ್ಚುಕಟ್ಟಾಗಿ ನಡೆಯಿತು. ಶಿರಸಿ […]