Monday, June 08, 2026
BREAKING NEWS

state

ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲಿ: ಡಾ. ಎಂ.ಬಿ. ಪುರಾಣಿಕ್

ತಲಪಾಡಿ: ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಆಯೋಜಿಸಿದ್ದ ಓರಿಯೆಂಟೇಶನ್ ಕಾರ್ಯಕ್ರಮ ಭಾನುವಾರ ಶಾರದಾ ವಿದ್ಯಾನಿಕೇತನ ಕ್ಯಾಂಪಸ್‌ನ ಭೂವರಾಹ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್, ವಿದ್ಯಾರ್ಥಿಗಳು ಸಂಸ್ಥೆಯು ಒದಗಿಸುವ ವಿವಿಧ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡ ಅವರು, ಪೋಷಕರಿಗೆ ಗೌರವ […]

ಕರಿಕಾಡ ಖ್ಯಾತಿಯ ಕಾಡ ನಟರಾಜ್‌ಗೆ ಡಬಲ್ ಸಂಭ್ರಮ, ಜನ್ಮದಿನದಂದೇ ಅಭಿನಯಕ್ಕೆ ಮೆಚ್ಚುಗೆಯ ಮಳೆ

ಬೆಂಗಳೂರು:‘ ಕರಿಕಾಡ’ ಚಿತ್ರದ ಮೂಲಕ ಸಿನಿಪ್ರಿಯರ ಗಮನ ಸೆಳೆದಿರುವ ನಟ ಕಾಡ ನಟರಾಜ್ ಅವರಿಗೆ ಈ ಬಾರಿಯ ಜನ್ಮದಿನ ಡಬಲ್ ಖುಷಿ ತಂದಿದೆ. ಜೂನ್ 6ರಂದು ಜನ್ಮದಿನ ಆಚರಿಸಿಕೊಂಡ ನಟರಾಜ್, ತಮ್ಮ ಅಭಿನಯಕ್ಕೆ ದೊರೆಯುತ್ತಿರುವ ಮೆಚ್ಚುಗೆಯೇ ಈ ವರ್ಷದ ದೊಡ್ಡ ಉಡುಗೊರೆ ಎಂದು ಸಂತಸ ಹಂಚಿಕೊಂಡಿದ್ದಾರೆ. ಗಿಲ್ಲಿ ವೆಂಕಟೇಶ್ ನಿರ್ದೇಶನದ ‘ಕರಿಕಾಡ’ ಚಿತ್ರದಲ್ಲಿ ಶೀರ್ಷಿಕೆ ಪಾತ್ರದಲ್ಲಿ ನಟಿಸಿದ್ದ ಕಾಡ ನಟರಾಜ್, ಹಳ್ಳಿ ಯುವಕನ ಪಾತ್ರವನ್ನು ಸಹಜವಾಗಿ ನಿರ್ವಹಿಸಿ ಪ್ರೇಕ್ಷಕರ ಮನ ಗೆದ್ದಿದ್ದರು. ಚಿತ್ರ ಬಿಡುಗಡೆಯಾದಾಗಲೇ ಅವರ ಅಭಿನಯಕ್ಕೆ […]

District News

ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲಿ: ಡಾ. ಎಂ.ಬಿ. ಪುರಾಣಿಕ್

ತಲಪಾಡಿ: ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಆಯೋಜಿಸಿದ್ದ ಓರಿಯೆಂಟೇಶನ್ ಕಾರ್ಯಕ್ರಮ ಭಾನುವಾರ ಶಾರದಾ ವಿದ್ಯಾನಿಕೇತನ ಕ್ಯಾಂಪಸ್‌ನ ಭೂವರಾಹ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್, ವಿದ್ಯಾರ್ಥಿಗಳು ಸಂಸ್ಥೆಯು ಒದಗಿಸುವ ವಿವಿಧ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡ ಅವರು, ಪೋಷಕರಿಗೆ ಗೌರವ […]

crime

ವಿಜಯಪುರ: ಆಸ್ತಿ ವಿವಾದ ಒಂದೇ ಕುಟುಂಬದ 5 ಮಂದಿ, ಕೆಲಸದ ಆಳು ಬರ್ಬರ ಹತ್ಯೆ, ಬೆಚ್ಚಿ ಬಿದ್ದ ಜನರು

ವಿಜಯಪುರ: ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ ಜಮೀನು ವಿವಾದದ ಹಿನ್ನೆಲೆ ಈ ಕೊಲೆ ನಡೆದಿದೆ ಎನ್ನಲಾಗುತ್ತಿದ್ದು, ಒಂದೇ ಕುಟುಂಬದ 5 ಮಂದಿ ಹಾಗೂ ಒಬ್ಬ ಆಳು ಮನುಷ್ಯ ಸೇರಿದಂತೆ ಒಟ್ಟು 6 ಜನರ ಬರ್ಬರ ಹತ್ಯೆಗೆ ಬೆಚ್ಚಿ ಬೀಳುವಂತಾಗಿದೆ. ಹಂತಕರು ಗನ್‌ನಿಂದ ಫೈರಿಂಗ್ ಮಾಡಿ, ಭೀಕರವಾಗಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು, ಭೀಮಾತೀರದಲ್ಲಿ ಮತ್ತೆ ಹಳೆಯ ರಕ್ತಚರಿತ್ರೆಯ ಕರಾಳ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ […]

ಧರ್ಮಸ್ಥಳ: ವೃದ್ಧೆಗೆ ಪ್ರಸಾದ, ಜ್ಯೂಸ್ ನೀಡಿ ಅಸ್ವಸ್ಥ ಮಾಡಿ ಚಿನ್ನಾಭರಣ ಅಪಹರಣ

ಬೆಳ್ತಂಗಡಿ: ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ವೃದ್ದೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ಕೊಟ್ಟು ವೃದ್ಧೆಯನ್ನು ಅಸ್ವಸ್ಥರನ್ನಾಗಿ ಮಾಡಿ ಹತ್ತು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಅಪಹರಣ ಮಾಡಿ ಪರಾರಿ ಆಗಿರುವ ಘಟನೆ ನಡೆದಿದ್ದು, ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಜೆ.ಪಿ.ನಗರ ನಿವಾಸಿ ಪ್ರೇಮಾ.ಕೆ (70) ಎಂಬುವವರು ಮೇ 23 ರಂದು ಬೆಂಗಳೂರಿನಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಇರುವ ತನ್ನ ಚಿಕ್ಕಮ್ಮನ ಮಗಳ ಮನೆಗೆ ಪೂಜಾ ಕಾರ್ಯಕ್ರಮಕ್ಕೆ ಬಂದಿದ್ದರು. ಮೇ […]

ಕಲಬುರಗಿ: ಭೀಕರ ರಸ್ತೆ ಅಪಘಾತ, ಸ್ಥಳದಲ್ಲಿ ಒಂದೇ ಕುಟುಂಬದ ಐದು ಮಂದಿ ಸಾವು

ಕಲಬುರಗಿ: ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಹಾಗೂ ಫಾತೀಮಾ ಅಲಿ (38) ಎಂದು ಗುರುತಿಸಲಾಗಿದೆ. ಕುಟುಂಬದ ಸದಸ್ಯರು ಯಾದಗಿರಿಯಿಂದ ಮರಳಿ ಬರುವಾಗ ಈ ಘಟನೆ ನಡೆದಿದೆ. ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ […]

health

ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ರೋಗಿಗಳಿಗೆ ಆಯುಷ್ಮಾನ್ ಯೋಜನೆಯಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ: ಡಾ. ಮೋಹನ್ ಆಳ್ವ

ಮೂಡುಬಿದಿರೆ: ಹೃದಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಅರ್ಹ ರೋಗಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಅಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಲಭ್ಯವಿದ್ದು, ಬಿಪಿಎಲ್ ಕಾರ್ಡ್ ಹಾಗೂ ಆಯುಷ್ಮಾನ್ ಕಾರ್ಡ್ ಹೊಂದಿರುವವರು ಇದರ ಪ್ರಯೋಜನ ಪಡೆಯಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎದೆನೋವು, ಉಸಿರಾಟದ ತೊಂದರೆ, ಅತಿಯಾದ ದಣಿವು, ಹೃದಯ ಬಡಿತದ ಅಸಮಾನತೆ ಸೇರಿದಂತೆ ಹೃದಯ ಸಂಬಂಧಿತ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ […]

Sports

ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್‌ಗೆ ತೆರೆ: ಸರ್ಫಿಂಗ್ ಓಪನ್‌ನಲ್ಲಿ ಕಮಲಿ ಮೂರ್ತಿಗೆ ಡಬಲ್ ಕಿರೀಟ

ಮಂಗಳೂರು: ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಅಂತಿಮ ದಿನ ತಮಿಳುನಾಡಿನ ಯುವ ಸರ್ಫರ್ ಕಮಲಿ ಮೂರ್ತಿ ಮಹಿಳೆಯರ ಓಪನ್ ಹಾಗೂ 18 ವರ್ಷ ವಯೋಮಿತಿಯೊಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಡಬಲ್ ಸಾಧನೆ ಮಾಡಿದ್ದಾರೆ. ಪುರುಷರ ಓಪನ್ ವಿಭಾಗದಲ್ಲಿ ತಮಿಳುನಾಡಿನ ಕಿಶೋರ್ ಕುಮಾರ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, 18 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಥ್ವೀಪ್ ಪೂಜಾರ್ ಗೆದ್ದು ಕರ್ನಾಟಕಕ್ಕೆ ಟೂರ್ನಿಯ ಏಕೈಕ ಪ್ರಶಸ್ತಿ ತಂದುಕೊಟ್ಟರು. 14 ವರ್ಷದೊಳಗಿನ (ಗ್ರೋಮ್ಸ್) ವಿಭಾಗದಲ್ಲಿ ಹರೀಶ್ ಪಿ ಮತ್ತು ಧಮಯಂತಿ […]