Thursday, June 25, 2026
BREAKING NEWS

state

ಮುಂಗಾರು ಎಚ್ಚರಿಕೆ: ಉತ್ತರ ಕನ್ನಡ ಸೇರಿ 4 ಸೂಕ್ಷ್ಮ ಜಿಲ್ಲೆಗಳ ಉಸ್ತುವಾರಿ ಯು.ಟಿ. ಖಾದರ್‌ಗೆ, 13 ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಮುಂಗಾರು ಮಳೆ ಹಾಗೂ ಸಂಭವನೀಯ ನೈಸರ್ಗಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ವಿವಿಧ ಜಿಲ್ಲೆಗಳಿಗೆ ಸಚಿವರನ್ನು ಪ್ರಕೃತಿ ವಿಕೋಪ ಉಸ್ತುವಾರಿಗಳಾಗಿ ನೇಮಿಸಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅತಿ ಹೆಚ್ಚು ಮಳೆ ಹಾಗೂ ಪ್ರಕೃತಿ ವಿಕೋಪಗಳಿಗೆ ತುತ್ತಾಗುವ ಸೂಕ್ಷ್ಮ ಪ್ರದೇಶಗಳ ಪೈಕಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯನ್ನು ಸಚಿವ ಯು.ಟಿ. ಖಾದರ್ ಫರೀದ್ ಅವರಿಗೆ ವಹಿಸಲಾಗಿದೆ. ಇದರ ಜೊತೆಗೆ ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ […]

ಎಂಸಿಸಿ ಬ್ಯಾಂಕ್ ನ ದೇರಳಕಟ್ಟೆ, ಕಟಪಾಡಿ ಮತ್ತೇರಡು ಹೊಸ ಶಾಖೆ ಗ್ರಾಹಕರಿಗೆ ಲೋಕಾರ್ಪಣೆ: ಅನಿಲ್ ಲೋಬೊ

ಮಂಗಳೂರು: 114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಹಣಕಾಸು ವರ್ಷದಲ್ಲಿ 1,535 ಕೋಟಿ ರೂ.ಗಳ ಒಟ್ಟು ವ್ಯವಹಾರ ವಹಿವಾಟು ದಾಖಲಿಸಿ ಹೊಸ ಮೈಲುಗಲ್ಲು ಸಾಧಿಸಿದೆ. ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆಯಲ್ಲಿ ಜೂನ್ 28 ರಂದು ಹಾಗೂ 23 ನೇ ಶಾಖೆ ಉಡುಪಿಯ ಕಟಪಾಡಿಯಲ್ಲಿ ಅಗಸ್ಟ್ 2 ರಂದು ಉದ್ಘಾಟನೆಯಾಗಲಿದೆ ಎಂದು ಬುಧವಾರ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅವರು ತಿಳಿಸಿದರು. ಬ್ಯಾಂಕ್ ಒಟ್ಟು ವ್ಯವಹಾರ ವಹಿವಾಟು ಶೇ.22.89ರಷ್ಟು ಏರಿಕೆಯಾಗಿದೆ ಎಂದು […]

District News

ಮುಂಗಾರು ಎಚ್ಚರಿಕೆ: ಉತ್ತರ ಕನ್ನಡ ಸೇರಿ 4 ಸೂಕ್ಷ್ಮ ಜಿಲ್ಲೆಗಳ ಉಸ್ತುವಾರಿ ಯು.ಟಿ. ಖಾದರ್‌ಗೆ, 13 ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಮುಂಗಾರು ಮಳೆ ಹಾಗೂ ಸಂಭವನೀಯ ನೈಸರ್ಗಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ವಿವಿಧ ಜಿಲ್ಲೆಗಳಿಗೆ ಸಚಿವರನ್ನು ಪ್ರಕೃತಿ ವಿಕೋಪ ಉಸ್ತುವಾರಿಗಳಾಗಿ ನೇಮಿಸಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅತಿ ಹೆಚ್ಚು ಮಳೆ ಹಾಗೂ ಪ್ರಕೃತಿ ವಿಕೋಪಗಳಿಗೆ ತುತ್ತಾಗುವ ಸೂಕ್ಷ್ಮ ಪ್ರದೇಶಗಳ ಪೈಕಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯನ್ನು ಸಚಿವ ಯು.ಟಿ. ಖಾದರ್ ಫರೀದ್ ಅವರಿಗೆ ವಹಿಸಲಾಗಿದೆ. ಇದರ ಜೊತೆಗೆ ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ […]

crime

ಕಡಬ: ಪತಿ, ಪತ್ನಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ಅನಾಥವಾದ ಮಗು, ಸ್ಥಳಕ್ಕೆ ಪೊಲೀಸರ ದೌಡು

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಆಲಂಕಾರು ಕಜೆ ಎಂಬಲ್ಲಿ ದಂಪತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಆಗಿದ್ದು, ದಂಪತಿ ಎರಡು ವರ್ಷದ ಹೆಣ್ಣು ಮಗು ಮನೆಯಲ್ಲಿ ಅನಾಥ ಸ್ಥಿತಿಯಲ್ಲಿ ಪತ್ತೆ ಆಗಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಪತ್ನಿ ಕೊಲೆ ಮಾಡಿದ ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಮೃತರನ್ನು ಬಜಗೋಳಿ ದಿನೇಶ್ ಹಾಗೂ ಪತ್ನಿ ಸಂಗೀತಾ ಎಂದು ಗುರುತಿಸಲಾಗಿದೆ. ಈ ದಂಪತಿ ಎರಡು ವರ್ಷದ ಹೆಣ್ಣು ಮಗುವಿನ […]

ಜೋಯಿಡಾ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ಭೀಕರ ಡಿಕ್ಕಿ; 10 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

ಕಾರವಾರ( ಜೋಯಿಡಾ): ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪೋಲಿ ಸಮೀಪ ಗುರುವಾರ ಬೆಳಿಗ್ಗೆ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣ ಆಗಿದ್ದು, ಕಾರವಾರ–ಜೋಯಿಡಾ ರಸ್ತೆಯ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು. ಉಳವಿ–ಇಚಲಕರಂಜಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೆಳಗಾವಿ–ಕಾರವಾರ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಚಾಪೋಲಿ ಸಮೀಪ ಈ ಅಪಘಾತ ಸಂಭವಿಸಿದೆ. ಡಿಕ್ಕಿ ತೀವ್ರತೆಗೆ ಎರಡೂ ಬಸ್‌ಗಳ ಮುಂಭಾಗ […]

ಹನಿಟ್ರ್ಯಾಪ್‌ ಹೆಸರಿನಲ್ಲಿ 2.57 ಕೋಟಿ ವಸೂಲಿ: ಉರ್ವ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರ ಬಂಧನ

ಮಂಗಳೂರು: ಗುತ್ತಿಗೆದಾರರೊಬ್ಬರನ್ನು ಹನಿಟ್ರ್ಯಾಪ್‌ ಮಾಡಿ ಅಶ್ಲೀಲ ವಿಡಿಯೊ ಹಾಗೂ ಫೋಟೊಗಳ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೇರಿ ಇಬ್ಬರನ್ನು ಉರ್ವ ಪೊಲೀಸರು ಬಂಧನ ಮಾಡಿದ್ದಾರೆ. ಗುತ್ತಿಗೆದಾರರ ಜತೆಗೆ ಕೆಲಸ ಮಾಡುತ್ತಿದ್ದ ಜಿತೇಶ್ ಹಾಗೂ ನಿಜಾಮ್ ಯಾನೆ ಇಬ್ರಾಹಿಂ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಿಜಾಮ್ ಅವರನ್ನು ಯುವ ಕಾಂಗ್ರೆಸ್ ಹುದ್ದೆಯಿಂದ ವಜಾ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಗುತ್ತಿಗೆದಾರನೊಂದಿಗೆ […]

health

ಅತ್ತಾವರ ಕೆಎಂಸಿ ಆಸ್ಪತ್ರೆಗೆ ಎನ್‌ಎಬಿಎಚ್ 6 ನೇ ಆವೃತ್ತಿಯ ಪ್ರತಿಷ್ಠಿತ ಮಾನ್ಯತೆ

ಮಂಗಳೂರು: ಇಲ್ಲಿನ ಅತ್ತಾವರ ಕೆಎಂಸಿ ಆಸ್ಪತ್ರೆ ಗುಣಮಟ್ಟ ಮತ್ತು ರೋಗಿಗಳ ಸುರಕ್ಷತೆಗೆ ಸಂಬಂಧಿಸಿದ ಎನ್‌ಎಬಿಎಚ್ (ನ್ಯಾಷನಲ್ ಅಕ್ರೆಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಅಂಡ್ ಹೆಲ್ತ್‌ಕೇರ್ ಪ್ರೊವೈಡರ್ಸ್) 6 ನೇ ಆವೃತ್ತಿಯ ಮಾನದಂಡಗಳ ಅಡಿಯಲ್ಲಿ ಪ್ರತಿಷ್ಠಿತ ಮಾನ್ಯತೆ ಪಡೆದುಕೊಂಡಿದೆ. ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದ ಅಂಗ ಸಂಸ್ಥೆ ಆಗಿರುವ ಎನ್‌ಎಬಿಎಚ್ ಈ ಮಾನ್ಯತೆಯನ್ನು ನೀಡಿದ್ದು, ಆಸ್ಪತ್ರೆ 610 ಮಂಜೂರಾದ ಹಾಸಿಗೆಗಳ ವ್ಯಾಪ್ತಿಯಲ್ಲಿ ರೋಗಿಗಳ ಸುರಕ್ಷತೆ ಹಾಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನಿರಂತರವಾಗಿ ಒದಗಿಸುತ್ತಿರುವುದನ್ನು ಗುರುತಿಸಿ ಗೌರವಿಸಿದೆ. ಕೆಎಂಸಿ ಆಸ್ಪತ್ರೆ […]

Sports

ಜೂನ್ 21ರಂದು 12 ನೇ ಅಂತರ ರಾಷ್ಟ್ರೀಯ ಯೋಗ ದಿನ: ಹೆಚ್ಚುವರಿ ಜಿಲ್ಲಾಧಿಕಾರಿ ರಾಜು

ಮಂಗಳೂರು: ಜೂನ್ 21ರಂದು ನಡೆವ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಯೋಜಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ. ಅವರು ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಯೋಗ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಗವು ದೇಹ ಮತ್ತು ಮನಸ್ಸಿನ ಸಮತೋಲನ ಕಾಪಾಡುವ ಅತ್ಯುತ್ತಮ ಸಾಧನವಾಗಿದೆ. ಈ ಹಿನ್ನೆಲೆಯಲ್ಲಿ ಯೋಗದ ಮಹತ್ವವನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ನಿಟ್ಟಿನಲ್ಲಿ […]