Tuesday, June 16, 2026
BREAKING NEWS

state

ಅರಬ್ಬಿ ಸಮುದ್ರದಲ್ಲಿ ಮುಳುಗುತ್ತಿದ್ದ ಭಾರತೀಯ ಹಡಗು ವಿರಾಟ್-1: 14 ನಾವಿಕರು ಸುರಕ್ಷಿತ ರಕ್ಷಣೆ

ಮಸ್ಕತ್: ತಾಂತ್ರಿಕ ವೈಫಲ್ಯದಿಂದ ಒಮಾನ್ ಕರಾವಳಿ ಸಮೀಪ ಅರಬ್ಬಿ ಸಮುದ್ರದಲ್ಲಿ ಮುಳುಗುವ ಸ್ಥಿತಿಗೆ ತಲುಪಿದ್ದ ಭಾರತೀಯ ವ್ಯಾಪಾರಿ ಹಡಗು ವಿರಾಟ್-1ನಲ್ಲಿದ್ದ 14 ನಾವಿಕರನ್ನು ಅಮೆರಿಕ ನೌಕಾಪಡೆ ಯಶಸ್ವಿಯಾಗಿ ರಕ್ಷಿಸಿದ ಘಟನೆ ನಡೆದಿದೆ. ರಕ್ಷಿಸಲ್ಪಟ್ಟ ಎಲ್ಲಾ ಭಾರತೀಯ ನಾವಿಕರು ಸುರಕ್ಷಿತವಾಗಿದ್ದು ಉತ್ತಮ ಆರೋಗ್ಯದಲ್ಲಿದ್ದಾರೆ ಎಂದು ಒಮಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ನಂತರ ಅವರನ್ನು ಮುಂಬೈಗೆ ತೆರಳುತ್ತಿದ್ದ ಮತ್ತೊಂದು ಹಡಗಿಗೆ ಸ್ಥಳಾಂತರಿಸಲಾಗಿದೆ. ಮಧ್ಯಪ್ರಾಚ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಜೂನ್ 14ರಂದು ಅರಬ್ಬಿ ಸಮುದ್ರದಲ್ಲಿ ಅತಂತ್ರ ಸ್ಥಿತಿಯಲ್ಲಿ ಸಿಲುಕಿದ್ದ […]

ಬಾಲ ಕಾರ್ಮಿಕರು ಕಂಡು ಬಂದರೆ 1098 ಕ್ಕೆ ಕರೆ ಮಾಡಿ: ನ್ಯಾಯಾಧೀಶೆ ದಿವ್ಯಶ್ರೀ

ಕಾರವಾರ: ಬಾಲ ಕಾರ್ಮಿಕ ಪದ್ಧತಿ ಮಕ್ಕಳ ಭೌತಿಕ ಹಾಗೂ ಮಾನಸಿಕ ಬೆಳವಣಿಗೆಯನ್ನು ಕುಂಠಿತಗೊಳಿಸುವ ಗಂಭೀರ ಸಾಮಾಜಿಕ ಸಮಸ್ಯೆಯಾಗಿದ್ದು, ಮಕ್ಕಳಿಗೆ ಉತ್ತಮ ಆರೋಗ್ಯ, ಶಿಕ್ಷಣ ಮತ್ತು ಸುರಕ್ಷಿತ ಬಾಲ್ಯ ದೊರಕುವಂತೆ ಮಾಡಲು ಬಾಲ ಕಾರ್ಮಿಕ ಪದ್ಧತಿಯ ಸಂಪೂರ್ಣ ನಿರ್ಮೂಲನೆ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ. ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಬಾಲ […]

District News

ಅರಬ್ಬಿ ಸಮುದ್ರದಲ್ಲಿ ಮುಳುಗುತ್ತಿದ್ದ ಭಾರತೀಯ ಹಡಗು ವಿರಾಟ್-1: 14 ನಾವಿಕರು ಸುರಕ್ಷಿತ ರಕ್ಷಣೆ

ಮಸ್ಕತ್: ತಾಂತ್ರಿಕ ವೈಫಲ್ಯದಿಂದ ಒಮಾನ್ ಕರಾವಳಿ ಸಮೀಪ ಅರಬ್ಬಿ ಸಮುದ್ರದಲ್ಲಿ ಮುಳುಗುವ ಸ್ಥಿತಿಗೆ ತಲುಪಿದ್ದ ಭಾರತೀಯ ವ್ಯಾಪಾರಿ ಹಡಗು ವಿರಾಟ್-1ನಲ್ಲಿದ್ದ 14 ನಾವಿಕರನ್ನು ಅಮೆರಿಕ ನೌಕಾಪಡೆ ಯಶಸ್ವಿಯಾಗಿ ರಕ್ಷಿಸಿದ ಘಟನೆ ನಡೆದಿದೆ. ರಕ್ಷಿಸಲ್ಪಟ್ಟ ಎಲ್ಲಾ ಭಾರತೀಯ ನಾವಿಕರು ಸುರಕ್ಷಿತವಾಗಿದ್ದು ಉತ್ತಮ ಆರೋಗ್ಯದಲ್ಲಿದ್ದಾರೆ ಎಂದು ಒಮಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ನಂತರ ಅವರನ್ನು ಮುಂಬೈಗೆ ತೆರಳುತ್ತಿದ್ದ ಮತ್ತೊಂದು ಹಡಗಿಗೆ ಸ್ಥಳಾಂತರಿಸಲಾಗಿದೆ. ಮಧ್ಯಪ್ರಾಚ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಜೂನ್ 14ರಂದು ಅರಬ್ಬಿ ಸಮುದ್ರದಲ್ಲಿ ಅತಂತ್ರ ಸ್ಥಿತಿಯಲ್ಲಿ ಸಿಲುಕಿದ್ದ […]

crime

ಹನಿಟ್ರ್ಯಾಪ್‌ ಹೆಸರಿನಲ್ಲಿ 2.57 ಕೋಟಿ ವಸೂಲಿ: ಉರ್ವ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರ ಬಂಧನ

ಮಂಗಳೂರು: ಗುತ್ತಿಗೆದಾರರೊಬ್ಬರನ್ನು ಹನಿಟ್ರ್ಯಾಪ್‌ ಮಾಡಿ ಅಶ್ಲೀಲ ವಿಡಿಯೊ ಹಾಗೂ ಫೋಟೊಗಳ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೇರಿ ಇಬ್ಬರನ್ನು ಉರ್ವ ಪೊಲೀಸರು ಬಂಧನ ಮಾಡಿದ್ದಾರೆ. ಗುತ್ತಿಗೆದಾರರ ಜತೆಗೆ ಕೆಲಸ ಮಾಡುತ್ತಿದ್ದ ಜಿತೇಶ್ ಹಾಗೂ ನಿಜಾಮ್ ಯಾನೆ ಇಬ್ರಾಹಿಂ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಿಜಾಮ್ ಅವರನ್ನು ಯುವ ಕಾಂಗ್ರೆಸ್ ಹುದ್ದೆಯಿಂದ ವಜಾ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಗುತ್ತಿಗೆದಾರನೊಂದಿಗೆ […]

ವಿಜಯಪುರ: ಆಸ್ತಿ ವಿವಾದ ಒಂದೇ ಕುಟುಂಬದ 5 ಮಂದಿ, ಕೆಲಸದ ಆಳು ಬರ್ಬರ ಹತ್ಯೆ, ಬೆಚ್ಚಿ ಬಿದ್ದ ಜನರು

ವಿಜಯಪುರ: ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ ಜಮೀನು ವಿವಾದದ ಹಿನ್ನೆಲೆ ಈ ಕೊಲೆ ನಡೆದಿದೆ ಎನ್ನಲಾಗುತ್ತಿದ್ದು, ಒಂದೇ ಕುಟುಂಬದ 5 ಮಂದಿ ಹಾಗೂ ಒಬ್ಬ ಆಳು ಮನುಷ್ಯ ಸೇರಿದಂತೆ ಒಟ್ಟು 6 ಜನರ ಬರ್ಬರ ಹತ್ಯೆಗೆ ಬೆಚ್ಚಿ ಬೀಳುವಂತಾಗಿದೆ. ಹಂತಕರು ಗನ್‌ನಿಂದ ಫೈರಿಂಗ್ ಮಾಡಿ, ಭೀಕರವಾಗಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು, ಭೀಮಾತೀರದಲ್ಲಿ ಮತ್ತೆ ಹಳೆಯ ರಕ್ತಚರಿತ್ರೆಯ ಕರಾಳ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ […]

ಧರ್ಮಸ್ಥಳ: ವೃದ್ಧೆಗೆ ಪ್ರಸಾದ, ಜ್ಯೂಸ್ ನೀಡಿ ಅಸ್ವಸ್ಥ ಮಾಡಿ ಚಿನ್ನಾಭರಣ ಅಪಹರಣ

ಬೆಳ್ತಂಗಡಿ: ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ವೃದ್ದೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ಕೊಟ್ಟು ವೃದ್ಧೆಯನ್ನು ಅಸ್ವಸ್ಥರನ್ನಾಗಿ ಮಾಡಿ ಹತ್ತು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಅಪಹರಣ ಮಾಡಿ ಪರಾರಿ ಆಗಿರುವ ಘಟನೆ ನಡೆದಿದ್ದು, ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಜೆ.ಪಿ.ನಗರ ನಿವಾಸಿ ಪ್ರೇಮಾ.ಕೆ (70) ಎಂಬುವವರು ಮೇ 23 ರಂದು ಬೆಂಗಳೂರಿನಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಇರುವ ತನ್ನ ಚಿಕ್ಕಮ್ಮನ ಮಗಳ ಮನೆಗೆ ಪೂಜಾ ಕಾರ್ಯಕ್ರಮಕ್ಕೆ ಬಂದಿದ್ದರು. ಮೇ […]

health

ರೋಗಿಗಳ ಸುರಕ್ಷತೆಗಾಗಿ ಪರಿಣಾಮಕಾರಿ ಕ್ರಮಗಳ ಅನುಷ್ಠಾನ ಮುಖ್ಯ: ಡೀನ್ ಡಾ. ಪೂರ್ಣಿಮಾ

ಕಾರವಾರ: ಆರೋಗ್ಯ ಸಂಸ್ಥೆಗಳಲ್ಲಿ ರೋಗಿಗಳ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸೋಂಕು ತಡೆ ಹಾಗೂ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕಿ ಡಾ. ಪೂರ್ಣಿಮಾ ಆರ್.ಟಿ. ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಗುಣಮಟ್ಟ ಭರವಸೆ ಘಟಕ ಹಾಗೂ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಕ್ಷ್ಮಜೀವಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಆಸ್ಪತ್ರೆ ಸೋಂಕು ನಿಯಂತ್ರಣ […]

Sports

ಜೂನ್ 21ರಂದು 12 ನೇ ಅಂತರ ರಾಷ್ಟ್ರೀಯ ಯೋಗ ದಿನ: ಹೆಚ್ಚುವರಿ ಜಿಲ್ಲಾಧಿಕಾರಿ ರಾಜು

ಮಂಗಳೂರು: ಜೂನ್ 21ರಂದು ನಡೆವ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಯೋಜಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ. ಅವರು ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಯೋಗ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಗವು ದೇಹ ಮತ್ತು ಮನಸ್ಸಿನ ಸಮತೋಲನ ಕಾಪಾಡುವ ಅತ್ಯುತ್ತಮ ಸಾಧನವಾಗಿದೆ. ಈ ಹಿನ್ನೆಲೆಯಲ್ಲಿ ಯೋಗದ ಮಹತ್ವವನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ನಿಟ್ಟಿನಲ್ಲಿ […]