Monday, July 06, 2026
BREAKING NEWS

state

ಉ.ಕ ಜಿಲ್ಲೆಯಲ್ಲಿ ದತ್ತು ಮಕ್ಕಳ ಪ್ರಕ್ರಿಯೆ; ಮೂರು ಮಕ್ಕಳಿಗೆ ಸ್ವದೇಶಿ, ಒಂದು ಮಗುವಿಗೆ ವಿದೇಶಿ ದತ್ತು ಪ್ರಕ್ರಿಯೆ ಭಾಗ್ಯ

ಕಾರವಾರ: ಅನಾಥ, ತ್ಯಜಿಸಲ್ಪಟ್ಟ ಹಾಗೂ ಪಾಲಕರ ಆರೈಕೆಯಿಂದ ವಂಚಿತ ಮಕ್ಕಳಿಗೆ ಶಾಶ್ವತ ಕುಟುಂಬ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ದತ್ತು ಪ್ರಕ್ರಿಯೆಗೆ ಹೆಚ್ಚಿನ ಚುರುಕು ನೀಡಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ಎನ್. ತಿಳಿಸಿದ್ದಾರೆ. ದತ್ತು ಪ್ರಕ್ರಿಯೆಯನ್ನು ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ–2015 ಹಾಗೂ ದತ್ತು ನಿಯಮಾವಳಿ–2022ರ ಪ್ರಕಾರ ನಡೆಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಮಕ್ಕಳ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಸ್ವದೇಶಿ ದತ್ತು ಪ್ರಕ್ರಿಯೆಯಲ್ಲಿ ಭಾರತೀಯ ನಾಗರಿಕರು ದೇಶದೊಳಗಿನ ಮಕ್ಕಳನ್ನು […]

ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಹಾದಿಯಲ್ಲಿ ಡಾ. ರಾಜೇಂದ್ರಕುಮಾರ್, ಅರ್ಥಪೂರ್ಣ ಪ್ರತಿಭಾ ಪುರಸ್ಕಾರ

ಮಂಗಳೂರು: ಶಿಕ್ಷಣದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವುದು ಅವರ ಸಾಧನೆಗೆ ಮನ್ನಣೆ ನೀಡುವುದಷ್ಟೇ ಅಲ್ಲ, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆ ಆಗುತ್ತದೆ. ಪ್ರತಿಭಾವಂತರು ಸಮಾಜ ಸೇವೆ ಹಾಗೂ ರಾಷ್ಟ್ರ ನಿರ್ಮಾಣದ ಹೊಣೆಗಾರಿಕೆಯನ್ನು ಮನಗಂಡು ಮುಂದುವರೆಯಬೇಕು ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೇಳಿದರು. ದಿ. ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಇನ್ನಷ್ಟು ಎತ್ತರಕ್ಕೆ […]

District News

ಉ.ಕ ಜಿಲ್ಲೆಯಲ್ಲಿ ದತ್ತು ಮಕ್ಕಳ ಪ್ರಕ್ರಿಯೆ; ಮೂರು ಮಕ್ಕಳಿಗೆ ಸ್ವದೇಶಿ, ಒಂದು ಮಗುವಿಗೆ ವಿದೇಶಿ ದತ್ತು ಪ್ರಕ್ರಿಯೆ ಭಾಗ್ಯ

ಕಾರವಾರ: ಅನಾಥ, ತ್ಯಜಿಸಲ್ಪಟ್ಟ ಹಾಗೂ ಪಾಲಕರ ಆರೈಕೆಯಿಂದ ವಂಚಿತ ಮಕ್ಕಳಿಗೆ ಶಾಶ್ವತ ಕುಟುಂಬ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ದತ್ತು ಪ್ರಕ್ರಿಯೆಗೆ ಹೆಚ್ಚಿನ ಚುರುಕು ನೀಡಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ಎನ್. ತಿಳಿಸಿದ್ದಾರೆ. ದತ್ತು ಪ್ರಕ್ರಿಯೆಯನ್ನು ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ–2015 ಹಾಗೂ ದತ್ತು ನಿಯಮಾವಳಿ–2022ರ ಪ್ರಕಾರ ನಡೆಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಮಕ್ಕಳ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಸ್ವದೇಶಿ ದತ್ತು ಪ್ರಕ್ರಿಯೆಯಲ್ಲಿ ಭಾರತೀಯ ನಾಗರಿಕರು ದೇಶದೊಳಗಿನ ಮಕ್ಕಳನ್ನು […]

crime

ಬಾಲಕಿಗೆ ಲೈಂಗಿಕ ಕಿರುಕುಳ, ಪೋಕ್ಸೊ ಪ್ರಕರಣದಲ್ಲಿ ಮಂಕಿ ಪಿಎಸ್ಐ ಅಭಿನಂದನ್ ಬಂಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಪೋಕ್ಸೊ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಅಭಿನಂದನ್ ಅವರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಲಗಳ ಪ್ರಕಾರ, ಯಲ್ಲಾಪುರ ಮೂಲದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ತೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆಯ […]

ಮಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ: ಅಪಹರಣ–ದರೋಡೆ ಪ್ರಕರಣ, ಮೂರು ಮಂದಿ ಬಂಧನ

ಮಂಗಳೂರು: ಮಹಾರಾಷ್ಟ್ರದಿಂದ ಕೇರಳಕ್ಕೆ ಕುಟುಂಬದ ಜತೆಗೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಅಪಹರಿಸಿ, ಕಾರು ಹಾಗೂ ಚಿನ್ನಾಭರಣ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಪತ್ತೆಗೆ ವಿಶೇಷ ತಂಡಗಳು ಕಾರ್ಯಾಚರಣೆ ಮುಂದುವರೆಸಿವೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ತಲಶ್ಶೇರಿ ನಿವಾಸಿ ನಿಮಿಲ್ ಆರ್.ಕೆ. (37), ಆರೋಪಿಗಳಿಗೆ ತಲೆಮರೆಸಿಕೊಳ್ಳಲು ನೆರವು ನೀಡಿದ ಕೊಡಗು ಜಿಲ್ಲೆಯ ಅಕ್ಕತ್ತೂರು ನಿವಾಸಿ ಇರ್ಷಾದ್ (40) […]

ಬೈಕಂಪಾಡಿ: ಕೇರಳ ಉದ್ಯಮಿ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡ, ಪತ್ನಿ-ಪುತ್ರನ ಅಪಹರಣ, 20 ಲಕ್ಷ ಮೌಲ್ಯದ ಸ್ವತ್ತು ದೋಚಿ ಪರಾರಿ

ಮಂಗಳೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಬೈಕಂಪಾಡಿಯಲ್ಲಿ ಸೋಮವಾರ ಸಿನಿಮೀಯ ರೀತಿಯಲ್ಲಿ ನಡೆದ ದರೋಡೆ ಪ್ರಕರಣ ವ್ಯಾಪಕ ಆತಂಕಕ್ಕೆ ಕಾರಣ ಆಗಿದೆ. ಉದ್ಯಮಿಯೊಬ್ಬರ ಕಾರ ಅನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು ಅವರ ಪತ್ನಿ ಹಾಗೂ ಮಗನನ್ನು ಕಾರಿನಲ್ಲೇ ಅಪಹರಿಸಿ, ಚಿನ್ನಾಭರಣ ದೋಚಿದ ಬಳಿಕ ರಸ್ತೆ ಬದಿಯಲ್ಲಿ ಬಿಟ್ಟು ಪರಾರಿ ಆಗಿದೆ. ದರೋಡೆಗೆ ಒಳಗಾದವರು ಕೇರಳ ಮೂಲದವರಾಗಿದ್ದು, ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಉದ್ಯಮ ನಡೆಸುತ್ತಿದ್ದಾರೆ. ಅವರು ಪತ್ನಿ ಹಾಗೂ ಮಗನ ಜತೆಗೆ ಕಾರಿನಲ್ಲಿ ಸಾಂಗ್ಲಿಯಿಂದ ಪಯ್ಯನ್ನೂರಿಗೆ ತೆರಳುತ್ತಿದ್ದ ವೇಳೆ […]

health

ಕ್ಷಣಿಕ ಸುಖಕ್ಕೆ ಮಾದಕ ವ್ಯಸನ ಬೇಡ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಕಿವಿಮಾತು

ಕಾರವಾರ: ಕ್ಷಣಿಕ ಸುಖಕ್ಕಾಗಿ ಯುವಜನತೆ ಮಾದಕ ದ್ರವ್ಯ ಹಾಗೂ ಮದ್ಯಪಾನದಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ವಿದ್ಯಾರ್ಥಿಗಳು ಇಂತಹ ವ್ಯಸನಗಳಿಂದ ಸಂಪೂರ್ಣ ದೂರವಿರಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಹೇಳಿದರು. ನಗರದ ಬಿಣಗಾದ ಸೋಮನಾಥ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಂಗಳವಾರ ನಡೆದ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕ್ಷಣಿಕ ಸಂತೋಷಕ್ಕಾಗಿ ಕೆಲವರು ಮಾದಕ ದ್ರವ್ಯ ಮತ್ತು ಮದ್ಯಪಾನದ ಮೊರೆ ಹೋಗುತ್ತಾರೆ. ಆದರೆ ಅದು ಅವರ ಶಿಕ್ಷಣ ಹಾಗೂ ಭವಿಷ್ಯದ […]

Sports

ರಾಜ್ಯ ಮಟ್ಟದ ಟೇಬಲ್ ಟೆನಿಸ್: ಫೈನಲ್ , ಸೆಮಿಫೈನಲ್ ನಲ್ಲಿ ತೀವ್ರ ಹಣಾಹಣಿ

ಮಂಗಳೂರು: ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ವಿವಿಧ ವಿಭಾಗಗಳ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳು ರೋಚಕ ಪೈಪೋಟಿಗೆ ಸಾಕ್ಷಿಯಾದವು. ಅಂಡರ್-17 ಬಾಲಕಿಯರ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಮಿಹಿಕಾ ಉಡುಪ ಅವರು ವಿಭಾ ತಾವಕರಿ ಅವರನ್ನು 11-9, 11-9, 11-6 ನೇರ ಸೆಟ್‌ಗಳಿಂದ ಮಣಿಸಿ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಸೆಮಿಫೈನಲ್‌ನಲ್ಲಿ ಮಿಹಿಕಾ ಉಡುಪ ಅವರು ಐರಿನ್ ಅಣ್ಣಾ ಸುಭಾಷ್ ವಿರುದ್ಧ 11-5, 12-10, 6-11, 14-12 ಅಂತರದಲ್ಲಿ ಜಯ ಸಾಧಿಸಿದರು. ವಿಭಾ ತಾವಕರಿ ಅವರು ಹಿಯಾ ಸಿಂಗ್ ಅವರನ್ನು […]

Follow Us

Advertisement

  • WP Notify  commented on Sample Page: Honey8 are you struggling to get comments on your
  • TikTok  commented on Auto Draft: John6 are you struggling to get comments on your b