Thursday, September 10, 2026
BREAKING NEWS

state

ಪದ್ಮರಾಜ್ ಪೂಜಾರಿ ಹೆಗಲಿಗೆ ದ. ಕ ಜಿಲ್ಲಾ ಕಾಂಗ್ರೆಸ್ ಸಾರಥ್ಯ: ಕೈ ಪಾಳೆಯದಲ್ಲಿ ಹೊಸ ಹುರುಪು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ನಡೆಯುತ್ತಿರುವ ‘ಸಂಘಟನ್ ಸೃಜನ್ ಅಭಿಯಾನ’ದ ಭಾಗವಾಗಿ ಈ ನೇಮಕಾತಿ ಮಾಡಲಾಗಿದೆ. ಅಭಿಯಾನದಡಿ ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಜಿಲ್ಲೆಯ ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖ ನಾಯಕರೊಂದಿಗೆ ಚರ್ಚೆ […]

ಬಿಜೈನ ಭಾರತ್ ಮಾಲ್‌ ಸ್ಮಾರ್ಟ್ ಬಜಾರ್‌ನಲ್ಲಿ ಶಿಕ್ಷಕರಿಗೆ ಗೌರವ, ಸರ್ಕಾರಿ ಶಾಲೆಗಳ ಶಿಕ್ಷಕರು, ವೈದ್ಯಕೀಯ ಪ್ರಾಧ್ಯಾಪಕರಿಗೆ ಸನ್ಮಾನ

ಮಂಗಳೂರು: ಬಿಜೈನ ಭಾರತ್ ಮಾಲ್‌ನ ಸ್ಮಾರ್ಟ್ ಬಜಾರ್‌ನಲ್ಲಿ ಮಹಿಳಾ ಬುಧವಾರದ ಅಂಗವಾಗಿ ವಿಶೇಷ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿ, ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಹಾಗೂ ವೈದ್ಯಕೀಯ ಶಿಕ್ಷಣದಲ್ಲಿ ತೊಡಗಿಸಿಕೊಂಡಿರುವ ಪ್ರಾಧ್ಯಾಪಕರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಸರ್ಕಾರಿ ಶಾಲೆಗಳ ಶಿಕ್ಷಕರು ಹಾಗೂ ಆಸ್ಪತ್ರೆಗಳಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ನೀಡುತ್ತಿರುವ ಪ್ರಾಧ್ಯಾಪಕರನ್ನು ಸನ್ಮಾನಿಸಲಾಯಿತು. ಶಿಕ್ಷಕರು ಸಮಾಜ ನಿರ್ಮಾಣದಲ್ಲಿ ವಹಿಸುತ್ತಿರುವ ಮಹತ್ವದ ಪಾತ್ರ ಹಾಗೂ ಅವರ ನಿರಂತರ ಸೇವೆಯನ್ನು ಗುರುತಿಸಿ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ […]

District News

ಪದ್ಮರಾಜ್ ಪೂಜಾರಿ ಹೆಗಲಿಗೆ ದ. ಕ ಜಿಲ್ಲಾ ಕಾಂಗ್ರೆಸ್ ಸಾರಥ್ಯ: ಕೈ ಪಾಳೆಯದಲ್ಲಿ ಹೊಸ ಹುರುಪು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ನಡೆಯುತ್ತಿರುವ ‘ಸಂಘಟನ್ ಸೃಜನ್ ಅಭಿಯಾನ’ದ ಭಾಗವಾಗಿ ಈ ನೇಮಕಾತಿ ಮಾಡಲಾಗಿದೆ. ಅಭಿಯಾನದಡಿ ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಜಿಲ್ಲೆಯ ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖ ನಾಯಕರೊಂದಿಗೆ ಚರ್ಚೆ […]

crime

3 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಮಂಗಳೂರು ಸಿಸಿಬಿ ಪೊಲೀಸರಿಂದ ಖೆಡ್ಡಾ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (ಎನ್‌ಸಿಐಬಿ) ಅಧಿಕಾರಿ ಎಂದು ಸುಳ್ಳು ಪರಿಚಯಿಸಿಕೊಂಡು ವಂಚನೆ ಹಾಗೂ ಸುಲಿಗೆ ನಡೆಸಿದ ಪ್ರಕರಣದಲ್ಲಿ ಬಂಧಿತನಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಲ್ಲಂ ಜಿಲ್ಲೆಯ ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ ಅಲಿಯಾಸ್ ಆಂಟನಿ (64) ಬಂಧಿತ ಆರೋಪಿ. ಆರೋಪಿಯು ತನ್ನದೇ ತಂಡ ರಚಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸುತ್ತಿದ್ದ. ಹಣಕಾಸು ವಿವಾದ, ಬ್ಯಾಂಕ್ […]

ಭೂತನಾಳ ಕೆರೆಯಲ್ಲಿ ತಾಯಿ, ಐವರು ಮಕ್ಕಳ ಶವ ಪತ್ತೆ

ವಿಜಯಪುರ: ಆ.24 ರಿಂದ ನಾಪತ್ತೆ ಆಗಿದ್ದ ತಾಯಿ ಹಾಗೂ ಐದು ಮಂದಿ ಮಕ್ಕಳ ಮೃತದೇಹಗಳು ನಗರದ ಹೊರವಲಯದ ಭೂತನಾಳ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆ ಆಗಿವೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ವಿಜಯಪುರ ತಾಲ್ಲೂಕಿನ ತೊರವಿ ಗ್ರಾಮದ ಮಲಕಾರಿ ಭೀಮರಾಯ ಜಾಲಗೇರಿ ಅವರ ಪತ್ನಿ ಶೋಭಾ ಜಾಲಗೇರಿ (45), ಮಕ್ಕಳಾದ ವಿದ್ಯಾ (16), ಸುವರ್ಣ (14), ಗೌಡೇಶ್ (10), ಸಾನಿಕಾ (7) ಹಾಗೂ ವಿಕಾಸ […]

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ವಶಕ್ಕೆ, ನ್ಯಾಯಾಲಯ ಆದೇಶ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಗುಂಡಿನ ದಾಳಿ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶ ನೀಡಿದೆ. ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಬಂಧಿತ ಆರೋಪಿಗಳು. ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರನ್ನೂ ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. […]

health

ನೇತ್ರದಾನದಿಂದ ಐವರಿಗೆ ದೃಷ್ಟಿ: ಜಾಗೃತಿ ಮೂಡಿಸಿದ ವಾಕಥಾನ್

ಮಂಗಳೂರು: ನೇತ್ರದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದ ಡಾ. ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆ, ಯೆಕ್ಕೂರಿನ ಕಾಲೇಜ್ ಆಫ್ ಫಿಶರೀಸ್ ಹಾಗೂ ಡೆಕಾಥ್ಲಾನ್ ಮಂಗಳೂರು ಸಹಯೋಗದಲ್ಲಿ ‘ನೇತ್ರದಾನ ಜಾಗೃತಿ ವಾಕಥಾನ್–2026’ ಆಯೋಜಿಸಿತು. ನೇತ್ರದಾನ ಜಾಗೃತಿ ಕಾರ್ಯಕ್ರಮವನ್ನು ಪ್ರತಿವರ್ಷ ಆಗಸ್ಟ್ 25ರಿಂದ ಸೆಪ್ಟೆಂಬರ್ 8ರವರೆಗೆ ಆಚರಿಸಲಾಗುತ್ತದೆ. ಇದರ ಅಂಗವಾಗಿ ನಡೆದ ವಾಕಥಾನ್‌ನಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಡೆಕಾಥ್ಲಾನ್ ತಂಡದ ಸದಸ್ಯರು ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಡಾ. ಅದಿತಿ, ಡಾ. ವಸಂತ್ ಪೈ ಹಾಗೂ ಡಾ. ದೀಪ್ತಾ […]

ಅನಧಿಕೃತ ಇ–ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ: ₹4 ಲಕ್ಷಕ್ಕೂ ಅಧಿಕ ಮೌಲ್ಯದ ಔಷಧ ವಶ

ಲೇಡಿಗೋಷನ್ ಆಸ್ಪತ್ರೆಗೆ ರೆಡ್‌ಕ್ರಾಸ್‌ನಿಂದ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ,  ಕ್ರಿಯಾತ್ಮಕ ದೃಷ್ಟಿಕೋನದ ಕೊಡುಗೆ: ಡಾ. ದುರ್ಗಾಪ್ರಸಾದ್

ಮಣಿಪಾಲ ಆರೋಗ್ಯ ಕಾರ್ಡ್ ಲಾಭ ವಿಫುಲ, ನೋಂದಣಿಗೆ ಅಗಸ್ಟ್ 31 ಕೊನೆ ದಿನ: ಡಾ. ದಿಲೀಪ್ ನಾಯಕ್

ಸಾಂಕ್ರಾಮಿಕ ರೋಗ, ಎಚ್‌1ಎನ್‌1 ತಡೆಗೆ ಆರೋಗ್ಯ ಇಲಾಖೆ ಸನ್ನದ್ಧ, 4,212 ಇನ್‌ಫ್ಲುಯೆಂಜಾ ಪ್ರಕರಣ: ಸಚಿವ ಖಾದರ್

ಜೀವ ಉಳಿಸಿದ ಲೇಡಿಗೋಷನ್ ಆಸ್ಪತ್ರೆಯ ‘ಬಹುಶಿಸ್ತೀಯ’ ಚಿಕಿತ್ಸೆ, ನಾಲ್ಕು ಗಂಟೆಗಳ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಯಶಸ್ವಿ,, ತಾಯಿ, ಮಗು ಸೇಫ್

Sports

ಮಂಗಳೂರು: ವರ್ಲ್ಡ್ ಮಾಸ್ಟರ್ಸ್ ಕ್ರೀಡಾಕೂಟ ಪ್ರಶಸ್ತಿ ವಿಜೇತರಿಗೆ ಸನ್ಮಾನ, ಕ್ರೀಡಾ ಅನುಭವ ಹಂಚಿಕೊಂಡ ಗಿರಿಧರ ಸಾಲಿಯಾನ್

ಮಂಗಳೂರು: ದಕ್ಷಿಣ ಕೊರಿಯಾದ ದೇಗುನಲ್ಲಿ ನಡೆದ 2026ರ ವಿಶ್ವ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ಪ್ರಶಸ್ತಿ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಪಟುಗಳನ್ನು ದಕ್ಷಿಣ ಕನ್ನಡ ಮಾಸ್ಟರ್ ಅಥ್ಲೀಟ್ಸ್ ಅಸೋಸಿಯೇಷನ್ ವತಿಯಿಂದ ಭಾನುವಾರ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸನ್ಮಾನಿಸಲಾಯಿತು. ವಿಶ್ವ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ವಿಶ್ವದ ಸುಮಾರು 106 ದೇಶಗಳ ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಪ್ರತಿಷ್ಠಿತ ಅಂತರ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ಪ್ರಶಸ್ತಿ ಗೆದ್ದ ಗಿರಿಧರ ಸಾಲಿಯಾನ್, ಗ್ಲಾಡಿಸ್ ಪಾಯಸ್, ಮೇರಿ ಹಿಲ್ಡಾ, ಸುಭಾಷ್ ರೈ ಹಾಗೂ […]