Wednesday, July 15, 2026
BREAKING NEWS

state

ಮಂಗಳೂರಿನಲ್ಲಿ ನಾಗರಿಕ ಸೇವಾ ಪರೀಕ್ಷೆಗಳ ತರಬೇತಿ ಕೇಂದ್ರ ಉದ್ಘಾಟಿಸಿದ ಡಾ. ಹೆನ್ರಿ ಡಿಸೋಜ

ಮಂಗಳೂರು: ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಆರಂಭಿಸಲಾದ ಹೊಸ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ ನಗರದ ಸಂದೇಶ ಪ್ರತಿಷ್ಠಾನದ ಆವರಣದಲ್ಲಿ ನಡೆಯಿತು. ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್ ಹಾಗೂ ಸಂದೇಶ ಪ್ರತಿಷ್ಠಾನದ ಅಧ್ಯಕ್ಷ ಡಾ. ಹೆನ್ರಿ ಡಿಸೋಜ ಅವರು ಉದ್ಘಾಟನೆ ನೆರವೇರಿಸಿದರು. ಬಳಿಕ ರಾಮಕೃಷ್ಣ ಮಠದ ಸ್ವಾಮಿ ಯುಗಾನಂದ ದೀಪ ಬೆಳಗಿಸಿ ಆಶೀರ್ವಚನ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಹೆನ್ರಿ ಡಿಸೋಜ ಅವರು, ನಾವು ಎಲ್ಲಿ ಹುಟ್ಟಿದ್ದೇವೆ ಎಂಬುದು ಮುಖ್ಯವಲ್ಲ. ಜೀವನದಲ್ಲಿ ಯಾವ […]

ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆಗೆ ಆದ್ಯತೆ ನೀಡಿ: ಶಾಸಕ ಡಾ. ಭರತ್ ಶೆಟ್ಟಿ ಒತ್ತಾಯ

ಮಂಗಳೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ, ಮತದಾರರ ಪಟ್ಟಿಯ ಪರಿಷ್ಕರಣೆಯ ಜೊತೆಗೆ ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆ ಕಾರ್ಯಕ್ಕೂ ಆದ್ಯತೆ ನೀಡಬೇಕು ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಬಾಂಗ್ಲಾದೇಶದ ನಾಗರಿಕರು ಅಕ್ರಮವಾಗಿ ದೇಶ ಪ್ರವೇಶಿಸಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮುಕ್ಕ ಹಾಗೂ ಕೋಡಿಕಲ್ ಪ್ರದೇಶಗಳಲ್ಲಿ ಈಗಾಗಲೇ 16 ಮಂದಿ ಅಕ್ರಮ ವಲಸಿಗರನ್ನು ಪೊಲೀಸರು […]

District News

ಪಡೀಲ್‌ಗೆ ಪಂಚಗಂಗಾ ಎಕ್ಸ್‌ಪ್ರೆಸ್ ನಿಲುಗಡೆಗೆ ಒತ್ತಾಯ, ರೈಲ್ವೆ ಅಧಿಕಾರಿಗಳ ಶೀಘ್ರವೇ ಭೇಟಿ: ಪಿ.ವಿ. ಮೋಹನ್

ಮಂಗಳೂರು: ನಗರದ ಪಡೀಲ್ ರೈಲು ನಿಲ್ದಾಣ ಹಲವು ವರ್ಷಗಳಿಂದ ಅಭಿವೃದ್ಧಿ ಮತ್ತು ಅಗತ್ಯ ರೈಲು ನಿಲುಗಡೆಯಿಂದ ವಂಚಿತವಾಗಿದ್ದು, ಸಾವಿರಾರು ಜನರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾರವಾರ–ಬೆಂಗಳೂರು ಪಂಚಗಂಗಾ ಸೂಪರ್ ಎಕ್ಸ್‌ಪ್ರೆಸ್‌ಗೆ ಪಡೀಲ್‌ನಲ್ಲಿ ನಿಲುಗಡೆ ಕಲ್ಪಿಸಿ, ಸ್ಥಳೀಯರ ಬಹುಕಾಲದ ಬೇಡಿಕೆಯನ್ನು ಈಡೇರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಪಿ.ವಿ. ಮೋಹನ್ ಆಗ್ರಹಿಸಿದರು. ಪಡೀಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಅಹವಾಲು ಆಲಿಸಿ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಮಂಗಳೂರು ರೈಲು ಸಂಪರ್ಕಕ್ಕೆ 120 […]

crime

ಮುಂಡಗೋಡ: ಲಾರಿ, ಕೆಎಸ್ ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ, 30ಕ್ಕೂ ಹೆಚ್ಚು ಮಂದಿಗೆ ಗಾಯ, ಐದು ಮಂದಿ ಹುಬ್ಬಳ್ಳಿ ಕಿಮ್ಸ್ ಗೆ ದಾಖಲು

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾವಲಕೊಪ್ಪ ಗ್ರಾಮದ ಶರೀಫಜ್ಜನ ದೇವಸ್ಥಾನದ ಸಮೀಪ ಕೆಸ್ ಆರ್ ಟಿಸಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 30 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಐದು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಹಾನಗಲ್ಲನಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಬಸ್‌ಗೆ, ಮುಂಡಗೋಡಿನಿಂದ ಸಿರಸಿ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ […]

ಮಣಿಪಾಲ: ತೋಡಿಗೆ ಉರುಳಿ ಬಿದ್ದ ಬಸ್, 7 ಮಂದಿ ವಿದ್ಯಾರ್ಥಿಗಳಿಗೆ ಗಾಯ

ಮಣಿಪಾಲ: ಶಾಲಾ ಬಸ್ ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸರಳೆಬೆಟ್ಟು ಕೊಡಂಗೆ ದೇವಸ್ಥಾನದ ಸಮೀಪ ನಡೆದಿದೆ. ಮಣಿಪಾಲ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಸ್ಕೂಲ್ ಬಸ್ ತಿರುವಿನಲ್ಲಿ ಹಿಂದಕ್ಕೆ ತೆಗೆಯುವಾಗ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ತೋಡಿಗೆ ಉರುಳಿ ಬಿದ್ದಿದೆ ಎಂದು ತಿಳಿದು ಬಂದಿದೆ. ಈ ಬಸ್ ನಲ್ಲಿ 20 ಮಕ್ಕಳಿದ್ದು, ಇದರಲ್ಲಿ ಏಳು ಮಕ್ಕಳಿಗೆ ಗಾಯಗಳಾಗಿವೆ. ಈ ಪೈಕಿ ಬಾಲಕಿಗೆ ತೀವ್ರ ಗಾಯಗಳಾಗಿವೆ, […]

ಯಲ್ಲಾಪುರ: ಭೀಕರ ರಸ್ತೆ ಅಪಘಾತ 7 ಮಂದಿ ಸಾವು, ಡಿಸಿ ಲಕ್ಷ್ಮಿಪ್ರಿಯಾ, ಎಸ್ಪಿ ದೀಪನ್ ಸ್ಥಳಕ್ಕೆ ದೌಡು, ಪರಿಶೀಲನೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಆರತಿಬೈಲ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟಿರುವುದು ಜಿಲ್ಲೆಯಲ್ಲಿ ಸೂತಕದ ವಾತಾವರಣ ನಿರ್ಮಾಣ ಮಾಡಿದೆ. ಕ್ರೂಸರ್ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಪ್ರಯಾಣಿಸುವವರಲ್ಲಿ ಭಯ ಹುಟ್ಟಿಸಿದೆ. ಘಟನೆಯಲ್ಲಿ ಮೃತಪಟ್ಟವರು ಧಾರವಾಡದ ಬಸವರಾಜ್ ಕನಕನವರ್ (48), ಧಾರವಾಡ ಜಯನಗರದ ಅಭಿಷೇಕ ಈಶ್ವರ (28) ವರ್ಷ, ಸಾಧನಕೇರಿಯ ಅಕ್ಷಯ (26), ಸಪ್ತಾಪುರದ ಅಭಿಷೇಕ ಮಲ್ಲೇಶ ಮಡಬಾವಿ (26), ಕುರುಬಗಟ್ಟಿಯ ಸಂಜೀವ […]

health

ವೈದ್ಯರ ದಿನ, ಲೇಡಿಗೋಷನ್ ಆಸ್ಪತ್ರೆಯಲ್ಲಿ ಹಿರಿಯ ವೈದ್ಯರಿಗೆ ಸನ್ಮಾನ, ಸೇವೆ ಸ್ಮರಿಸಿದ ಡಾ. ದುರ್ಗಾಪ್ರಸಾದ್

ಮಂಗಳೂರು: ವೈದ್ಯರ ದಿನಾಚರಣೆಯ ಅಂಗವಾಗಿ ನಗರದ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹಿರಿಯ ವೈದ್ಯರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಸರ್ಕಾರಿ ಲೇಡಿಗೋಷನ್ ಆಸ್ಪತ್ರೆ ಹಾಗೂ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಕಳೆದ ಏಳು ದಶಕಗಳಿಂದ ತಾಯಿ ಮತ್ತು ಮಗುವಿನ ಆರೋಗ್ಯ ಸೇವೆ ನೀಡುತ್ತಿರುವ ಹಿನ್ನೆಲೆಯಲ್ಲಿ ಎರಡೂ ಸಂಸ್ಥೆಗಳ ವೈದ್ಯರ ಸೇವೆಯನ್ನು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು. ಹಿರಿಯ ವೈದ್ಯರಾದ ಡಾ. ಆರ್.ಎಲ್. ಕಾಮತ್, ಡಾ. ಎಸ್.ಆರ್. ನಾಯಕ್, ಡಾ. ಅಶ್ಫಾಕ್, ಡಾ. ಸುರೇಶ್ ಶೆಟ್ಟಿ, ಡಾ. ಶ್ರದ್ಧಾ ಶೆಟ್ಟಿ, ಡಾ. ಪ್ರಿಯಾ […]

Sports

40 ನೇ ವಯಸ್ಸಿನಲ್ಲಿ ಈಜು ಕಲಿತು, ಇಂಗ್ಲಿಷ್ ಚಾನೆಲ್ ಈಜಿದ ಮೊದಲ ಮಂಗಳೂರಿಗನಾಗಿರುವದು ನನಗೆ ಹೆಮ್ಮೆ: ಡಾ. ಗುರುಪ್ರಸಾದ್

ಮಂಗಳೂರು: ಪುತ್ರನಿಗೆ ಈಜು ಕಲಿಸುವ ಉದ್ದೇಶದಿಂದ 40ನೇ ವಯಸ್ಸಿನಲ್ಲಿ ಈಜು ಕಲಿತಿದ್ದೇ ತನ್ನ ಬದುಕಿನ ಮಹತ್ವದ ತಿರುವಾಯಿತು. ನಿರಂತರ ಅಭ್ಯಾಸ ಮತ್ತು ಆತ್ಮವಿಶ್ವಾಸದಿಂದ ಇಂಗ್ಲಿಷ್ ಚಾನೆಲ್ ರಿಲೇ ಈಜು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಯಿತು ಎಂದು ಕಣಚೂರು ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ. ಗುರುಪ್ರಸಾದ್ ಹೇಳಿದರು. ನಗರದ ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 3ರಂದು ಭಾರತದಿಂದ ಆರು ಸದಸ್ಯರ ತಂಡ ಇಂಗ್ಲೆಂಡ್‌ನಿಂದ ಫ್ರಾನ್ಸ್‌ವರೆಗೆ ಇಂಗ್ಲಿಷ್ ಚಾನೆಲ್ ರಿಲೇ ಈಜನ್ನು 13 ಗಂಟೆ 5 ನಿಮಿಷಗಳಲ್ಲಿ […]

Follow Us

Advertisement