Friday, September 18, 2026
BREAKING NEWS

state

ಬಡ ಮತ್ತು ನಿವೇಶನ ರಹಿತ ಕುಟುಂಬಗಳಿಗೆ ಸೂರು ಕಲ್ಪಿಸುವ ಉದ್ದೇಶ: ಸಚಿವ ಮುನಿಯಪ್ಪ

ಮಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಬಡ ಮತ್ತು ನಿವೇಶನ ರಹಿತ ಕುಟುಂಬಗಳಿಗೆ ಸೂರು ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ ಹಂಚಿಕೆ ಮಾಡುವ ಚಿಂತನೆ ನಡೆಸಿದೆ ಎಂದು ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಿವೇಶನದ ಜತೆಗೆ ಬಡವರ ಬದುಕಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದಕ್ಕೂ ಸರ್ಕಾರ ಆದ್ಯತೆ ನೀಡಿದೆ. ಭೂ ಒಡೆತನ ಯೋಜನೆಯಡಿ ಭೂಮಿಯಿಲ್ಲದ ಪರಿಶಿಷ್ಟರಿಗೆ ಭೂಮಿ ಒದಗಿಸುವ ಪ್ರಕ್ರಿಯೆ ಮುಂದುವರೆದಿದ್ದು, ನಿರಾಶ್ರಿತರಿಗೆ […]

ಜಲಸಿರಿ ವಿಳಂಬಕ್ಕೆ ಅಧಿಕಾರಿಗಳಿಗೆ ತರಾಟೆ: ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ಧರಾಮಯ್ಯ

ಮಂಗಳೂರು: ವರ್ಷಗಳಿಂದ ನಗರದ ಅಭಿವೃದ್ಧಿಗೆ ಸವಾಲಾಗಿರುವ ಒಳಚರಂಡಿ ವ್ಯವಸ್ಥೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ₹1,250 ಕೋಟಿ ಮೊತ್ತದ ಪ್ರಸ್ತಾವನೆ ಸಿದ್ಧವಾಗಿದ್ದು, ಮೊದಲ ಹಂತದ ₹350 ಕೋಟಿ ಕಾಮಗಾರಿಗೆ ಇಲಾಖಾ ಮಟ್ಟದಲ್ಲಿ ಅನುಮೋದನೆ ದೊರೆತಿದೆ. ಸೆ.18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅನುದಾನ ಬಿಡುಗಡೆಗೆ ಅಂತಿಮ ಮಂಜೂರಾತಿ ದೊರೆಯುವ ನಿರೀಕ್ಷೆ ಇದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ಧರಾಮಯ್ಯ ತಿಳಿಸಿದರು. ಮಂಗಳಾ ಸಭಾಂಗಣದಲ್ಲಿ ಗುರುವಾರ ನಡೆದ ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ […]

District News

ಕಸ್ತೂರಿರಂಗನ್ ವರದಿ: ಹೆಬ್ರಿಯಲ್ಲಿ ಸಿಎಂ ಸಭೆ; ಪೂರ್ವಸಿದ್ಧತೆ ಪರಿಶೀಲಿಸಿದ ಸಚಿವ ರಿಝ್ವಾನ್ ಅರ್ಷದ್

ಹೆಬ್ರಿ: ಕಸ್ತೂರಿರಂಗನ್ ವರದಿಯ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಜನರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಹೆಬ್ರಿಯಲ್ಲಿ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಸಭೆಯ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಹೆಬ್ರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶುಕ್ರವಾರ ಅಪರಾಹ್ನ 3 ಗಂಟೆಗೆ ಸಭೆ ನಡೆಯಲಿದೆ. ಕಸ್ತೂರಿರಂಗನ್ ವರದಿಯ ಸಾಧಕ–ಬಾಧಕಗಳ ಕುರಿತು ವರದಿಯ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಜನರೊಂದಿಗೆ ಮುಖ್ಯಮಂತ್ರಿ ಚರ್ಚಿಸಿ ಅವರ ಅಭಿಪ್ರಾಯಗಳನ್ನು ಆಲಿಸಲಿದ್ದಾರೆ. ಕುಂದಾಪುರ, ಕಾರ್ಕಳ, ಹೆಬ್ರಿ […]

crime

3 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಮಂಗಳೂರು ಸಿಸಿಬಿ ಪೊಲೀಸರಿಂದ ಖೆಡ್ಡಾ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (ಎನ್‌ಸಿಐಬಿ) ಅಧಿಕಾರಿ ಎಂದು ಸುಳ್ಳು ಪರಿಚಯಿಸಿಕೊಂಡು ವಂಚನೆ ಹಾಗೂ ಸುಲಿಗೆ ನಡೆಸಿದ ಪ್ರಕರಣದಲ್ಲಿ ಬಂಧಿತನಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಲ್ಲಂ ಜಿಲ್ಲೆಯ ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ ಅಲಿಯಾಸ್ ಆಂಟನಿ (64) ಬಂಧಿತ ಆರೋಪಿ. ಆರೋಪಿಯು ತನ್ನದೇ ತಂಡ ರಚಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸುತ್ತಿದ್ದ. ಹಣಕಾಸು ವಿವಾದ, ಬ್ಯಾಂಕ್ […]

ಭೂತನಾಳ ಕೆರೆಯಲ್ಲಿ ತಾಯಿ, ಐವರು ಮಕ್ಕಳ ಶವ ಪತ್ತೆ

ವಿಜಯಪುರ: ಆ.24 ರಿಂದ ನಾಪತ್ತೆ ಆಗಿದ್ದ ತಾಯಿ ಹಾಗೂ ಐದು ಮಂದಿ ಮಕ್ಕಳ ಮೃತದೇಹಗಳು ನಗರದ ಹೊರವಲಯದ ಭೂತನಾಳ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆ ಆಗಿವೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ವಿಜಯಪುರ ತಾಲ್ಲೂಕಿನ ತೊರವಿ ಗ್ರಾಮದ ಮಲಕಾರಿ ಭೀಮರಾಯ ಜಾಲಗೇರಿ ಅವರ ಪತ್ನಿ ಶೋಭಾ ಜಾಲಗೇರಿ (45), ಮಕ್ಕಳಾದ ವಿದ್ಯಾ (16), ಸುವರ್ಣ (14), ಗೌಡೇಶ್ (10), ಸಾನಿಕಾ (7) ಹಾಗೂ ವಿಕಾಸ […]

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ವಶಕ್ಕೆ, ನ್ಯಾಯಾಲಯ ಆದೇಶ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಗುಂಡಿನ ದಾಳಿ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶ ನೀಡಿದೆ. ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಬಂಧಿತ ಆರೋಪಿಗಳು. ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರನ್ನೂ ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. […]

health

ವಿಶ್ವ ಹೃದಯ ದಿನದಂದು ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ₹1,499ಕ್ಕೆ ಹೃದಯ ತಪಾಸಣೆ: ವಿಜಯ್ ಚಂದ್ರ

ಮಂಗಳೂರು: ವಿಶ್ವ ಹೃದಯ ದಿನದ ಅಂಗವಾಗಿ ಮಂಗಳೂರಿನ ಇಂಡಿಯಾನಾ ಆಸ್ಪತ್ರೆ ವತಿಯಿಂದ ಹೃದಯ ತಪಾಸಣಾ ಪ್ಯಾಕೇಜ್‌ನ್ನು ₹1,499ರ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. ಸೆಪ್ಟೆಂಬರ್ 30, 2026ರವರೆಗೆ ಈ ಕೊಡುಗೆ ಲಭ್ಯ ಇರಲಿದೆ ಎಂದು ಇಂಡಿಯಾನಾ ಹಾಸ್ಪಿಟಲ್ ಮತ್ತು ಹಾರ್ಟ್ ಇನ್‌ಸ್ಟಿಟ್ಯೂಟ್ ಲಿಮಿಟೆಡ್ ನ ಗ್ರೂಪ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇ. ವಿಜಯ್ ಚಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಮಾನ್ಯವಾಗಿ 3,000 ದರದ ಈ ತಪಾಸಣಾ ಪ್ಯಾಕೇಜ್‌ನಲ್ಲಿ ಹೃದಯದ ಸಮಗ್ರ ತಪಾಸಣೆಗೆ ಅಗತ್ಯವಿರುವ ವಿವಿಧ ಪರೀಕ್ಷೆಗಳು ಮತ್ತು ವೈದ್ಯಕೀಯ […]

Sports

ವೇಟ್‌ಲಿಫ್ಟಿಂಗ್‌ನಲ್ಲಿ ಆಳ್ವಾಸ್‌ಗೆ ಅವಳಿ ಸಮಗ್ರ ಪ್ರಶಸ್ತಿ, ಹುಡುಗರ ವಿಭಾಗದಲ್ಲಿ 5 ಚಿನ್ನ; ಹುಡುಗಿಯರ ವಿಭಾಗದಲ್ಲಿ 5 ಚಿನ್ನ, ಬೆಳ್ಳಿ–ಕಂಚಿನ ಪದಕಗಳ ಸಾಧನೆ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಮಂಗಳೂರಿನ ಬದ್ರಿಯಾ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜು ವೇಟ್‌ಲಿಫ್ಟಿಂಗ್‌ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜು ಹುಡುಗರ ಹಾಗೂ ಹುಡುಗಿಯರ ಎರಡೂ ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿ ಗೆದ್ದು ಅವಳಿ ಗೌರವಕ್ಕೆ ಪಾತ್ರವಾಗಿದೆ. ಹುಡುಗರ ವಿಭಾಗದಲ್ಲಿ ಆಳ್ವಾಸ್ ತಂಡದ ಕ್ರೀಡಾಪಟುಗಳು ಐದು ವಿಭಾಗಗಳಲ್ಲೂ ಪ್ರಥಮ ಸ್ಥಾನ ಪಡೆದು ಐದು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡರು. 60 ಕೆ.ಜಿ. ವಿಭಾಗದಲ್ಲಿ ಸಂತೋಷ್, 71 ಕೆ.ಜಿ.ಯಲ್ಲಿ ಪ್ರಫುಲ್, […]