Tuesday, August 25, 2026
BREAKING NEWS

state

ರಾಜ್ಯದಲ್ಲಿ ಮಳೆ ಕೊರತೆ: 189 ತಾಲೂಕುಗಳಲ್ಲಿ ಬರದ ಛಾಯೆ: ಡಿಸಿಎಂ ಡಾ. ಪರಮೇಶ್ವರ್

ಬೆಂಗಳೂರು: ಮುಂಗಾರು ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಬರದ ಪರಿಸ್ಥಿತಿ ಉಲ್ಬಣಗೊಂಡಿದ್ದು, 240 ತಾಲೂಕುಗಳ ಪೈಕಿ 189 ತಾಲೂಕುಗಳು ಮಳೆ ಕೊರತೆಯನ್ನು ಎದುರಿಸುತ್ತಿವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸೋಮವಾರ ಉಭಯ ಸದನಗಳಲ್ಲಿ ಮಾತನಾಡಿದ ಅವರು, ಜೂನ್‌ 1ರಿಂದ ಆ.24ರವರೆಗೆ ರಾಜ್ಯದಲ್ಲಿ 654 ಮಿ.ಮೀ. ಮಳೆಯಾಗಬೇಕಿತ್ತು. ಆದರೆ 454 ಮಿ.ಮೀ. ಮಳೆಯಾಗಿದ್ದು, ಶೇ.31ರಷ್ಟು ಮಳೆ ಕೊರತೆಯಾಗಿದೆ ಎಂದರು. ಉತ್ತರ ಒಳನಾಡಿನಲ್ಲಿ ಶೇ.31, ದಕ್ಷಿಣ ಒಳನಾಡಿನಲ್ಲಿ ಶೇ.41, ಮಲೆನಾಡಿನಲ್ಲಿ ಶೇ.35 ಹಾಗೂ […]

ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಆಳ್ವಾಸ್ ಶಾಲೆಯ ನಾಲ್ಕು ಮಂದಿ ರಾಜ್ಯಮಟ್ಟಕ್ಕೆ

ಮೂಡುಬಿದಿರೆ: ಜಿಲ್ಲಾ ಮಟ್ಟದ 14 ಹಾಗೂ 17 ವರ್ಷ ವಯೋಮಿತಿಯ ಈಜು ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು 12 ಪದಕಗಳನ್ನು ಗೆದ್ದು ಗಮನ ಸೆಳೆದಿದ್ದು, ನಾಲ್ವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ (ಆಡಳಿತ), ಮಂಗಳೂರು ಹಾಗೂ ಬ್ಯಾರೀಸ್ ಪಬ್ಲಿಕ್ ಸ್ಕೂಲ್, ಲೇಡಿಹಿಲ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಈಜು ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು ಮೂರು ಚಿನ್ನ, ಆರು ಬೆಳ್ಳಿ […]

District News

ಕೇರಳ ಸಮಾಜಂನಲ್ಲಿ ಓಣಂ ಸಂಭ್ರಮ: ಸಾಂಸ್ಕೃತಿಕ ಕಾರ್ಯಕ್ರಮ, ಓಣಂಗೆ ಡಾ. ಎ.ಜೆ. ಶೆಟ್ಟಿ ಚಾಲನೆ

ಮಂಗಳೂರು: ಕೇರಳದ ಸಾಂಸ್ಕೃತಿಕ ಪರಂಪರೆ, ಕಲೆ ಹಾಗೂ ಸೌಹಾರ್ದದ ಸಂದೇಶ ಸಾರುವ ಓಣಂ ಹಬ್ಬವನ್ನು ಕೇರಳ ಸಮಾಜಂ ಮಂಗಳೂರು ವತಿಯಿಂದ ನಗರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕೂಟಕಲಾ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಪ್ರದರ್ಶನಗಳು ಹಾಗೂ ಸಾಂಪ್ರದಾಯಿಕ ಓಣಂ ಸಂಭ್ರಮ ಗಮನ ಸೆಳೆದವು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇರಳ ಸಮಾಜಂ ಮಂಗಳೂರು ಅಧ್ಯಕ್ಷ ಟಿ.ಕೆ. ರಾಜನ್ ವಹಿಸಿದ್ದರು. ಸಮಾಜದ ಕಾರ್ಯದರ್ಶಿ ಮ್ಯಾಕ್ಸಿನ್ ಸೆಬಾಸ್ಟಿಯನ್ ಸ್ವಾಗತಿಸಿ, ಗಣ್ಯರು, ಸದಸ್ಯರು ಹಾಗೂ ಸಾರ್ವಜನಿಕರಿಗೆ ಓಣಂ ಶುಭಾಶಯ ಕೋರಿದರು. ಎ.ಜೆ. ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ […]

crime

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ವಶಕ್ಕೆ, ನ್ಯಾಯಾಲಯ ಆದೇಶ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಗುಂಡಿನ ದಾಳಿ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶ ನೀಡಿದೆ. ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಬಂಧಿತ ಆರೋಪಿಗಳು. ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರನ್ನೂ ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. […]

ಗ್ರಾ.ಪಂ, ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ, ಆರೋಪಿಗಳು ಪರಾರಿ,ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡು

ಪಡುಬಿದ್ರೆ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ (55) ಎಂಬುವವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮುದರಂಗಡಿ ಎಂಬಲ್ಲಿ ನಡೆದಿದೆ. ಮುದರಂಗಡಿ ಗ್ರಾಮದ ಪಿಲಾರು ನಿವಾಸಿ ಡೇವಿಡ್ ಡಿಸೋಜ, ಮುದರಂಗಡಿಯಲ್ಲಿರುವ ಕಚೇರಿಯಿಂದ ಹತ್ತಿರ ಮುದರಂಗಡಿ ಸಂತ್ ಫ್ರಾನ್ಸಿಸ್ ಜೆವಿಯರ್ ಚರ್ಚ್‌ನ ಎದುರು ನಿಲ್ಲಿಸಿದ್ದ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿ ಪರಾರಿ ಆಗಿದ್ದಾರೆ. ಗಂಭೀರ ಗಾಯಗೊಂಡಿದ್ದ […]

ಉಡುಪಿ: ಖಾಸಗಿ ಬಸ್‌ ಡಿಕ್ಕಿ, ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸಾವು

ಉಡುಪಿ: ಉಡುಪಿ ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಸಮೀಪ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್  (37) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಡಿಯಾಳಿ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ, ಬಳಿಕ ಅವರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದರು. ಅಲ್ಲಿಂದ ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಡಿಕ್ಕಿ ರಭಸಕ್ಕೆ […]

health

ಸಾಂಕ್ರಾಮಿಕ ರೋಗ, ಎಚ್‌1ಎನ್‌1 ತಡೆಗೆ ಆರೋಗ್ಯ ಇಲಾಖೆ ಸನ್ನದ್ಧ, 4,212 ಇನ್‌ಫ್ಲುಯೆಂಜಾ ಪ್ರಕರಣ: ಸಚಿವ ಖಾದರ್

ಬೆಂಗಳೂರು: ರಾಜ್ಯದಲ್ಲಿ ಋತುಮಾನದ ಜ್ವರ ಹಾಗೂ ಎಚ್‌1ಎನ್‌1 ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಚಿಕಿತ್ಸಾ ಸಿದ್ಧತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ರಾಜ್ಯದ ಎಲ್ಲ ಜಿಲ್ಲೆಗಳ ಆರೋಗ್ಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ವಿಡಿಯೊ ಸಂವಾದ ನಡೆಸಿದರು. ಪ್ರಕರಣಗಳ ಸಂಖ್ಯೆ ಹೆಚ್ಚಾದರೂ ಅಥವಾ ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮರ್ಥವಾಗಿ ನಿಭಾಯಿಸಲು ರಾಜ್ಯದ ಆರೋಗ್ಯ ವ್ಯವಸ್ಥೆ ಸಜ್ಜಾಗಿದೆ. ಅಗತ್ಯ ಮೂಲಸೌಕರ್ಯ, ಔಷಧಗಳು ಹಾಗೂ ವೈದ್ಯಕೀಯ […]

Sports

ಬಿಸಲಕೊಪ್ಪ ವಲಯ ಮಟ್ಟದ ಕ್ರೀಡಾಕೂಟಕ್ಕೆ ಬಿಇಒ ಎಂ.ಎಚ್. ನಾಯ್ಕ್ ಚಾಲನೆ

ಸಿರಸಿ: ಕ್ರೀಡಾಕೂಟಗಳು ಮಕ್ಕಳಲ್ಲಿ ಕ್ರೀಡಾ ಪ್ರತಿಭೆಯ ಜತೆಗೆ ಶಿಸ್ತು, ಸಮಯಪ್ರಜ್ಞೆ ಹಾಗೂ ತಂಡದ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ್ ಹೇಳಿದರು. ಬಿಸಲಕೊಪ್ಪದಲ್ಲಿ 2026-27ನೇ ಸಾಲಿನ 14 ವರ್ಷ ವಯೋಮಾನದೊಳಗಿನವರ ವಲಯ ಮಟ್ಟದ ಕ್ರೀಡಾಕೂಟಕ್ಕೆ ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಸಮೂಹ ಸಂಪನ್ಮೂಲ ಕೇಂದ್ರ ದಮನಬೈಲ್‌ನ ನೇತೃತ್ವ ಹಾಗೂ ಸಂಘಟನೆಯಲ್ಲಿ ಕ್ರೀಡಾಕೂಟ ಅಚ್ಚುಕಟ್ಟಾಗಿ ನಡೆಯಿತು. ಶಿರಸಿ […]