Thursday, July 02, 2026
BREAKING NEWS

state

ನಾಲ್ಕು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರಕಾರವು ಸ್ಥಳ ನಿರೀಕ್ಷೆಯಲ್ಲಿದ್ದ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಗಣಿಗಾರಿಕೆ ಪರಿಸರ ಮರುಸ್ಥಾಪನಾ ನಿಗಮ (ಕೆಎಂಇಆರ್‍ಸಿ)ದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಅಭಿರಾಮ್ ಜಿ. ಶಂಕರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಅಭಿರಾಮ್ ಜಿ. ಶಂಕರ್ ಅವರನ್ನು ಐಎಫ್‍ಎಸ್ ಅಧಿಕಾರಿ ಡಾ. ಸಂಜಯ್ ಎಸ್.ಬಿಜ್ಜೂರ್ ಅವರಿಂದ ತೆರವು ಆಗುತ್ತಿರುವ ಸ್ಥಾನಕ್ಕೆ ನಿಯೋಜನೆ ಮಾಡಲಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ(ಐಟಿ-ಬಿಟಿ) ಇಲಾಖೆಯ ನಿರ್ದೇಶಕರನ್ನಾಗಿ ಡಾ.ಅವಿನಾಶ್ ಮೆನನ್ ಅವರನ್ನು ನೇಮಿಸಿದ್ದು, ಇದರ […]

ಮಂಗಳೂರು: ಮನೆ ಮೇಲೆ ಕುಸಿದು ಬಿದ್ದ ತಡೆಗೋಡೆ, ಮೂರು ಮಂದಿ ಸಾವು, ಸಚಿವ ಖಾದರ್ ದೆಹಲಿ ಪ್ರವಾಸ ರದ್ದು, ಅಧಿಕಾರಿಗಳು ಸ್ಥಳಕ್ಕೆ ದೌಡು

ಮಂಗಳೂರು: ಕಳೆದ ಕೆಲ ದಿನಗಳಿಂದ ವ್ಯಾಪಕವಾಗಿ ಸುರಿದ ಮಳೆಗೆ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆಯೊಂದು ಕುಸಿದು ಬಿದ್ದು ಪರಿಣಾಮ ಮಹಿಳೆ ಸೇರಿದಂತೆ ಮೂರು ಮಂದಿ ದುರಂತ ಸಾವು ಕಂಡಿರುವ ಘಟನೆ ನಡೆದಿದೆ. ಹೆಂಚಿನ ಚಾವಣಿಯ ಮನೆ ಕುಸಿದ ಪರಿಣಾಮ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಸಾವು ಕಂಡಿದ್ದಾರೆ. ಘಟನೆ ಸಂಭವಿಸಿದ ವೇಳೆ ಮನೆಯಲ್ಲಿ ಒಟ್ಟು ಆರು ಮಂದಿ ಇದ್ದರು ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಷ್ಟ್ರೀಯ ವಿಪತ್ತು […]

District News

ದೌರ್ಜನ್ಯ ಕುರಿತು ದೂರು: ಸಿದ್ದಾಪುರ ಶಾಲೆಗೆ ಭೇಟಿ ನೀಡಿದ ಪ್ರಭಾರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್

ಕಾರವಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಭಾರ ನಿರ್ವಹಿಸುತ್ತಿರುವ ಕುಮಾರ್ ಎನ್ ಅವರು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಿದ್ದಾಪುರ ತಾಲೂಕಿನ ಪ್ರೌಢಶಾಲೆಯೊಂದರಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆದಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾನಸೂರು ವಸತಿ ಶಾಲೆಯಲ್ಲಿ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣಕ್ಕೂ ಸಂಬಂಧಿಸಿದಂತೆ […]

crime

ಬೈಕಂಪಾಡಿ: ಕೇರಳ ಉದ್ಯಮಿ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡ, ಪತ್ನಿ-ಪುತ್ರನ ಅಪಹರಣ, 20 ಲಕ್ಷ ಮೌಲ್ಯದ ಸ್ವತ್ತು ದೋಚಿ ಪರಾರಿ

ಮಂಗಳೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಬೈಕಂಪಾಡಿಯಲ್ಲಿ ಸೋಮವಾರ ಸಿನಿಮೀಯ ರೀತಿಯಲ್ಲಿ ನಡೆದ ದರೋಡೆ ಪ್ರಕರಣ ವ್ಯಾಪಕ ಆತಂಕಕ್ಕೆ ಕಾರಣ ಆಗಿದೆ. ಉದ್ಯಮಿಯೊಬ್ಬರ ಕಾರ ಅನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು ಅವರ ಪತ್ನಿ ಹಾಗೂ ಮಗನನ್ನು ಕಾರಿನಲ್ಲೇ ಅಪಹರಿಸಿ, ಚಿನ್ನಾಭರಣ ದೋಚಿದ ಬಳಿಕ ರಸ್ತೆ ಬದಿಯಲ್ಲಿ ಬಿಟ್ಟು ಪರಾರಿ ಆಗಿದೆ. ದರೋಡೆಗೆ ಒಳಗಾದವರು ಕೇರಳ ಮೂಲದವರಾಗಿದ್ದು, ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಉದ್ಯಮ ನಡೆಸುತ್ತಿದ್ದಾರೆ. ಅವರು ಪತ್ನಿ ಹಾಗೂ ಮಗನ ಜತೆಗೆ ಕಾರಿನಲ್ಲಿ ಸಾಂಗ್ಲಿಯಿಂದ ಪಯ್ಯನ್ನೂರಿಗೆ ತೆರಳುತ್ತಿದ್ದ ವೇಳೆ […]

ಹಾಳದಕಟ್ಟಾ ದರೋಡೆ ಪ್ರಕರಣ ಭೇದಿಸಿದ ಸಿದ್ದಾಪುರ ಪೊಲೀಸರು; ಚಿನ್ನಾಭರಣ ದೋಚಿದ್ದ ಆರೋಪಿಯ ಸೆರೆ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಾಳದಕಟ್ಟಾದಲ್ಲಿ ಇತ್ತೀಚೆಗೆ ನಡೆದಿದ್ದ ಒಂಟಿ ಮಹಿಳೆಯ ಮೇಲಿನ ದರೋಡೆ ಪ್ರಕರಣವನ್ನು ಸಿರಸಿ–ಸಿದ್ದಾಪುರ ಪೊಲೀಸರು ಭೇದಿಸಿದ್ದು, ಕೃತ್ಯ ಎಸಗಿದ್ದ ಆರೋಪಿ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಬಂಧಿತ ಕೊಂಡ್ಲಿ ನಿವಾಸಿ ಹಾಗೂ ಕೂಲಿ ಕಾರ್ಮಿಕ ಮಹೇಶ ಹನುಮಂತ ಮಡಿವಾಳ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕಳವು ಮಾಡಿದ್ದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೂನ್ 22ರಂದು ಸಂಜೆ ಹಾಳದಕಟ್ಟಾದ ನಿವಾಸಿ ಪೂನಂ ಗಣಪತಿ ಶೇಟ್ ಅವರ ಮನೆಗೆ […]

ಕಡಬ: ಪತಿ, ಪತ್ನಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ಅನಾಥವಾದ ಮಗು, ಸ್ಥಳಕ್ಕೆ ಪೊಲೀಸರ ದೌಡು

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಆಲಂಕಾರು ಕಜೆ ಎಂಬಲ್ಲಿ ದಂಪತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಆಗಿದ್ದು, ದಂಪತಿ ಎರಡು ವರ್ಷದ ಹೆಣ್ಣು ಮಗು ಮನೆಯಲ್ಲಿ ಅನಾಥ ಸ್ಥಿತಿಯಲ್ಲಿ ಪತ್ತೆ ಆಗಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಪತ್ನಿ ಕೊಲೆ ಮಾಡಿದ ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಮೃತರನ್ನು ಬಜಗೋಳಿ ದಿನೇಶ್ ಹಾಗೂ ಪತ್ನಿ ಸಂಗೀತಾ ಎಂದು ಗುರುತಿಸಲಾಗಿದೆ. ಈ ದಂಪತಿ ಎರಡು ವರ್ಷದ ಹೆಣ್ಣು ಮಗುವಿನ […]

health

ಕ್ಷಣಿಕ ಸುಖಕ್ಕೆ ಮಾದಕ ವ್ಯಸನ ಬೇಡ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಕಿವಿಮಾತು

ಕಾರವಾರ: ಕ್ಷಣಿಕ ಸುಖಕ್ಕಾಗಿ ಯುವಜನತೆ ಮಾದಕ ದ್ರವ್ಯ ಹಾಗೂ ಮದ್ಯಪಾನದಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ವಿದ್ಯಾರ್ಥಿಗಳು ಇಂತಹ ವ್ಯಸನಗಳಿಂದ ಸಂಪೂರ್ಣ ದೂರವಿರಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಹೇಳಿದರು. ನಗರದ ಬಿಣಗಾದ ಸೋಮನಾಥ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಂಗಳವಾರ ನಡೆದ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕ್ಷಣಿಕ ಸಂತೋಷಕ್ಕಾಗಿ ಕೆಲವರು ಮಾದಕ ದ್ರವ್ಯ ಮತ್ತು ಮದ್ಯಪಾನದ ಮೊರೆ ಹೋಗುತ್ತಾರೆ. ಆದರೆ ಅದು ಅವರ ಶಿಕ್ಷಣ ಹಾಗೂ ಭವಿಷ್ಯದ […]

Sports

ಜೂನ್ 21ರಂದು 12 ನೇ ಅಂತರ ರಾಷ್ಟ್ರೀಯ ಯೋಗ ದಿನ: ಹೆಚ್ಚುವರಿ ಜಿಲ್ಲಾಧಿಕಾರಿ ರಾಜು

ಮಂಗಳೂರು: ಜೂನ್ 21ರಂದು ನಡೆವ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಯೋಜಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ. ಅವರು ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಯೋಗ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಗವು ದೇಹ ಮತ್ತು ಮನಸ್ಸಿನ ಸಮತೋಲನ ಕಾಪಾಡುವ ಅತ್ಯುತ್ತಮ ಸಾಧನವಾಗಿದೆ. ಈ ಹಿನ್ನೆಲೆಯಲ್ಲಿ ಯೋಗದ ಮಹತ್ವವನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ನಿಟ್ಟಿನಲ್ಲಿ […]

Follow Us

Advertisement

  • WP Notify  commented on Sample Page: Honey8 are you struggling to get comments on your
  • TikTok  commented on Auto Draft: John6 are you struggling to get comments on your b