Saturday, July 18, 2026
BREAKING NEWS

state

ಎಸ್‌ಐಆರ್‌, ಜಿಲ್ಲಾ ಸ್ವೀಪ್ ಸಮಿತಿ, ಆರೋಗ್ಯ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಚಾಲನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳಿಂದ ಉತ್ತಮ ಸಹಕಾರ ದೊರೆಯುತ್ತಿದ್ದು, ನಿಗದಿತ ಅವಧಿಗೂ ಮುನ್ನವೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸರ್ಕಾರಿ ನೌಕರರಿಗಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಶೇ […]

ಎನ್ಸಿಸಿ ಗೌರವ ಕರ್ನಲ್ ಹುದ್ದೆಗೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್ ನೇಮಕ

ಮಂಗಳೂರು: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್‌.ಜೆ. ಅವರಿಗೆ ಭಾರತ ಸರ್ಕಾರವು ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ (ಎನ್ಸಿಸಿ)ಯ ಗೌರವ ಕರ್ನಲ್ ಹುದ್ದೆ ಹಾಗೂ ‘ಕರ್ನಲ್ ಕಮಾಂಡೆಂಟ್’ ಗೌರವವನ್ನು ನೀಡಿದೆ. ಈ ಸಂಬಂಧದ ಅಧಿಕೃತ ನೇಮಕಾತಿ ಆದೇಶವನ್ನು ಜೂನ್‌ 25 ರಂದು ಹೊರಡಿಸಲಾಗಿದ್ದು, ಗುರುವಾರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಎನ್ಸಿಸಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಉಪ ಮಹಾನಿರ್ದೇಶಕ ಏರ್‌ ಕಮಾಂಡರ್ ಕಮಲ್ ಚಾಧಾ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. […]

District News

ಯಲ್ಲಾಪುರದಲ್ಲಿ ಆರೋಗ್ಯ ಕೇಂದ್ರ, ಅಂಗನವಾಡಿ ಹಾಗೂ ಅಪಘಾತ ಸ್ಥಳಕ್ಕೆ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೊಡಬೋಲೆ ಭೇಟಿ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಸುಷ್ಮಾ ಗೊಡಬೋಲೆ ಅವರು ಶುಕ್ರವಾರ ಯಲ್ಲಾಪುರ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಆರೋಗ್ಯ ಸೇವೆಗಳು, ಮೂಲಸೌಕರ್ಯ ಹಾಗೂ ಮಳೆಗಾಲದ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು. ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮುದಾಯ ಆರೋಗ್ಯ ಕೇಂದ್ರ ಮತ್ತು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು. ಯಲ್ಲಾಪುರ–ಅಂಕೋಲಾ […]

crime

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 5.20 ಕೋಟಿ ಮೌಲ್ಯದ ಎಂಡಿಎಂಎ ವಶ, ಬಾಗಲಕೋಟೆಯಲ್ಲಿ ಇಬ್ಬರ ಬಂಧನ

ಮಂಗಳೂರು: ಮಂಗಳೂರು, ಬೆಂಗಳೂರು ಹಾಗೂ ನೆರೆಯ ಕೇರಳ ರಾಜ್ಯಕ್ಕೆ ಪೂರೈಕೆಯಾಗಬೇಕಿದ್ದ 5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ದ್ರವ್ಯವನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಬಂಧನ ಮಾಡಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದರು. ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನದ ಭಾಗವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧನ […]

ಬಂಟ್ವಾಳ ಬಸ್‌ ನಿಲ್ದಾಣದಲ್ಲಿ ಯುವತಿ ಅಟ್ಟಾಡಿಸಿ ಹತ್ಯೆ; ಚಿಕಿತ್ಸೆಗೆ ಸ್ಪಂದಿಸದೇ ಯುವತಿ ಸಾವು, ಆರೋಪಿ ಪತ್ತೆಗೆ ಶೋಧ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್‌ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಗುರುವಾರ ಯುವತಿಯೊಬ್ಬರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕಕ್ಯಪದವು ನಿವಾಸಿ ಲಾವಣ್ಯ (21) ಮೃತ ಯುವತಿ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ಯುವತಿ ಮೃತಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಮಾತನಾಡಿ, ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದ್ದು, ಆತ ಮೃತ ಯುವತಿಯ ದೂರದ ಸಂಬಂಧಿಯಾಗಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ ಎನ್ನುವ ಮಾಹಿತಿ […]

ಕಲಬುರಗಿ ಜೈಲಿನಿಂದ ಕೈದಿಗಳ ಪರಾರಿ ಪ್ರಕರಣ: ಅಧೀಕ್ಷಕ ಸೇರಿ 9 ಸಿಬ್ಬಂದಿ ಅಮಾನತು

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಆರೋಪದಡಿ ಜೈಲು ಅಧೀಕ್ಷಕ ಸೇರಿದಂತೆ 9 ಮಂದಿ ಸಿಬ್ಬಂದಿ ಅಮಾನತುಗೊಳಿಸಲಾಗಿದೆ. ಕಾರಾಗೃಹ ಇಲಾಖೆಯ ಮಹಾನಿರ್ದೇಶಕ ಅಲೋಕ್ ಕುಮಾರ್ ಈ ಸಂಬಂಧ ಆದೇಶ ಹೊರಡಿಸಿದ್ದು, ಜೈಲಿನ ಭದ್ರತೆಯಲ್ಲಿ ಗಂಭೀರ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಅಮಾನತುಗೊಂಡವರಲ್ಲಿ ಜೈಲು ಅಧೀಕ್ಷಕ ರಾಕೇಶ್ ಕಾಂಬಳೆ, ಸಹಾಯಕ ಅಧೀಕ್ಷಕ ಬಿ. ಸುರೇಶ್, ಜೈಲರ್ ಶ್ರೀಮಂತಗೌಡ ಪಾಟೀಲ್ ಹಾಗೂ ರಾತ್ರಿ ಪಾಳಿಯ ವಾರ್ಡರ್‌ಗಳಾದ […]

health

ಎನ್‌ಎಂಸಿ ಅನುಮತಿ: ಆಳ್ವಾಸ್ ವೈದ್ಯಕೀಯ ಕಾಲೇಜಿನಲ್ಲಿ 150 ಎಂಬಿಬಿಎಸ್ ಸೀಟುಗಳಿಗೆ ಹಸಿರು ನಿಶಾನೆ, ಕರಾವಳಿಯ ವೈದ್ಯಕೀಯ ಶಿಕ್ಷಣಕ್ಕೆ ಹೊಸ ಮೈಲುಗಲ್ಲು: ಡಾ. ಆಳ್ವ

ಮೂಡುಬಿದಿರೆ: ಕರಾವಳಿ ಭಾಗದ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಬೆಳವಣಿಗೆಯಾಗಿ, ಮೂಡುಬಿದಿರೆಯ ಮಿಜಾರಿನಲ್ಲಿರುವ ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರಕ್ಕೆ 2026–27ನೇ ಶೈಕ್ಷಣಿಕ ವರ್ಷದಿಂದ 150 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಅಧಿಕೃತ ಅನುಮೋದನೆ ನೀಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ತಿಳಿಸಿದ್ದಾರೆ. ಈ ಅನುಮೋದನೆಯೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಹುಕಾಲದ ಮಹತ್ವಾಕಾಂಕ್ಷೆಯ ವೈದ್ಯಕೀಯ ಕಾಲೇಜು ಕಾರ್ಯರೂಪಕ್ಕೆ ಬರುತ್ತಿದ್ದು, ಮೊದಲ ವರ್ಷದಲ್ಲೇ 150 […]

ದ.ಕ ಜಿಲ್ಲೆಯಲ್ಲಿ 45 ಮಂದಿಗೆ ಪಿಎಂ ರಾಹತ್ ಚಿಕಿತ್ಸೆ, ರಸ್ತೆ ಅಪಘಾತದ ವ್ಯಕ್ತಿಗೆ ಸಿಗಲಿದೆ 1.50 ಲಕ್ಷ ಮೊತ್ತದ ಉಚಿತ ಸೌಲಭ್ಯ

ವೈದ್ಯರ ದಿನ, ಲೇಡಿಗೋಷನ್ ಆಸ್ಪತ್ರೆಯಲ್ಲಿ ಹಿರಿಯ ವೈದ್ಯರಿಗೆ ಸನ್ಮಾನ, ಸೇವೆ ಸ್ಮರಿಸಿದ ಡಾ. ದುರ್ಗಾಪ್ರಸಾದ್

ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾ ಕಾಲೇಜ್ ಜತೆ ತುಂಬೆ ಗ್ರೂಪ್ ಮಹತ್ವದ ಒಪ್ಪಂದ, ಯುಎಇಯಲ್ಲಿ ಮೊದಲ ಬಾರಿಗೆ ದೀರ್ಘಾಯುಷ್ಯ ವೈದ್ಯಕೀಯ ಶಿಕ್ಷಣ

ಕುದ್ರೋಳಿ, ಅಳಕೆ, ಡೊಂಗರಕೇರಿಯಲ್ಲಿ ಕಾಮಾಲೆ, ಡೆಂಗೆ ಪ್ರಕರಣ ಪತ್ತೆ, ಆತಂಕ ಬೇಡ: ಡಿಎಚ್ ಒ ಡಾ. ತಿಮ್ಮಯ್ಯ

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕುರಿತು ಹರಿದಾಡುತ್ತಿರುವ ಆರೋಪಗಳು ಸುಳ್ಳು: ಜಿಲ್ಲಾ ಸರ್ಜನ್ ಡಾ. ಅಶೋಕ್ ಸ್ಪಷ್ಟನೆ

Sports

40 ನೇ ವಯಸ್ಸಿನಲ್ಲಿ ಈಜು ಕಲಿತು, ಇಂಗ್ಲಿಷ್ ಚಾನೆಲ್ ಈಜಿದ ಮೊದಲ ಮಂಗಳೂರಿಗನಾಗಿರುವದು ನನಗೆ ಹೆಮ್ಮೆ: ಡಾ. ಗುರುಪ್ರಸಾದ್

ಮಂಗಳೂರು: ಪುತ್ರನಿಗೆ ಈಜು ಕಲಿಸುವ ಉದ್ದೇಶದಿಂದ 40ನೇ ವಯಸ್ಸಿನಲ್ಲಿ ಈಜು ಕಲಿತಿದ್ದೇ ತನ್ನ ಬದುಕಿನ ಮಹತ್ವದ ತಿರುವಾಯಿತು. ನಿರಂತರ ಅಭ್ಯಾಸ ಮತ್ತು ಆತ್ಮವಿಶ್ವಾಸದಿಂದ ಇಂಗ್ಲಿಷ್ ಚಾನೆಲ್ ರಿಲೇ ಈಜು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಯಿತು ಎಂದು ಕಣಚೂರು ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ. ಗುರುಪ್ರಸಾದ್ ಹೇಳಿದರು. ನಗರದ ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 3ರಂದು ಭಾರತದಿಂದ ಆರು ಸದಸ್ಯರ ತಂಡ ಇಂಗ್ಲೆಂಡ್‌ನಿಂದ ಫ್ರಾನ್ಸ್‌ವರೆಗೆ ಇಂಗ್ಲಿಷ್ ಚಾನೆಲ್ ರಿಲೇ ಈಜನ್ನು 13 ಗಂಟೆ 5 ನಿಮಿಷಗಳಲ್ಲಿ […]

Follow Us

Advertisement

ಯಲ್ಲಾಪುರದಲ್ಲಿ ಆರೋಗ್ಯ ಕೇಂದ್ರ, ಅಂಗನವಾಡಿ ಹಾಗೂ ಅಪಘಾತ ಸ್ಥಳಕ್ಕೆ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೊಡಬೋಲೆ ಭೇಟಿ

ಎಸ್‌ಐಆರ್‌, ಜಿಲ್ಲಾ ಸ್ವೀಪ್ ಸಮಿತಿ, ಆರೋಗ್ಯ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಚಾಲನೆ

ಎನ್ಸಿಸಿ ಗೌರವ ಕರ್ನಲ್ ಹುದ್ದೆಗೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್ ನೇಮಕ

ಭಾರಿ ಮಳೆ: ಅಂಕೋಲಾ ತಾಲೂಕಿನ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಣೆ

4 ಜಿಲ್ಲೆಗೆ ಒಬ್ಬರಿಗೆ ಉಸ್ತುವಾರಿ, ಮೊದಲು ಬರ ಅಧ್ಯಯನಕ್ಕೆ ತಂಡ ಕಳಿಸಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಹೊಣೆ ವಹಿಸಿ: ಭೋಜೇಗೌಡ

  • WP Notify  commented on Sample Page: Honey8 are you struggling to get comments on your
  • TikTok  commented on Auto Draft: John6 are you struggling to get comments on your b