Sunday, July 12, 2026
BREAKING NEWS

state

ಸಹ್ಯಾದ್ರಿಯಲ್ಲಿ ‘ವಿಸ್ತಾರಾ–2026: ನವೋದ್ಯಮಗಳಿಗೆ ಮಾರ್ಗದರ್ಶನ, ಹೂಡಿಕೆ, ಸಹಯೋಗಕ್ಕೆ ವೇದಿಕೆ

ಮಂಗಳೂರು: ಶೈನ್ ಫೌಂಡೇಷನ್ ಕರ್ನಾಟಕ ಆಕ್ಸಿಲರೇಷನ್ ನೆಟ್‌ವರ್ಕ್ (ಕೆಎಎನ್) ಉಪಕ್ರಮದಡಿ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕ್ಯಾಂಪಸ್‌ನಲ್ಲಿ 2 ದಿನಗಳ ಕಾಲ ಆಯೋಜಿಸಿದ್ದ ವಿಸ್ತಾರಾ–2026 ಮುಕ್ತ ಸಂವಾದ ಮತ್ತು ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ಎರಡು ದಿನಗಳ ಕಾರ್ಯಕ್ರಮದಲ್ಲಿ 55 ಕ್ಕೂ ಹೆಚ್ಚು ನವೋದ್ಯಮ ಸಂಸ್ಥಾಪಕರು, ಉದ್ಯಮಿಗಳು, ವಿದ್ಯಾರ್ಥಿಗಳು, ಪರಿಸರ ವ್ಯವಸ್ಥೆಯ ಪ್ರತಿನಿಧಿಗಳು ಹಾಗೂ ನಾವೀನ್ಯಕಾರರು ಭಾಗವಹಿಸಿ ಉದ್ಯಮಶೀಲತೆ, ಹೂಡಿಕೆ, ಸಹಯೋಗ ಮತ್ತು ವ್ಯವಹಾರ ಬೆಳವಣಿಗೆಯ ಕುರಿತು ಚರ್ಚಿಸಿದರು. ಕಾರ್ಯಕ್ರಮವನ್ನು ಸಿಎಸ್ ಮನು ಫ್ರಾನ್ಸಿಸ್, ರೋಹಿತ್ […]

20 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡು ಹಾಡಿದ ಸ್ವರದೇವತೆ ಎಸ್ ಜಾನಕಿ

ಬೆಂಗಳೂರು: ಗಾನ ಕೋಗಿಲೆ ಎಸ್. ಜಾನಕಿ ಅವರು ಕನ್ನಡದ ಜತೆಗೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ 20 ಕ್ಕೂ ಹೆಚ್ಚು ಭಾಷೆಗಳಲ್ಲಿ 48,000 ಕ್ಕೂ ಅಧಿಕ ಹಾಡುಗಳನ್ನ ಹಾಡಿರುವ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಕೇವಲ ಗಾಯಕಿಯಷ್ಟೇ ಅಲ್ಲ, ಭಾರತೀಯ ಚಿತ್ರ ಸಂಗೀತದ ದೈತ್ಯ ಶಕ್ತಿ, ಹಾಡು ನಿಲ್ಲಿಸಿದ್ದು ಕೋಟ್ಯಂತರ ಅಭಿಮಾನಿಗಳಲ್ಲಿ ಇನ್ನು ನೆನಪು ಮಾತ್ರ. ಡಾ. ರಾಜ್‌ಕುಮಾರ್ ಮತ್ತು ಎಸ್. ಜಾನಕಿ ಅವರ ಜೋಡಿ ಹಾಡುಗಳು ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಟ್ರೆಂಡ್ ಸೃಷ್ಟಿ ಮಾಡಿತ್ತು. ಎಸ್. ಪಿ. […]

District News

ಸಹ್ಯಾದ್ರಿಯಲ್ಲಿ ‘ವಿಸ್ತಾರಾ–2026: ನವೋದ್ಯಮಗಳಿಗೆ ಮಾರ್ಗದರ್ಶನ, ಹೂಡಿಕೆ, ಸಹಯೋಗಕ್ಕೆ ವೇದಿಕೆ

ಮಂಗಳೂರು: ಶೈನ್ ಫೌಂಡೇಷನ್ ಕರ್ನಾಟಕ ಆಕ್ಸಿಲರೇಷನ್ ನೆಟ್‌ವರ್ಕ್ (ಕೆಎಎನ್) ಉಪಕ್ರಮದಡಿ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕ್ಯಾಂಪಸ್‌ನಲ್ಲಿ 2 ದಿನಗಳ ಕಾಲ ಆಯೋಜಿಸಿದ್ದ ವಿಸ್ತಾರಾ–2026 ಮುಕ್ತ ಸಂವಾದ ಮತ್ತು ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ಎರಡು ದಿನಗಳ ಕಾರ್ಯಕ್ರಮದಲ್ಲಿ 55 ಕ್ಕೂ ಹೆಚ್ಚು ನವೋದ್ಯಮ ಸಂಸ್ಥಾಪಕರು, ಉದ್ಯಮಿಗಳು, ವಿದ್ಯಾರ್ಥಿಗಳು, ಪರಿಸರ ವ್ಯವಸ್ಥೆಯ ಪ್ರತಿನಿಧಿಗಳು ಹಾಗೂ ನಾವೀನ್ಯಕಾರರು ಭಾಗವಹಿಸಿ ಉದ್ಯಮಶೀಲತೆ, ಹೂಡಿಕೆ, ಸಹಯೋಗ ಮತ್ತು ವ್ಯವಹಾರ ಬೆಳವಣಿಗೆಯ ಕುರಿತು ಚರ್ಚಿಸಿದರು. ಕಾರ್ಯಕ್ರಮವನ್ನು ಸಿಎಸ್ ಮನು ಫ್ರಾನ್ಸಿಸ್, ರೋಹಿತ್ […]

crime

ಮಣಿಪಾಲ: ತೋಡಿಗೆ ಉರುಳಿ ಬಿದ್ದ ಬಸ್, 7 ಮಂದಿ ವಿದ್ಯಾರ್ಥಿಗಳಿಗೆ ಗಾಯ

ಮಣಿಪಾಲ: ಶಾಲಾ ಬಸ್ ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸರಳೆಬೆಟ್ಟು ಕೊಡಂಗೆ ದೇವಸ್ಥಾನದ ಸಮೀಪ ನಡೆದಿದೆ. ಮಣಿಪಾಲ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಸ್ಕೂಲ್ ಬಸ್ ತಿರುವಿನಲ್ಲಿ ಹಿಂದಕ್ಕೆ ತೆಗೆಯುವಾಗ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ತೋಡಿಗೆ ಉರುಳಿ ಬಿದ್ದಿದೆ ಎಂದು ತಿಳಿದು ಬಂದಿದೆ. ಈ ಬಸ್ ನಲ್ಲಿ 20 ಮಕ್ಕಳಿದ್ದು, ಇದರಲ್ಲಿ ಏಳು ಮಕ್ಕಳಿಗೆ ಗಾಯಗಳಾಗಿವೆ. ಈ ಪೈಕಿ ಬಾಲಕಿಗೆ ತೀವ್ರ ಗಾಯಗಳಾಗಿವೆ, […]

ಯಲ್ಲಾಪುರ: ಭೀಕರ ರಸ್ತೆ ಅಪಘಾತ 7 ಮಂದಿ ಸಾವು, ಡಿಸಿ ಲಕ್ಷ್ಮಿಪ್ರಿಯಾ, ಎಸ್ಪಿ ದೀಪನ್ ಸ್ಥಳಕ್ಕೆ ದೌಡು, ಪರಿಶೀಲನೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಆರತಿಬೈಲ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟಿರುವುದು ಜಿಲ್ಲೆಯಲ್ಲಿ ಸೂತಕದ ವಾತಾವರಣ ನಿರ್ಮಾಣ ಮಾಡಿದೆ. ಕ್ರೂಸರ್ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಪ್ರಯಾಣಿಸುವವರಲ್ಲಿ ಭಯ ಹುಟ್ಟಿಸಿದೆ. ಘಟನೆಯಲ್ಲಿ ಮೃತಪಟ್ಟವರು ಧಾರವಾಡದ ಬಸವರಾಜ್ ಕನಕನವರ್ (48), ಧಾರವಾಡ ಜಯನಗರದ ಅಭಿಷೇಕ ಈಶ್ವರ (28) ವರ್ಷ, ಸಾಧನಕೇರಿಯ ಅಕ್ಷಯ (26), ಸಪ್ತಾಪುರದ ಅಭಿಷೇಕ ಮಲ್ಲೇಶ ಮಡಬಾವಿ (26), ಕುರುಬಗಟ್ಟಿಯ ಸಂಜೀವ […]

ಕಲಬುರಗಿ: ಸಶಸ್ತ್ರ ಮೀಸಲು ಪೊಲೀಸ್​​ ಪಡೆಯ ಪೊಲೀಸ್​​ ಕಾನ್ ಸ್ಟೆಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕಲಬುರಗಿ: ನಗರದ ಜಗತ್​ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಸಶಸ್ತ್ರ ಮೀಸಲು ಪೊಲೀಸ್​​ ಪಡೆಯ ಪೊಲೀಸ್​​ ಕಾನ್ ಸ್ಟೆಬಲ್ ಸೇವಾ ರೈಫಲ್‌ನಿಂದಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದ ಶಿವಕುಮಾರ ನರಿಬೋಳ (32) ಮೃತ ಕಾನ್ ಸ್ಟೆಬಲ್ ಎಂದು ಗುರುತಿಸಲಾಗಿದೆ. ಜಗತ್ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ, ಪೊಲೀಸ್ ವಾಹನದಲ್ಲಿ ಕುಳಿತಿದ್ದ ವೇಳೆ ತಮ್ಮ ಬಳಿಯಿದ್ದ ಸರ್ಕಾರಿ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಘಟನಾ […]

health

ಕುದ್ರೋಳಿ, ಅಳಕೆ, ಡೊಂಗರಕೇರಿಯಲ್ಲಿ ಕಾಮಾಲೆ, ಡೆಂಗೆ ಪ್ರಕರಣ ಪತ್ತೆ, ಆತಂಕ ಬೇಡ: ಡಿಎಚ್ ಒ ಡಾ. ತಿಮ್ಮಯ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಮಾಲೆ (ಜಾಂಡಿಸ್) ಹಾಗೂ ಡೆಂಗೆ ಪ್ರಕರಣಗಳು ನಿಧಾನವಾಗಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕ ಪಡುವ ಬದಲು ವೈಯಕ್ತಿಕ ಸ್ವಚ್ಛತೆ, ಸುರಕ್ಷಿತ ಕುಡಿವ ನೀರಿನ ಬಳಕೆ ಹಾಗೂ ಸೊಳ್ಳೆ ನಿಯಂತ್ರಣ ಕ್ರಮಗಳ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಡಿಎಚ್ ಒ ಡಾ. ಎಚ್.ಆರ್. ತಿಮ್ಮಯ್ಯ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಂಗಳೂರಿನ ಕುದ್ರೋಳಿ, ಅಳಕೆ ಹಾಗೂ ಡೊಂಗರಕೇರಿ ಪ್ರದೇಶಗಳಲ್ಲಿ ಜೂನ್ 23 ರಿಂದ ಇದೂವರೆಗೆ 19 ಕಾಮಾಲೆ ರೋಗದ ಪ್ರಕರಣಗಳು […]

Sports

ಹೊರ ಜಿಲ್ಲೆಗಳಿಂದ ರೋಗಿಗಳ ಶಿಫಾರಸು ಮಾಡುವಾಗ ಹೆಲ್ಪ್ ಡೆಸ್ಕ್ ಸಂಪರ್ಕಿಸಿ, ನಂತರ ಪರದಾಟ ಬೇಡ, ದ.ಕ. ಜಿಲ್ಲೆಯ ರೋಗಿಗಳಿಗೂ ವೆನ್ಲಾಕ್ ಆಸ್ಪತ್ರೆ ಸೌಲಭ್ಯ ಸಿಗಲಿ: ಅಧೀಕ್ಷಕ ಡಾ. ಶಿವಪ್ರಕಾಶ್

ಮಂಗಳೂರು: ರಾಜ್ಯದ ಹೊರ ಜಿಲ್ಲೆಗಳಿಂದ ತುರ್ತು ಚಿಕಿತ್ಸೆಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳನ್ನು ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಐಸಿಯು ಹಾಸಿಗೆ ಕೊರತೆ ಕಾಡುತ್ತಿದೆ. ಪರಿಣಾಮ ಒತ್ತಡ ಹೆಚ್ಚಿದ್ದು, ರೋಗಿಗಳನ್ನು ಶಿಫಾರಸು ಮಾಡುವ ಮೊದಲು ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯತೆ ಪರಿಶೀಲಿಸುವ ವ್ಯವಸ್ಥೆ ಕಡ್ಡಾಯಗೊಳಿಸಬೇಕು. ಇದಕ್ಕಾಗಿ ಸಹಾಯವಾಣಿ ವ್ಯವಸ್ಥೆ ಮಾಡಲಾಗಿದೆ. ಹೊರ ಜಿಲ್ಲೆಗಳ ರೋಗಿಗಳನ್ನು ಏಕಾಏಕಿ ಕರೆತರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಾಕಷ್ಟು ಅರ್ಹ ಬಡ ರೋಗಿಗಳಿಗೆ ವೆನ್ಲಾಕ್ ಆಸ್ಪತ್ರೆಯ ಲಾಭ ಸಿಗದೇ ಇರುವಂತಹ ಸ್ಥಿತಿ ನಿರ್ಮಾಣ ಆಗಿದೆ […]

Follow Us

Advertisement

  • WP Notify  commented on Sample Page: Honey8 are you struggling to get comments on your
  • TikTok  commented on Auto Draft: John6 are you struggling to get comments on your b