Breaking News

ಬಾವಿಗೆ ಬಿದ್ದ ವ್ಯಕ್ತಿ:  ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ

 

ಮೂಡುಬಿದಿರೆ: ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಪ್ರಾಣಾಪಾಯದಲ್ಲಿದ್ದ ವ್ಯಕ್ತಿಯನ್ನು ಅಗ್ನಿಶಾಮಕದ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ಬೆಳುವಾಯಿಯಲ್ಲಿ ನಡೆದಿದೆ.

ಪಡುಮಾರ್ನಾಡಿನ ನಿವಾಸಿ 60 ವರ್ಷದ  ಶ್ರೀನಿವಾಸ ಎಂಬವರು ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ.
ಶ್ರೀನಿವಾಸ ಅವರು ಕೂಲಿ ಕೆಲಸಕ್ಕೆ ಬೆಳುವಾಯಿಗೆ ಹೋಗುತ್ತಿದ್ದಾಗ ಗೀತಾ ಕ್ಲಿನಿಕ್  ಎದುರಿಗೆ ಇದ್ದ ಬಾವಿಗೆ ಅಕಸ್ಮಿಕವಾಗಿ ಕಾಲು ಜಾರಿ ಬಿದ್ದಿದದ್ದರು ಎಂದು ಗೊತ್ತಾಗಿದೆ.

  1.  

ಅಗ್ನಿಶಾಮಕ ಠಾಣಾಧಿಕಾರಿ ಸ್ಟೀಫನ್ ಡಿಸಿಲ್ವಾ ಅವರ ನೇತೃತ್ವದಲ್ಲಿ ಅಗ್ನಿಶಾಮಕ  ಸಿಬ್ಬಂದಿ ಮಹಮ್ಮದ ಕೆ
ಅಗ್ನಿಶಾಮಕ ಚಾಲಕ ಸುರೇಶ ರಾಠೋಡ,  ಪುಂಡಲೀಕ ಎನ್, ಗೃಹರಕ್ಷಕ ಸಿಬ್ಬಂದಿ ಆನಂದ, ಲತೇಶ್, ಸನ್ಮತ್ ಅವರು ಸಾರ್ವಜನಿಕರ ಸಹಕಾರದೊಂದಿಗೆ ಶ್ರೀನಿವಾಸ ಅವರನ್ನು ರಕ್ಷಣೆ ಮಾಡಲಾಗಿದೆ.

ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com