Breaking News

ಎಚ್ಡಿಕೆ ಆರೋಪಕ್ಕೆ ಆರಗ ಜ್ಞಾನೇಂದ್ರ ಕೊಟ್ಟ ಉತ್ತರ ಏನು?

 

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಆಗಿದ್ದ ಎಚ್ .ಡಿ. ಕುಮಾರಸ್ವಾಮಿ ಅವರು ಅತ್ಯಂತ ಬೇಜವಾಬ್ದಾರಿಯಿಂದ ಹೇಳಿಕೆ ನೀಡಿರುವುದು ಸತ್ಯಕ್ಕೆ ದೂರವಾಗಿದೆ. ಸ್ಯಾಂಟ್ರೊ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದ ಎಂಬ ಹಸಿ ಸುಳ್ಳು ಹೇಳುವ ಮೂಲಕ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

  1.  

ಕುಮಾರ ಸ್ವಾಮಿ ಅವರು ನನ್ನ ಮೇಲೆ ಮಾಡಿರುವ ಆಪಾದನೆಯನ್ನು ಸಾಬೀತು ಪಡಿಸಬೇಕು. ಸಾಂಟ್ರೋ ರವಿ ಹಿನ್ನೆಲೆಯ ಬಗ್ಗೆ ತನಿಖೆ ನಡೆಸಿ ವಿಚಾರಣೆ ಮಾಡಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ. ನನ್ನ ಮನೆಯಲ್ಲಿ ಆತ ಹಣದ ಗಂಟಅನ್ನು ಬಿಚ್ಚಿದ್ದಾನೆ ಎಂದು, ಕುಮಾರಸ್ವಾಮಿ ಅವರು ಮಾಡಿರುವ ಆರೋಪವು ಸತ್ಯಕ್ಕೆ ದೂರವಾಗಿದೆ. ನನ್ನನ್ನು ಯಾವ ಕಾರಣದಿಂದ ತೇಜೋವಧೆ ಮಾಡುತ್ತಿದ್ದಾರೆ ಎಂದು ತಿಳಿದಿಲ್ಲ. ಇದರಿಂದ ಅವರಿಗೆ ಯಾವ ರೀತಿ ಲಾಭ ಆಗುತ್ತದೆ ಎಂಬುದು ಗೊತ್ತಿಲ್ಲ. ಗೃಹ ಸಚಿವನಾದ ನನ್ನನ್ನು, ಸಮಾಜದ ಕಟ್ಟಕಡೆ ಜನರೂ ಒಳಗೊಂಡಂತೆ, ದಿನನಿತ್ಯ ನೂರಾರು ಮಂದಿ ಭೇಟಿ ಮಾಡುತ್ತಾರೆ. ಪ್ರತಿಯೊಬ್ಬರ ಹಿನ್ನೆಲೆಯನ್ನೂ ಸೋಸಿ ನೋಡಲಾಗುವುದಿಲ್ಲ ಎಂದು ಹೇಳಿದರು.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com