ಕುಂದಾಪುರ: ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66 ರ ತಲ್ಲೂರು ಸಮೀಪದ ರಾಜಾಡಿಯಲ್ಲಿ ನಡೆದಿದೆ.
ಕನ್ಯಾನ ಗ್ರಾಮದ ದಿವಂಗತ ಕುಪ್ಪಯ್ಯ ಶೆಟ್ಟಿ ಅವರ ಪುತ್ರ ರವಿರಾಜ್ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅನಾರೋಗ್ಯದಿಂದ ಬಳಲುತ್ತಿದ್ದ, ಕುಡಿತದ ಚಟಕ್ಕೆ ದಾಸನಾಗಿದ್ದ ಅತನನ್ನು ತಾಯಿ ಪರೀಕ್ಷೆಗೆಂದು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಅಲ್ಲಿಂದ ಹೇಳದೆ ಕೇಳದೇ ಬಂದು, ತಲ್ಲೂರು ಸಮೀಪದ ರಾಜಾಡಿ ಹೆದ್ದಾರಿಯಲ್ಲಿರುವ ಸೇತುವೆ ಮೇಲಿನಿಂದ ಹಾರಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ಮೃತ ದೇಹವನ್ನು ಮೇಲೆಕ್ಕೆ ತೆಗೆಯಲಾಯಿತು. ರವಿರಾಜ್ ಶೆಟ್ಟಿ ತಂದೆ ಕೆಲ ತಿಂಗಳ ಹಿಂದೆ ಅಪಘಾತದಲ್ಲಿ ಸಾವನ್ನಪ್ಪಿದ್ದ. ಸಹೋದರಿಗೆ ಮದುವೆ ಮಾಡಿಕೊಡಲಾಗಿದೆ. ಈಗ ಇದ್ದ ಒಬ್ಬ ಮಗನನ್ನು ತಾಯಿ ಕಳೆದುಕೊಂಡಂತಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.