ಮೂಡುಬಿದಿರೆ: ಟಿಪ್ಪರ ಚಾಲಕನಿಗೆ ಬುದ್ದಿ ಹೇಳಿದ್ದೇ ತಪ್ಪಾಯಿತು ಎಂದು ಕೋಪಗೊಂಡ ಟಿಪ್ಪರ್ ಚಾಲಕ ವ್ಯಕ್ತಿಗೆ ರಾಡ್ ನಿಂದ ಹೊಡೆದು, ಟಿಪ್ಪರ್ ಚಲಾಯಿಸಿ ಕೊಲೆ ಮಾಡಿದ ಘಟನೆ ಶುಕ್ರವಾರ ಮೂಡುಬಿದಿರೆ ಕೋಟೆಬಾಗಿಲಿನಲ್ಲಿ ನಡೆದಿದೆ. ಕೋಟೆಬಾಗಿಲಿನ ನಿವಾಸಿ ಪಯಾಝ್ (61) ಹತ್ಯೆಗೀಡಾದ ವ್ಯಕ್ತಿ.
ಫಯಾಝ್ ಅವರು ಶುಕ್ರವಾರ ಕೋಟೆಬಾಗಿಲು ಮಸೀದಿಗೆ ನಮಾಜ್ ಗೆ ತೆರಳುವ ಸಂದರ್ಭದಲ್ಲಿ ಕೋಟೆಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಆರೀಸ್ ಎಂಬಾತ ವೇಗವಾಗಿ ಟಿಪ್ಪರ್ ಚಲಾಯಿಸಿಕೊಂಡು ಬರುತ್ತಿದ್ದ, ಆಗ ಅಲ್ಲೇ ನಡೆದುಕೊಂಡು ಹೋಗುತ್ತಿದ್ದ ಫಯಾಝ್ ಅವರ ಮೇಲೆ ದೂಳು ಹಾರಿದ್ದರಿಂದ ಕೋಪಗೊಂಡ ಫಯಾಝ್ ನಿಧಾನವಾಗಿ ವಾಹನ ಚಲಾಯಿಸುವಂತೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ಟಿಪ್ಪರ್ ಚಾಲಕ ಫಯಾಜ್ ನಡುವೆ ಮಾತಿನ ಚಕಮಕಿ ನಡೆದಿದೆ.
ನಮಾಝ್ ಮುಗಿಸಿಕೊಂಡು ಹಿಂತಿರುವ ಸಂದರ್ಭದಲ್ಲಿಯೂ ಇವರಿಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿ ಆರೀಸ್ ರಾಡ್ ನಿಂದ ತಲೆಗೆ ಹೊಡೆದು ಟಿಪ್ಪರ್ ಅನ್ನು ಹಾಯಿಸಿ ಕೊಲೆ ಮಾಡಿದ್ದಾನೆ.
ಗಾಯಗೊಂಡಿದ ಫಯಾಜ್ ಅವರನ್ನು ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ. ಟಿಪ್ಪರ್ ಚಾಲಕ ಆರೀಸ್ ಟಿಪ್ಪರನ್ನು ಅರ್ಧ ದಾರಿಯಲ್ಲಿಯೇ ಬಿಟ್ಟು ಪರಾರಿಯಾಗಿದ್ದು, ಆರೀಸ್ ವಾಹನ ಚಲಾಯಿಸುತ್ತಿದ್ದ ವೇಳೆ ಗಾಂಜಾ ಸೇವನೆ ಮಾಡಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಚಾಲಕನ ಪತ್ತೆಗಾಗಿ ಮೂಡುಬಿದಿರೆ ಪೊಲೀಸರು ಬಲೆ ಬೀಸಿದ್ದಾರೆ.