ಮೂಡುಬಿದಿರೆ: ಕೋಟೆಬಾಗಿಲಿನ ನಿವಾಸಿ ಐಯಾಝ್ (61) ಎಂಬುವವರ ಮೇಲೆ ಟಿಪ್ಪರ್ ಹಾಯಿಸಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೀಸ್ ಎಂಬ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಸೋಮವಾರ ಉಲಾಯಿಬೆಟ್ಟುವಿನಲ್ಲಿ ಬಂಧನ ಮಾಡಿದ್ದಾರೆ.
ವಾಹನ ವೇಗವಾಗಿ ಚಲಾಯಿಸಿ ದೂಳು ಎಬ್ಬಿಸಬೇಡ ಎಂದಿದ್ದಕ್ಕೆ ಕಬ್ಬಿಣದ ರಾಡಿನಿಂದ ಹೊಡೆದ ಟಿಪ್ಪರ ಹಾಯಿಸಿ ಕೊಲೆ ಮಾಡಿ ನಾಪತ್ತೆ ಆಗಿದ್ದ, ಆದರೆ ಪೊಲೀಸರ ಕಾರ್ಯಾಚರಣೆಯಿಂದ ಆತನನ್ನು ಬಂಧನ ಮಾಡಿದ್ದಾರೆ.
ಪೊಲೀಸರು ಮೂರು ತಂಡ ರಚಿಸಿ ಆರೋಪಿ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದರು. ಆರೋಪಿಯನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.