ಸುಳ್ಯ: ಬಿಜೆಪಿ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿಯೇ ಇಲ್ಲ. ಅಭಿವೃದ್ದಿ ಮಾಡುವ ಬದಲು ಕಮಿಷನ್ ಧಂದೆಯಲ್ಲಿ ತೊಡಗಿಕೊಂಡಿದ್ದಾರೆ. ನಿರುದ್ಯೋಗ ಹೆಚ್ಚಾಗಿದೆ. ಡಬಲ್ ಎಂಜಿನ್ ಸರ್ಕಾರವು ಕಾರ್ಮಿಕರ ಹಕ್ಕು ಕಸಿಯುವ ಕೆಲಸ ಮಾಡುತ್ತಿದೆ. ಧರ್ಮದ ಅಮಲನ್ನು ಮುಗ್ದರಲ್ಲಿ ಬಿತ್ತು ರಾಜಕಾರಣ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಆಕ್ರೋಶ ಹೊರ ಹಾಕಿದರು.
ಬೆಳ್ಳಾರೆಯಲ್ಲಿ ನಡೆದ ಕರಾವಳಿ ಧ್ವನಿ ಯಾತ್ರೆ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿ, ತಾರತಮ್ಯ ಮಾಡುವ ಸರ್ಕಾರವನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳುಹಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮಾತನಾಡಿ, ಬಿಜೆಪಿ ಸುಳ್ಳು ಭರವಸೆಗಳನ್ನು ಯಾರೂ ಕೂಡ ನಂಬಬಾರದು ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಮಾಜಿ ಸಚಿವ ರಮಾನಾಥ ರೈ, ಶಾಸಕರಾದ ಯು.ಟಿ.ಖಾದರ್, ಮಂಜುನಾಥ ಭಂಡಾರಿ, ಮಾಜಿ ಶಾಸಕ ಮಧುಬಂಗಾರಪ್ಪ, ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಕೆ.ಹರೀಶ್ ಕುಮಾರ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಧನಂಜಯ ಅಡ್ಪಂಗಾಯ, ಪಿ.ಎಸ್.ಗಂಗಾಧರ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಹೇಮನಾಥ ಶೆಟ್ಟಿ ಕಾವು, ಎಂ.ಎಸ್.ಮಹಮ್ಮದ್, ಕಡಬ ಬ್ಲಾಕ್ ಅಧ್ಯಕ್ಷ ಚಿನ್ನಪ್ಪ ಗೌಡ, ಕೆಪಿಸಿಸಿ ಮಾಜಿ ಸಂಯೋಜಕ ಪ್ರದೀಪ್ ರೈ, ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಪ್ರವೀಣ ರೈ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ರಾಜೀವಿ ಆರ್ ರೈ, ಸರಸ್ವತಿ ಕಾಮತ್, ಚಂದ್ರಶೇಖರ ಕಾಮತ್, ಚಂದ್ರಲಿಂಗಂ, ಟಿ.ಎಂ.ಶಹೀದ್, ಸಂಶುದ್ದೀನ್, ನಂದಕುಮಾರ್, ಕೃಷ್ಣಪ್ಪ ಪೆರುವಾಜೆ ಗ್ರಾಮ ಪಂಚಾಯತಿ ಅಧ್ಯಕ್ಷ ಜಗನ್ನಾಥ ಪೂಜಾರಿ ,ಕಲ್ಮಡ್ಕ ಗ್ರಾಮ ಪಂಚಾಯತಿ ಅಧ್ಯಕ್ಷೆ ಹಾಜಿರಾ, ವಿಶ್ವನಾಥ ರೈ ಕಳಂಜ, ಶ್ಯಾಮಸುಂದರ ರೈ ಇದ್ದರು.