Breaking News

ಜ್ಯುವೆಲರಿ ಸಿಬ್ಬಂದಿ ಕೊಲೆ ಪ್ರಕರಣ: ಆರೋಪಿ ಭಾವಚಿತ್ರ ಮತ್ತೊಮ್ಮೆ ಬಿಡುಗಡೆ

 

ಮಂಗಳೂರು: ಇಲ್ಲಿನ ಜ್ಯುವೆಲರಿ  ಅಂಗಡಿಯಲ್ಲಿನ ಸಿಬ್ಬಂದಿಯನ್ನು ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದ  ಆರೋಪಿ ಭಾವಚಿತ್ರವನ್ನು ಪೊಲೀಸರು ಶುಕ್ರವಾರ ಮತ್ತೊಮ್ಮೆ ಬಿಡುಗಡೆ ಮಾಡಿದ್ದಾರೆ.

ನಗರದ ಬಲ್ಮಠಹಂಪನಕಟ್ಟೆ ರಸ್ತೆಯಲ್ಲಿರುವ ಜ್ಯುವೆಲ್ಲರಿ ಅಂಗಡಿಯಲ್ಲಿ ಮಾರಾಟ ಪ್ರತಿನಿಧಿ ಆಗಿದ್ದ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (54) ಅವರನ್ನು ಆರೋಪಿ ಫೆ. 3 ರಂದು ಕತ್ತು ಸೀಳಿ ಕೊಲೆ ಮಾಡಿದ್ದ. ಊಟಕ್ಕೆ ತೆರಳಿದ್ದ ಅಂಗಡಿ ಮಾಲೀಕರು ಮರಳಿ ಬರುವ ವೇಳೆ 12 ಗ್ರಾಂ ಚಿನ್ನದೊಂದಿಗೆ ಆರೋಪಿ ಪರಾರಿಯಾಗಿದ್ದ.

  1.  

ಆರೋಪಿ ಚಿನ್ನ ಖರೀದಿಸುವ ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ  ಅಂಗಡಿಗೆ  ಬಂದು  ಸಿಬ್ಬಂದಿ  ಚೂರಿಯಿಂದ ಇರಿದು  ಕೊಲೆ ಮಾಡಿದ್ದ. ಸಿಸಿಟಿವಿಗಳಲ್ಲಿ ದಾಖಲಾದ ಚಿತ್ರಣಗಳಲ್ಲಿ ವ್ಯಕ್ತಿಯ ಭಾವಚಿತ್ರವು ಪತ್ತೆಯಾಗಿದೆ. ಈತನ ಬಗ್ಗೆ ಸುಳಿವು ಸಿಕ್ಕಲ್ಲಿ ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಮಹೇಶ್ ಕುಮಾರ್ -9480805320 ಮತ್ತು ಸಿಸಿಬಿ ಎಸಿಪಿ ಪಿಎ ಹೆಗಡೆ– 9945054333 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com