Breaking News

ಸುನಿಲ್ ವಿರುದ್ಧ ಸ್ಪರ್ಧೆಗೆ ಬಿಜೆಪಿ ಸಚಿವರು, ಮುಖಂಡರಿಂದಲೇ ಸಹಕಾರ: ಮುತಾಲಿಕ್ ಸ್ಪೋಟಕ ಹೇಳಿಕೆ

 

ಮಂಗಳೂರು: ಕಾರ್ಕಳದಲ್ಲಿ ಸಚಿವ ಸುನಿಲ್ ಕುಮಾರ್ ವಿರುದ್ಧ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ತನು. ಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಪೋಟಕ ರಹಸ್ಯ ಹೊರಹಾಕಿದ್ದಾರೆ.

  1.  

ಸುನಿಲ್ ಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಲ್ಪಡುತ್ತಿದ್ದು, ಮುಖ್ಯಮಂತ್ರಿ ರೇಸ್ ನಲ್ಲಿರುವ ಇತರ ಕೆಲವು ಬಿಜೆಪಿ ಮುಖಂಡರು ನನಗೆ ಸಹಕಾರದ ಭರವಸೆ ನೀಡಿದ್ದಾರೆ. ಕಾರ್ಕಳದಲ್ಲಿ ನನ್ನ ಗೆಲುವು ಖಚಿತ. ನಕಲಿ ಹಿಂದುತ್ವ ಮತ್ತು ಭ್ರಷ್ಟಾಚಾರದ ವಿರುದ್ದ ನನ್ನ ಸ್ಪರ್ಧೆ. ಕಾರ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಈಗಾಗಲೇ ಘೋಷಣೆ ಮಾಡಿದ್ದೇನೆ ಎಂದು  ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸ್ಪಷ್ಟ ಪಡಿಸಿದರು.

ಪ್ರೇಮಿಗಳ ದಿನಾಚರಣೆಗೆ ಯಾವಗಾಲೂ ನನ್ನ ವಿರೋಧ ಇದ್ದೇ ಇದೆ.  ಬಾರಿ ಕೂಡ ನಾನು ಇದನ್ನ ವಿರೋಧ ಮಾಡುತ್ತಿದ್ದೇನೆ. ಪೊಲೀಸರ ಜತೆ ಸೇರಿ ಕಾನೂನು ಬದ್ದವಾಗಿ ಇದನ್ನು ತಡಯುತ್ತೇವೆ. ಪ್ರೇಮಿಗಳ ದಿನ ಆಚರಣೆ ನೆಪದಲ್ಲಿ ಅನೈತಿಕತೆ, ಡ್ರಗ್ಸ್ ಮಾಫಿಯಾ ಸೆಕ್ಸ್ ಮಾಫಿಯಾಕ್ಕೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com