ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ವಿವಿಧ ಪಕ್ಷಗಳು ಚುನಾವಣಾ ತಯಾರಿಯಲ್ಲಿ ತೊಡಗಿಕೊಂಡಿದ್ದು , ಇದೀಗ ಎಸ್ ಡಿಪಿಐ ಪಕ್ಷವು ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದೆ.
ಪುತ್ತೂರಿನಲ್ಲಿ ನಡೆದ ಎಸ್ ಡಿ ಪಿ ಐ ಕಾರ್ಯಕರ್ತರ ಸಮಾವೇಶದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರ ದಿಂದ ಶಾಫಿ ಬೆಳ್ಳಾರೆ ಅಭ್ಯರ್ಥಿಯಾಗಿ ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಖಾನ್ ಘೋಷಣೆ ಮಾಡಲಾಗಿದೆ.
ಎಸ್ ಡಿ ಪಿ ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಅವರನ್ನು ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಎನ್ ಐಎ ಬಂಧಿಸಿದೆ. ಸದ್ಯ ಬಂಧನದಲ್ಲಿರುವ ಶಾಫಿ ಬೆಳ್ಳಾರೆ, ಜೈಲಿನಿಂದಲೇ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ಆರೋಪಿ ಶಾಫಿ ಬೆಳ್ಳಾರೆ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮೂಲಕ ಭಾರೀ ವಿವಾದವನ್ನು ಎಸ್ ಡಿಪಿಐ ಸೃಷ್ಠಿಸಿದ್ದು, ಪ್ರವೀಣ ನೆಟ್ಟಾರ್ ಪ್ರಕರಣದಲ್ಲಿ ಶಾಫಿ ಬೆಳ್ಳಾರೆ ಮೇಲೆ ಎನ್ ಐಎ ಸಾಕ್ಷಾಧಾರಗಳನ್ನ ಮುಂದಿಟ್ಟು ಬಂಧಿಸಿತ್ತು.