Breaking News

ಸಚಿವ ಅಶ್ವತ್ ನಾರಾಯಣ ಹೇಳಿಕೆ ವಿರುದ್ಧ ಸದನದಲ್ಲಿ ಕಾಂಗ್ರೆಸ್ ಆಕ್ರೋಶ

 

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿವಾದದ ಹೇಳಿಕೆ ನೀಡಿದ್ದ ಸಚಿವ ಅಶ್ವತ್ ನಾರಾಯಣ ಪೇಚಿಗೆ ಸಿಕ್ಕು ಹಾಕಿಕೊಂಡಿದ್ದಾರೆ. ಗುರುವಾರ ವಿಧಾನಸಭೆಯಲ್ಲೂ ಅಶ್ವತ್ಥ್ ನಾರಾಯಣ್ ಹೇಳಿಕೆ ಸದಸದಲ್ಲಿ ಗದ್ದಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್ನಾಯಕರು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದ್ದಾರೆ. ವೇಳೆ ಸದನದಲ್ಲಿಯೇ ಅಶ್ವತ್ಥ್ ನಾರಾಯಣ್ ಬಗ್ಗೆ ಮಾತನಾಡಿ, ನಾನು ಸಿದ್ದರಾಮಯ್ಯ ಅವರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ಆಡು ಭಾಷೆಯಲ್ಲಿ ಮಾತನಾಡಿದ್ದೇನೆ ಎಂದು ಸಮರ್ಥನೆ ಮಾಡಿಕೊಂಡರು,  ಇದ್ದಕ್ಕೆ ಆಕ್ರೋಶಗೊಂಡ  ಕಾಂಗ್ರೆಸ್ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ಮಾಡಿದರು.

  1.  

ವೇಳೆ ಸ್ಪೀಕರ್ ಕೋಪಗೊಂಡು ನಾನು ಈಗ ನನ್ನ ಅಧಿಕಾರವನ್ನು ಚಲಾಯಿಸಿ, ನಿಮ್ಮನ್ನು ಸದನದಿಂದ ಹೊರಗೆ ಕಳುಹಿಸಬೇಕಾಗುತ್ತದೆ ಎಂದು ಸ್ಪೀಕರ್ ಗುಡುಗಿದರು. ಆದರೂ ಕಾಂಗ್ರೆಸ್ ನಾಯಕರು ಸ್ಪೀಕರ್ ಮಾತನ್ನು ಲೆಕ್ಕಿಸದೇ ಪ್ರತಿಭಟನೆಗೆ ಮುಂದಾದರು.

ಸ್ಪೀಕರ್ ಮಾತಿಗೆ ಸಿಟ್ಟಿಗೆದ್ದು ಸದನದ ಬಾವಿ ಬಳಿ ಬಂದ ಈಶ್ವರ್ ಖಂಡ್ರೆ ಮತ್ತು ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com