Breaking News

ಶಿಗ್ಗಾಂವಿ ಕಮಲಾನಗರದಲ್ಲಿ 8 ಮಂದಿಗೆ ಚೂರಿ ಇರಿತ

 

ಹಾವೇರಿ (ಶಿಗ್ಗಾಂವಿ): ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ 8 ಜನ ಯುವಕರಿಗೆ ಚಾಕು ಇರಿದ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಮಲಾ ನಗರ ದಲ್ಲಿ ನಡೆದಿದೆ.

ಗಲಾಟೆಯಲ್ಲಿ ರವಿ ಲಮಾಣಿ, ಶಂಕರ್ ಲಮಾಣಿ, ರಾಜು ಲಮಾಣಿ, ಮಹೇಶ್‌ ಲಮಾಣಿ, ಲಾಲಪ್ಪ ಲಮಾಣಿ, ಹನುಮಂತ ಪೂಜಾರಿ, ಅಕ್ಷಯ್‌ ಲಮಾಣಿ ಎಂಬುವವರಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಯಗೊಂಡವರನ್ನು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿ ಹನುಮಂತ ಸೇರಿ 8 ಜನರ ವಿರುದ್ಧ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

  1.  

ಗ್ರಾಮದ ಬಸ್ ನಿಲ್ದಾಣದ ಜಾಗದ ವಿಚಾರವಾಗಿ ಘರ್ಷಣೆ ನಡೆದ ಎಂದು ಹೇಳಲಾಗುತ್ತಿದೆ. ದುಷ್ಕರ್ಮಿಗಳು ಖಾರದಪುಡಿ ಎರಚಿ ಚಾಕು, ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆಯಲ್ಲಿ 8 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಒಬ್ಬನ ಕೈ ಬೆರಳು ಕತ್ತರಿಸಿದ್ದು, ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ.

ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com