ಕರಾವಳಿ ಡೈಲಿನ್ಯೂಸ್
ಮಂಗಳೂರು: ರಾಜ್ಯ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಕೈ ನೋವು ಕಾಣಿಸಿಕೊಂಡಿದ್ದರಿಂದ ಸೋಮವಾರ ಮಂಗಳೂರಿನ ಖಾಸಗಿ ಆಸ್ಪತ್ರೆ ತಪಾಸಣೆ ಮಾಡಿಸಿಕೊಂಡು ಉಡುಪಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಪಕ್ಷದ ಜಿಲ್ಲಾ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ತಿಳಿಸಿದ್ದಾರೆ.
ಆ್ಯಸಿಡಿಟಿ ಕಾರಣದಿಂದ ಕೈ ನೋವು ಕಾಣಿಸಿಕೊಂಡಿದ್ದರಿಂದ ಅವರಿಗೆ ಇಸಿಜಿ ಸೇರಿದಂತೆ ಹಲವು ತಪಾಸಣೆಗಳನ್ನು ಮಾಡಲಾಗಿದೆ ಎಂದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗಿಲ್ಲ. ಅವರು ಆರೋಗ್ಯವಾಗಿದ್ದಾರೆ. ಆ್ಯಸಿಡಿಟಿ ಕಾರಣದಿಂದ ಕೈ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ತಪಾಸಣೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅವರಿಗೆ ಯಾವುದೇ ಸಮಸ್ಯೆ ಇಲ್ಲ. ಅವರು ಆರೋಗ್ಯದಿಂದ ಇದ್ದು ಉಡುಪಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜತೆಗೆ ಭಾಗವಹಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ತಿಳಿಸಿದ್ದಾರೆ.