Breaking News

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

 

ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೋಮವಾರ ಬೆಳಗ್ಗೆ ಉಡುಪಿಗೆ ಆಗಮಿಸಿದ್ದು, ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಮಠಕ್ಕೆ ಬಂದ ಜೆ.ಪಿ. ನಡ್ದಾ ಅವರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

  1.  

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಉಡುಪಿ ಶಾಸಕ ರಘುಪತಿ ಭಟ್, ಮುಖಂಡರಾದ ಪ್ರದೀಪ ರಾವ್, ಸುಪ್ರಸಾದ್ ಶೆಟ್ಟಿ ಇದ್ದರು.

ಉಡುಪಿ ಜಿಲ್ಲಾ ಪೊಲೀಸ್ ಅಧಿಕ ಅಕ್ಷಯ್ ಹಾಕೆ ಮಚ್ಚಿಂದ್ರ ನೇತೃತ್ವದಲ್ಲಿ ಭದ್ರತೆ ವಹಿಸಲಾಗಿತ್ತು.

ಶ್ರೀ ಕೃಷ್ಣ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಪೇಜಾವರ ಮಠಕ್ಕೆ ತೆರಳಲಿರುವ ನಡ್ಡಾ, ಅಷ್ಟ ಮಠಾಧೀಶರು ಹಾಗೂ ಕರಾವಳಿ ಭಾಗದ ವಿವಿಧ ಮಠಾಧೀಶರೊಂದಿಗೆ ಮಾತುಕತೆ ನಡೆಸಲಿರುವರು. ಇದರಲ್ಲಿ ಕರಾವಳಿ ಭಾಗದ ಹತ್ತಕ್ಕೂ ಅಧಿಕ ಮಠಾಧೀಶರು ಭಾಗಿಯಾಗಲಿದ್ದು, ಕರಾವಳಿ ಭಾಗದ ಬೇಡಿಕೆಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com