ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ನಡುವಿನ ಜಟಾಪಟಿ ಬೀದಿ ರಂಪಾಟ ಆಗಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರೂ ಅಧಿಕಾರಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಇಲಾಖೆಯಿಂದ ನೋಟಿಸ್ ಜಾರಿ ಮಾಡಲಾಗಿದೆ.
ಇನ್ನೊಬ್ಬ ಸರ್ಕಾರಿ ಅಧಿಕಾರಿಯ ವಿರುದ್ಧ ಆರೋಪ ಮಾಡಲು ಮಾಧ್ಯಮವನ್ನು ಬಳಕೆ ಮಾಡಿದ್ದೀರಿ, ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆ ಇದೆ. ಆದರೆ, ಅದನ್ನು ಬಿಟ್ಟು ನೀವು ಮಾಧ್ಯಮದ ಮುಂದೆ ಹೋಗಿದ್ದೀರಿ. ನಿಮ್ಮ ಈ ಕ್ರಮ ರಾಜ್ಯ ಸರ್ಕಾರಕ್ಕೆ ಮುಜುಗರ ತಂದಿದೆ. ಅಲ್ಲದೇ ನಿಮ್ಮ ವರ್ತನೆ ಭಾರತೀಯ ಸರ್ವೀಸ್ ನಿಯಮಗಳ ಉಲ್ಲಂಘನೆಯಾಗಿದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.
ಇನ್ನೂ ಮುಂದೇ ಯಾವುದೇ ರೀತಿಯ ಆರೋಪಗಳಿದ್ದರೂ ಸಕ್ಷಮ ಪ್ರಾಧಿಕಾರದ ಮುಂದೆ ಮಾಡಬಹುದು. ಅದನ್ನು ಬಿಟ್ಟು ಮಾಧ್ಯಮಗಳ ಮುಂದೆ ಹೋಗಿದ್ದೀರಿ. ಹೀಗಾಗಿ ಇನ್ನೂ ಮುಂದೆ ಮಾಧ್ಯಮಗಳ ಮುಂದೆ ಹೋಗಬಾರದು’ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಎಚ್ಚರಿಕೆ ನೀಡಿದ್ದಾರೆ.