Breaking News

ಜಿಲ್ಲಾ ಮಟ್ಟದ ಪ್ರಗತಿ ರಥಯಾತ್ರೆಗೆ ಬಿಜೆಪಿ ಚಾಲನೆ

 

ಮಂಗಳೂರು: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರ, ಗ್ರಾಮ, ಬೂತ್ ಮಟ್ಟಕ್ಕೆ ತಲುಪಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಪ್ರಗತಿ ರಥಕ್ಕೆ ಸೋಮವಾರ ಮಂಗಳೂರಿನ ಕದ್ರಿ‌ ಮೈದಾನದಲ್ಲಿ ಚಾಲನೆ ನೀಡಲಾಯಿತು.

ಒಟ್ಟು ಆರು ವಾಹನಗಳು ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಪ್ರಗತಿ ರಥಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಮತ್ತು ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು.

  1.  

ಶಾಸಕ ವೇದವ್ಯಾಸ್ ಕಾಮತ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ಪ್ರಗತಿ ರಥಯಾತ್ರೆಯ ವಾಹನಗಳು ಸಂಚಾರ ಮಾಡಲಿವೆ. ರಾಜ್ಯ ಹಾಗೂ ಕೇಂದ್ರ ಸರ್ಕಾರವು ಮಾಡಿರುವ ಪ್ರಗತಿಪರ ಯೋಜನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಯಾತ್ರೆ ಕೈಗೊಳ್ಳಲಾಗುತ್ತಿದೆ. ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವೂ ಈ ರಥಯಾತ್ರೆ ವೇಳೆ ನಡೆಯಲಿದೆ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಮಾತನಾಡಿ, ಕರಾವಳಿ ಜಿಲ್ಲೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊಡುಗೆ ಸಾಕಷ್ಟು ಇದೇ. ಇದನ್ನೂ ಜನರಿಗೆ ತಲುಪಿಸುವ ಕಾರ್ಯವೂ ಜಿಲ್ಲಾ ಮಟ್ಟದಲ್ಲಿಯೂ ನಡೆಯುತ್ತಿದೆ. ಪ್ರತಿ ವಿಧಾನಸಭಾ ಹಾಗೂ ಗ್ರಾಮ, ಬೂತ್ ಮಟ್ಟದಲ್ಲಿಯೂ ಪ್ರಗತಿ ರಥವೂ ಸಂಚಾರ ಮಾಡಲಿವೆ ಎಂದರು,

ಪ್ರಗತಿ ರಥಯಾತ್ರೆಯ ರಾಜ್ಯ ಸಹ ಪ್ರಭಾರಿ ಪ್ರೇಮಾನಂದ ಶೆಟ್ಟಿ, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ, ಕಸ್ತೂರಿ ಪಂಜ, ದಕ್ಷಿಣ ‌ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಪ್ರಮುಖರಾದ ಪ್ರಸಾದ್ ಕುಮಾರ್, ಈಶ್ವರ ಕಟೀಲ್, ರಾಮದಾಸ್ ಬಂಟ್ವಾಳ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ನಾಯಕ್‌ ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com