ಬೆಳ್ತಂಗಡಿ: ಲಾಯಿಲ ಗ್ರಾಮದ ಗುರಿಂಗಾನ ಬಳಿ ಗುಡ್ಡಕ್ಕೆ ಬೆಂಕಿ ಬಿದ್ದು 2 ಎಕರೆ ರಬ್ಬರ್ ತೋಟವು ಸೇರಿದಂತೆ 5 ಎಕರೆ ಪ್ರದೇಶದಲ್ಲಿ ಬೆಂಕಿ ಆವರಿಸಿದೆ.
ಬೆಂಕಿಯಿಂದಾಗಿ ರಬ್ಬರ್ ಗಿಡಗಳು ಸುಟ್ಟು ಹೋಗಿವೆ. ಸ್ಥಳೀಯರು ಹಾಗೂ ಅಗ್ನಿಶಾಮಕ ತಂಡಗಳ ಕಾರ್ಯಾಚರಣೆಯಿಂದ ಬೆಂಕಿ ನಂದಿಸುವ ಪ್ರಯತ್ನ ನಡೆದಿದೆ.
ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ. ಆದರೆ, ಬಿಸಿಲಿನ ತಾಪ ಹೆಚ್ಚಳವಾದಂತೆ ಅಗ್ನಿ ಅನಾಹುತಗಳು ಜಿಲ್ಲೆಯಲ್ಲಿ ನಡೆಯುತ್ತಿವೆ. ಕೆಲ ದಿನಗಳ ಹಿಂದೇ ಲಾಯಿಲ ಗ್ರಾಮದ ಪಡ್ಲಾಡಿ ಬಳಿ ಬೆಂಕಿ ಅನಾಹುತ ಸಂಭವಿಸಿತ್ತು. ಕಾರ್ಯಾಚರಣೆಯಿಂದ ಅನಾಹುತ ಭಾರಿ ತಪ್ಪಿ ಹೋಗಿತ್ತು.