Breaking News

ಇಂದಿನ ಫಲಿತಾಂಶ ವಿಶ್ವಕ್ಕೆ ಸಂದೇಶ– ಶಿರಬಾಗಿ ನಮಿಸುತ್ತೇನೆ: ಮೋದಿ

 

ನವದೆಹಲಿ: ನಾಗಾಲ್ಯಾಂಡ್, ತ್ರಿಪುರಾದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ದೆಹಲಿ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ಮೋದಿ ಅವರು , ತ್ರಿಪುರಾ, ನಾಗಾಲ್ಯಾಂಡ್ ಹಾಗೂ ಮೇಘಾಲಯ ಜನತೆಗೆ ಧನ್ಯವಾದ ತಿಳಿಸಿದರು.

ಈಶಾನ್ಯ ರಾಜ್ಯದ ಗೆಲುವನ್ನು ಕೊಂಡಾಡಿದ ಪ್ರಧಾನಿ ಮೋದಿ, ಸೇರಿದ ಜನರು ಈಶಾನ್ಯ ರಾಜ್ಯಗಳ ಜನರಿಗೆ ನಾವು ಗೌರವ ನೀಡಬೇಕಿದೆ. ಬಿಜೆಪಿಗೆ ಅಭೂತಪೂರ್ವ ಗೆಲುವು ದೊರಕಿಸಿಕೊಟ್ಟ ಜನರಿಗೆ ನೀವೆಲ್ಲಾ ಮೊಬೈಲ್ ಫ್ಲಾಶ್ ಲೈಟ್ ಹಾಕಿ ಗೌರವ ಸೂಚಿಸಬೇಕು. ಇದಕ್ಕೆ ಸೇರಿದ್ದ ಜನಸ್ತೋಮ ಫ್ಲಾಶ್ ಲೈಟ್ ಆನ್ ಮಾಡಿ ಗೌರವ ಸೂಚಿಸಿತು. ತ್ರಿಪುರಾ, ನಾಗಾಲ್ಯಾಂಡ್ ಹಾಗೂ ಮೆಘಾಲಯ ಜನತೆಗೆ ನಾನು ಧನ್ಯವಾದ ಹೇಳುತ್ತಿದ್ದೇನೆ. ಶಿರಬಾಗಿ ನಮಿಸುತ್ತೇನೆ ಎಂದು ಮೋದಿ ಹೇಳಿದರು.

  1.  

ಬಿಜೆಪಿ ಹಾಗೂ ನಮ್ಮ ಮಿತ್ರ ಪಕ್ಷಗಳಿಗೆ ಜನರು ಭರಪೂರ ಬೆಂಬಲ ನೀಡಿದ್ದಾರೆ. ಮೂರು ರಾಜ್ಯಗಳ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ. ದೆಹಲಿಯಲ್ಲಿ ಬಿಜೆಪಿ ಕಾರ್ಯಕರ್ತರು ಕೆಲಸ ಮಾಡುವುದು ಅಷ್ಟು ಕಷ್ಟದ ಮಾತಲ್ಲ. ಆದರೆ ಈಶಾನ್ಯ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಕೆಲಸ ಸುಲಭವಾಗಿರಲಿಲ್ಲ. ಕಠಿಣ ಪರಿಸ್ಥಿತಿಯಲ್ಲೂ ಸಾಧನೆ ಮಾಡಿದ್ದಾರೆ. ಇಂದಿನ ಫಲಿತಾಂಶ, ಭಾರತ ಹಾಗೂ ವಿಶ್ವಕ್ಕೆ ಒಂದು ಸಂದೇಶ ನೀಡಿದೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನ ಮನಸ್ಸು ಮಾಡಿದರೆ ಬದಲಾವಣೆ ತರುತ್ತಾರೆ ಎಂಬುದಕ್ಕೆ ಈ ಚುನಾವಣೆ ಸಾಕ್ಷಿಯಾಗಿವೆ. ಮೊದಲು ಈಶಾನ್ಯ ರಾಜ್ಯಗಳ ಕುರಿತು ದೇಶದಲ್ಲಿ ಚರ್ಚೆಯೇ ಆಗುತ್ತಿರಲಿಲ್ಲ. ಚರ್ಚೆ ನಡೆದರೂ, ಅದು ಹಿಂಸಾಚಾರ, ಗುಂಡಿನ ದಾಳಿ ಬಗ್ಗೆಯೇ ಚರ್ಚೆ ಆಗುತ್ತಿತ್ತು. ಆದರೆ, ಈಗ ಈಶಾನ್ಯ ರಾಜ್ಯಗಳು ಅಭಿವೃದ್ಧಿ ವಿಷಯಕ್ಕಾಗಿ ಚರ್ಚೆಯಾಗುತ್ತಿದೆ. ಇದು ಪ್ರಜಾಪ್ರಭುತ್ವದ ಶಕ್ತಿ ಎಂದು ಕೊಂಡಾಡಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com