Breaking News

ಮೂಡುಬಿದಿರೆ: ವ್ಯಕ್ತಿ ನದಿಗೆ ಹಾರಿ ಆತ್ಮಹತ್ಯೆ

 

ಮೂಡುಬಿದಿರೆ: ಬೆಳ್ತಂಗಡಿ ಕಾಶಿಪಟ್ಣ ನಿವಾಸಿ ಆಶಿತ್ ಕುಮಾರ್ (51)  ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಆಶಿತ್‌ ಇತ್ತೀಚಿನ ದಿನಗಳಲ್ಲಿ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದರು. ಆತ್ಮಹತ್ಯೆಗೆ ಇದೇ ಕಾರಣವಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

  1.  

ಅವರಿಗೆ ಪತ್ನಿ ಹಾಗೂ ಒಬ್ಬ ಪುತ್ರ ಇದ್ದಾರೆ.

ಬೆಳ್ತಂಗಡಿ ಕೇಳದ ಪೇಟೆ ಬಸದಿ ಜೀರ್ಣೋದ್ಧಾರಕ್ಕೆ ಶ್ರಮಿಸಿದ್ದ ಅವರು ಜೇಸಿಐ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು. ಜೇಸಿಐ ವಲಯ 15ರ ಅಧ್ಯಕ್ಷ ಹಾಗೂ ವಲಯಾಧಿಕಾರಿಯಾಗಿಯೂ ಈ ಹಿಂದೆ ಕಾರ್ಯನಿರ್ವಹಿಸಿದ್ದರು. ಮೂಡುಬಿದಿರೆಯಲ್ಲಿ ಮಹಾವೀರ ಎಲೆಕ್ಟ್ರಾನಿಕ್ಸ್ ಅಂಗಡಿ ಆರಂಭಿಸಿದ್ದರು. ಬಳಿಕ ಮಂಗಳೂರಿಗೆ ಸ್ಥಳಾಂತರಗೊಂಡಿದ್ದ ಅವರು ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿ ಅಲ್ಲೇ ನೆಲೆಸಿದ್ದರು. ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com