Breaking News

ಪಾಳಾ ಕ್ರಾಸ್: ಮರಕ್ಕೆ ಕಾರು ಡಿಕ್ಕಿ ಇಬ್ಬರು ಸಾವು, ಮೂರು ಮಂದಿಗೆ ಗಾಯ

 

ಕಾರವಾರ (ಸಿರಸಿ): ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ  ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಮುಂಡಗೋಡು ಬಳಿ ನಡೆದಿದೆ.

  1.  

ಉತ್ತರಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಪಾಳಾ ಕ್ರಾಸ್ ಬಳಿ, ಶಿರಸಿ ಹುಬ್ಬಳ್ಳಿ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಮೃತಪಟ್ಟಿದ್ದು ಮೂವರಿಗೆ ಗಂಭೀರ ಗಾಯಗಳಾಗಿವೆ. ಪಟ್ಟಣದ ಬಸವನಬೀದಿಯ ಗಣೇಶ ಗಾಣಿಗೇರ, ಮಹೇಶ ಗಾಣಿಗೇರ ಮೃತಪಟ್ಟವರು.

ಪಾಳಾ ಗ್ರಾಮದಲ್ಲಿ ಮಾರಿಕಾಂಬಾ ದೇವಿ ಜಾತ್ರೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲು ಮಾಡಲಾಗಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com