ಚಾಮರಾಜನಗರ: ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರ ಅಂತ್ಯಕ್ರಿಯೆ ಭಾನುವಾರ ಅವರ ಹುಟ್ಟೂರು ತಾಲೂಕಿನ ಹೆಗ್ಗವಾಡಿಯಲ್ಲಿ ನಡೆಯಲಿದೆ.
ಇನ್ನು ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿದೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮೈಸೂರಿನ ಅವರ ಮನೆ ಹಾಗೂ ಮೈಸೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಧ್ಯಾಹ್ನ 2ರಿಂದ 5 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ಅಲ್ಲಿಂದ ಮೃತದೇಹವನ್ನು ನಂಜನಗೂಡಿಗೆ ತಂದು, ರಾತ್ರಿ ಹುಟ್ಟೂರಿಗೆ ತರಲಾಗುವುದು. ಅಲ್ಲಿ ಅವರ ಜಮೀನಿನಲ್ಲಿ ತಂದೆ ತಾಯಿ ಸಮಾಧಿ ಪಕ್ಕದಲ್ಲಿ ನಾಳೆ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.