Breaking News

ಮೋದಿ, ಅಮಿತ್ ಷಾ ನೇತೃತ್ವದಲ್ಲಿ ಪಕ್ಷ ಬಲಿಷ್ಠ: ಸಚಿವ ಕೋಟ

 

ಕಾರವಾರ(ಕುಮಟಾ): ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿ ಇರುವಾಗಲೇ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಮಾಡಲಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಭಾನುವಾರ ನಡೆದ ಬಿ.ಜೆ.ಪಿ ವಿಜಯ ಸಂಕಲ್ಪ ಯಾತ್ರೆ ಉದ್ಘಾಟಿಸಿ ಅವರು ಮಾತನಾಡಿ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ. ಭರವಸೆ ದೂರದೃಷ್ಟಿ ನಮ್ಮ ಮುಖಂಡರಿಗೆ ಖಂಡಿತಾ ಇತ್ತು. ಇದರ ಪರಿಣಾಮವಾಗಿ ಬಿಜೆಪಿ ದೇಶದ ಆಡಳಿತ ಚುಕ್ಕಾಣಿ ಹಿಡಿದಿದೆ. ಬರುವ ಮುಂದಿನ ಚುನಾವಣೆಯಲ್ಲಿಯೂ ಪಕ್ಷವು ಅಧಿಕಾರಕ್ಕೆ ಬರಲಿದೆ. ಮೋದಿ, ಅಮಿತ್ ಷಾ ನೇತೃತ್ವದಲ್ಲಿ ಪಕ್ಷವು ಬಲಿಷ್ಠವಾಗಿದೆ  ಎಂದು ತಿಳಿಸಿದರು.

  1.  

ಶಾಸಕ ದಿನಕರ ಶೆಟ್ಟಿ ಮಾತನಾಡಿ, ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಕುಮಟಾದಲ್ಲಿ ನೀರಿನ ಬರ ಎದುರಿಸುತ್ತಿದ್ದ 15 ಗ್ರಾಮ ಪಂಚಾಯಿತಿಗಳಿಗೆ ಕುಡಿಯುವ ನೀರು ಕೊಡುತ್ತಿರುವುದು ಬಿಜೆಪಿ ಸರ್ಕಾರ.  ಬಿಜೆಪಿ ಪಕ್ಷವು ರಾಜ್ಯದಲ್ಲಿ ಉತ್ತಮ ಆಡಳಿತ ಮಾಡಿರುವುದರಿಂದಲೇ ರಾಜ್ಯದಲ್ಲಿ ಜನರು ಬಿಜೆಪಿಯನ್ನು ಮತ್ತೆ ಆಶೀರ್ವಾದ ಮಾಡಲಿದ್ದಾರೆ. ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ, ತಾಲ್ಲೂಕು ಘಟಕದ ಅಧ್ಯಕ್ಷ ಹೇಮಂತ ಗಾಂವ್ಕರ್, ಪಕ್ಷದ ರಾಜ್ಯ ಸಮಿತಿ ಸದಸ್ಯ ವಿವೇಕಾನಂದ ಡಬ್ಬಿ, ಮುಖಂಡರಾದ ಕೆ.ಜಿ. ನಾಯ್ಕ, ಎನ್.ಎಸ್. ಹೆಗಡೆ, ರಾಜೇಂದ್ರ ನಾಯ್ಕ, ಶಿವಾನಿ ಶಾಂತಾರಾಮ, ಕುಮಾರ ಮಾರ್ಕಂಡೆ, ಎಂ.ಜಿ. ಭಟ್ಟ, ಡಾ.ಜಿ.ಜಿ. ಹೆಗಡೆ, ಜಗನ್ನಾಥ ನಾಯ್ಕ, ಜಿ.ಐ.ಹೆಗಡೆ, ಮಧುಸೂದನ ಹೆಗಡೆ, ಪುರಸಭೆ ಅಧ್ಯಕ್ಷೆ ಅನುರಾಧಾ ಬಾಳೇರಿ,ವೆಂಕಟ್ರಮಣ ಹೆಗಡೆ, ಸುಬ್ರಾಯ ವಾಳ್ಕೆ, ಅಖಿಲ್ ಖಾಜಿ ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com