Breaking News

ರಾಜ್ಯದ ಹಲವಡೆ ಗುಡುಗು ಸಹಿತ ಮಳೆ: ದ.ಕ. ಜಿಲ್ಲೆಯಲ್ಲಿ ಮಳೆ

 

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಶುಕ್ರವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆಲಿಕಲ್ಲು ಮಳೆ ಆಗಬಹುದು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಕಟಣೆ ತಿಳಿಸಿದೆ.

  1.  

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮಳೆಯಾಗಲಿದ್ದು,  ಶನಿವಾರವು ಕೂಡ ಇಲ್ಲಿ ಮಳೆಯಾಗುವ ಸಾಧ್ಯತೆ ಎಂದು ಇಲಾಖೆ ತಿಳಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ಹೇಳಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗಬಹುದು. ಉಷ್ಣಾಂಶ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (40.7 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ. ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com