Breaking News

ಸಿಎಂ ಬೊಮ್ಮಾಯಿ ಮ್ಯಾರಾಥಾನ್ ಟೆಂಪಲ್ ರನ್: ವಿಶೇಷ ಪೂಜೆ ಸಲ್ಲಿಕೆ

 

ಮಂಗಳೂರು: ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರು ಟಿಕೆಟ್ ಘೋಷಣೆಯ ಬೆನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ದೇವಸ್ಥಾನಗಳ ಮ್ಯಾರಾಥಾನ್ ಟೆಂಪಲ್ ರನ್ ಶುರು ಮಾಡಿದ್ದಾರೆ.

ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದುಕೊಂಡರು. ಇದಾದ ಬಳಿಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳಿದರು.

  1.  

ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸಂಪುಟ ನರಸಿಂಹ ಸ್ವಾಮಿ ದೇವರ ದರ್ಶನ ಪಡೆದರು. ನಂತರ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ನಂತರ ಮಂಗಳೂರಿನ ಮಂಗಳಾದೇವಿ ಹಾಗೂ ಗರೋಡಿಗೆ ಭೇಟಿ ನೀಡಿ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಕರಾವಳಿ ದೇವಸ್ಥಾನಕ್ಕೆ ಆಗಾಗ ಭೇಟಿ ನೀಡುತ್ತಿರುತ್ತೇನೆ. ಕಟೀಲು, ಧರ್ಮಸ್ಥಳ, ಕೊಲ್ಲೂರಿಗೆ ಭೇಟಿ ನೀಡುತ್ತಿರುತ್ತೇನೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದೇನೆ. ಇದೀಗ ಚುನಾವಣೆ ಬಂದಿರುವ  ಹಿನ್ನಲೆಯಲ್ಲೂ ಭೇಟಿ ನೀಡಿ, ರಾಜ್ಯದ ಜನರ ಸುಭೀಕ್ಷೆಗೆ ಪ್ರಾರ್ಥಿಸಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.

ಸಿಎಂ ಬೊಮ್ಮಾಯಿ ಕ್ಷೇತ್ರಕ್ಕೆ ಆಗಮಿಸುವ ಕೆಲ ಕ್ಷಣದ ಮೊದಲು ಮಳೆ ಆರಂಭಗೊಂಡಿದ್ದು, ಮುಖ್ಯಮಂತ್ರಿಗಳು ದೇವರ ದರುಶನ ಪಡೆದು ತೆರಳುವ ವೇಳೆಗೆ ಮಳೆ ವಿರಾಮ ನೀಡಿತ್ತು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com