ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಶುಕ್ರವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು.
ಸವದಿಯವರು ಸುಮಾರು ವರ್ಷಗಳ ಕಾಲ ಬಿಜೆಪಿಯಲ್ಲಿಯೇ ಇದ್ದು, ಶಾಸಕ ಸಚಿವ, ಉಪ ಮುಖ್ಯಮಂತ್ರಿ ಕೂಡ ಆಗಿದ್ದರು. ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಲು ಟಿಕೆಟ್ ನಿರಾಕರಣೆ ಮಾಡಿದ್ದರಿಂದ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
ಈಗಾಗಲೇ ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿ ಘೋಷಣೆ ಮಾಡಿರುವ ಸವದಿ, ಪರಿಷತ್ ಸಭಾಪತಿ ಹೊರಟ್ಟಿ ಅವರನ್ನು ಭೇಟಿಯಾಗಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಲಿದ್ದಾರೆ.