Breaking News

ಕಾಂಗ್ರೆಸ್ ಗೆ ಬಿ.ವಿ. ನಾಯಕ್ ರಾಜೀನಾಮೆ: ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ

 

ಬೆಂಗಳೂರು: ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಮತ್ತು ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಮಾಜಿ ಲೋಕಸಭಾ ಸದಸ್ಯ ಬಿ.ವಿ. ನಾಯಕ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

  1.  

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ. ನಾನು ಸ್ವಇಚ್ಛೆಯಿಂದ ಪಕ್ಷದ ಸದಸ್ಯತ್ವ ಹಾಗೂ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ  ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಬಿ.ವಿ.ನಾಯಕ  ಅವರು ರಾಯಚೂರು ಜಿಲ್ಲೆಯ ಪ.ಪಂಗಡ ಮೀಸಲು ವಿಧಾನಸಭಾ ಕ್ಷೇತ್ರಗಳಾದ ಮಾನ್ವಿ, ರಾಯಚೂರು ಗ್ರಾಮೀಣ, ದೇವದುರ್ಗ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಮೂರು ಕ್ಷೇತ್ರಗಳಿಂದಲೂ ಅವರಿಗೆ ಟಿಕೆಟ್ ನೀಡಲು ನಿರಾಕರಿಸಿದ್ದರಿಂದ ಈ ತೀರ್ಮಾನಕ್ಕೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com