Breaking News

ಕೊನೆ ಕ್ಷಣದಲ್ಲಿ ಬಿಜೆಪಿ ಫೈನಲ್ ಪಟ್ಟಿ: ಈಶ್ವರಪ್ಪ ಕುಟುಂಬಕ್ಕಿಲ್ಲ ಟಿಕೆಟ್

 

ಬೆಂಗಳೂರು : ನಾಮಪತ್ರ ಸಲ್ಲಿಕೆಗೆ ಕೊನೆಯದ ದಿನ ಬಾಕಿ ಇರುವಾಗ  ಬಿಜೆಪಿ ಬಾಕಿ ಉಳಿಸಿಕೊಂಡಿದ್ದ ಶಿವಮೊಗ್ಗ ನಗರ ಮತ್ತು ರಾಯಚೂರಿನ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಬಿಜೆಪಿ ಪ್ರಬಲ ನಾಯಕ ಕೆ.ಎಸ್. ಈಶ್ವರಪ್ಪ ಅವರು ಪ್ರತಿನಿಧಿಸುತ್ತಿರುವ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಘೋಷಿಸುವುದು ಬಿಜೆಪಿಗೆ ಕಗ್ಗಂಟಾಗಿತ್ತು. ಕೊನೆಗೂ ಶಿವಮೊಗ್ಗ ಕ್ಷೇತ್ರಕ್ಕೆ ಎಸ್‌.ಎಸ್. ಚನ್ನಬಸಪ್ಪ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.

  1.  

ಶಿವಮೊಗ್ಗ ಕ್ಷೇತ್ರದಿಂದ ಈಶ್ವರಪ್ಪ ಪುತ್ರ ಕೆ.ಈ.ಕಾಂತೇಶ್‌, ಎಸ್‌.ಎಸ್.ಜ್ಯೋತಿ ಪ್ರಕಾಶ್‌, ಡಾ.ಧನಂಜಯ ಸರ್ಜಿ ಅವರು ಆಕಾಂಕ್ಷಿಗಳಾಗಿದ್ದರು. ಚನ್ನಬಸಪ್ಪ ಅವರು ಈಶ್ವರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು. ಪಾಲಿಕೆಯ ಉಪಮೇಯರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.

ಮಾನ್ವಿ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಮಾಜಿ ಸಂಸದ ಬಿ.ವಿ.ನಾಯಕ ಅವರಿಗೆ  ಟಿಕೆಟ್ ನೀಡಲಾಗಿದೆ

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com