ಮಂಗಳೂರು: ಮಂಗಳೂರು ಮಹಾನಗರಕ್ಕೆ ನೀರು ಸರಬುರಾಜು ಮಾಡುವ ತುಂಬೆ ರೇಚಕ ಸ್ಥಾವರದಲ್ಲಿರುವ ಕೊಳವೆ ದುರಸ್ತಿ, ಹೆಡರ್ ಬದಲಾವಣೆ ಕಾಮಗಾರಿ ನಡೆಯಲಿದೆ. ಈ ಕಾರಣದಿಂದ ಇದೇ 27 ರ ಬೆಳಿಗ್ಗೆ 6 ಗಂಟೆಯಿಂದ ಏ.29 ರ ಬೆಳಿಗ್ಗೆ 6 ಗಂಟೆಯವರಿಗೆ ಮಂಗಳೂರು ಮಹಾನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಹಾನಗರ ಪಾಲಿಕೆ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆ ತಿಳಿಸಿದೆ.