Breaking News

ಮೂಡುಶೆಡ್ಡೆಯಲ್ಲಿ ಕೈ, ಬಿಜೆಪಿ ಕಾರ್ಯಕರ್ತರ ಮಾರಾಮಾರಿ– ಕಲ್ಲು ತೂರಾಟ

 

ಮಂಗಳೂರು: ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಡುಶೆಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆಯ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಡೆದಾಟ ನಡೆದಿದೆ.

ಈ ಘಟನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಕಾರಿಗೆ ಕಲ್ಲೂ ತೂರಾಟ ಮಾಡಿದ್ದರಿಂದ ಹಾನಿ ಉಂಟಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಡಿಸಿಪಿ ಅಂಶುಕುಮಾರ್‌ರ ವಾಹನಕ್ಕೂ ಕಲ್ಲು ಬಿದ್ದಿದ್ದು, ಹಾನಿಯಾಗಿದೆ ಎಂದು ತಿಳಿದು ಬಂದಿದೆ.  ಜತೆಗೆ ಇಬ್ಬರಿಗೆ ಗಾಯ ಆಗಿರುವ ಬಗ್ಗೆ ವರದಿ ಆಗಿದೆ.

  1.  

ಬುಧವಾರ ರಾತ್ರಿ 7. 40 ಗಂಟೆಯ ವೇಳೆಗೆ ಮೂಡುಬಿದಿರೆ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಮೂಡುಶೆಡ್ಡೆಯ ಮತಗಟ್ಟೆಯ ಬಳಿ ತೆರಳಿ ಕಾರ್ಯಕರ್ತರ ಬಳಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ, ಹೊಡೆದಾಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಎರಡೂ ಪಕ್ಷದ ಕಾರ್ಯಕರ್ತರು ಪರಸ್ಪರ ಕಲ್ಲೆಸೆದಿದ್ದು, ಪರಿಣಾಮ ಮಿಥುನ್ ರೈ ಕಾರಿಗೆ ಹಾನಿ ಉಂಟಾಗಿದೆ. ಇಬ್ಬರಿಗೆ ಗಾಯವಾಗಿದೆ ಎನ್ನಲಾಗಿದೆ.

ಪರಿಸ್ಥಿತಿ ಇದೀಗ ನಿಯಂತ್ರಣದಲ್ಲಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com