ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿಸಿದ ಜಿಲ್ಲೆಯ ಜನರಿಗೆ ಹಾಗೂ ಬಿಜೆಪಿ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಅಭಿವಂದನೆ ಸಲ್ಲಿಸುವುದಾಗಿ ಬಿಜೆಪಿ ಜಿಲ್ಲಾ ಘಟಕದ ಆಧ್ಯಕ್ಷ ಸುದರ್ಶನ ಎಂ ತಿಳಿಸಿದ್ದಾರೆ.
ರಾಷ್ಟ್ರೀಯ ವಿಚಾರಧಾರೆ, ಸಂಘಟನೆ, ಪರಿವಾರ ಸಂಘಟನೆಗಳ ಸಹಕಾರದಿಂದ ಜಿಲ್ಲೆಯಲ್ಲಿ ಬಿಜೆಪಿಗೆ ಗೆಲುವಾಗಿದೆ. ಕಳೆದ ಅವಧಿಯಲ್ಲಿ ನಮ್ಮೆಲ್ಲ ಶಾಸಕರುಗಳು ಅಭೂತಪೂರ್ವ ಅಭಿವೃದ್ದಿಯ ಕಾರ್ಯಗಳನ್ನು ಮಾಡಿ ಜಿಲ್ಲೆಯ ಜನತೆ ಮನಸ್ಸನ್ನು ಗೆದ್ದು ಮತ್ತೊಮ್ಮೆ ಆಯ್ಕೆ ಆಗಿದ್ದಾರೆ. ವಿಜೇತ ಶಾಸಕರೆಲ್ಲರಿಗೂ ಅಭಿನಂದನೆ ಸಲ್ಲಿಸುವೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಈ ರೀತಿಯ ಫಲಿತಾಂಶ ಬರುವ ಬಗ್ಗೆ ನಿರೀಕ್ಷೆ ಇರಲಿಲ್ಲ. ಆದರೆ ರಾಜ್ಯದ ಜನತೆ ನೀಡಿರುವ ತೀರ್ಪು ಬಿಜೆಪಿ ಒಪ್ಪಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.