ಮಂಗಳೂರು: ಕಾಂಗ್ರೆಸ್ ನೀಡಿರುವ ಸುಳ್ಳು ಭರವಸೆಗಳಿಂದಾಗಿ ಬಿಜೆಪಿಗೆ ಸೋಲಾಗಿದೆ. ಕಾಂಗ್ರೆಸ್ ನೀಡಿರುವ ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ. ಮುಂದೆ ತಕ್ಕದಾದ ಬೆಲೆ ಕಾಂಗ್ರೆಸ್ ತೆರಬೇಕಾಗುತ್ತದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆಯಾಗಿರುವ ಪೂಂಜಾ ಅವರು ಕಾಂಗ್ರೆಸ್ ನೀಡಿರುವ ಭರವಸೆಗಳನ್ನು ಈಡೇರಿಸದಿದ್ದರೆ ಜವಾಬ್ದಾರಿಯುತ ಪ್ರತಿಪಕ್ಷ ಸ್ಥಾನದಲ್ಲಿರುವ ಬಿಜೆಪಿ ಹೋರಾಟ ನಡೆಸಲಿದೆ ಎಂದರು.
ಕಾರ್ಯಕರ್ತರ ಶ್ರಮ ಮತ್ತು ಮತದಾರರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸ ತಮಗೆ ಭಾರೀ ಅಂತರದಲ್ಲಿ ಜಯ ಗಳಿಸಲು ಸಾಧ್ಯವಾಗಿದೆ. ಗೆಲುವಿಗೆ ನೆರವಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವೆ ಎಂದು ತಿಳಿಸಿದರು.