ಮೂಡುಬಿದಿರೆ: ಪುತ್ತೂರಿನಲ್ಲಿ ಬ್ಯಾನರ್ ಹಾಕಿ ಚಪ್ಪಲಿ ಹಾರ ಹಾಕಿರುವ ಪ್ರಕರಣದಲ್ಲಿ ಹಿಂದೂ ಸಂಘಟನೆಯ ಯುವಕರನ್ನು ವಶಪಡಿಸಿಕೊಂಡು ಠಾಣೆಯಲ್ಲಿ ಕೂಡಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿ ದೈಹಿಕ ಮತ್ತು ಮಾನಸಿಕ ಚಿತ್ರಹಿಂಸೆ ನೀಡಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕೂಡಲೇ ಅಮಾನತ್ತು ಮಾಡುವಂತೆ ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲಾ ಸಹಸಂಚಾಲಕ ಸಮಿತ್ ರಾಜ್ ದರೆಗುಡ್ಡೆ ಒತ್ತಾಯಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.