ಭಟ್ಕಳ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯದಲ್ಲಿಯೇ ಸಾವನಪ್ಪಿರುವ ಘಟನೆ ನಡೆದಿದೆ.
ತೆರ್ನಮಕ್ಕಿ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹೆದ್ದಾರಿ ಬದಿಯಿಂದ ನಡೆದು ಕೊಂಡು ಹೋಗುತ್ತಿದ್ದ ಶಿಕ್ಷಕ ಫ್ರಾನ್ಸಿಸ್ ಅಂತೋನಿ ಗೋಮ್ಸ್ (55) ಅವರಿಗೆ ಭಟ್ಕಳ ಕಡೆಯಿಂದ ಹೊನ್ನಾವರಕ್ಕೆ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ.
ಅಪಘಾತಕ್ಕೆ ಕಾರಣರಾದ ಕಾರು ಚಾಲಕನನ್ನು ಬೈಂದೂರು, ಗಂಗನಾಡಿ ನಿವಾಸಿ ಸತೀಶ್ ಆಚಾರಿ ಎಂದು ಗುರುತಿಸಲಾಗಿದ್ದು ಕಾರು ಚಾಲಕ ಸೇರಿದಂತೆ ಪ್ರಯಾಣಿಕ ಕೂಡ ಗಾಯಗೊಂಡಿದ್ದಾರೆ. ಈ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.