Breaking News

26 ರಂದು ಮುಈನುಸುನ್ನಾ ಸಂಸ್ಥೆ ದಶಮಾನೋತ್ಸವ ಸಂಭ್ರಮ

 

ಮಂಗಳೂರು: ಉತ್ತರ ಕರ್ನಾಟಕದ ಬಯಲುಸೀಮೆಯ ಗ್ರಾಮೀಣ ಪ್ರದೇಶಗಳ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಹಾವೇರಿಯಲ್ಲಿ ಸ್ಥಾಪನೆ ಮಾಡಿದ ಮುಈನುಸುನ್ನಾ ಸಂಸ್ಥೆ ದಶಮಾನೋತ್ಸವ ಸಂಭ್ರಮದಲ್ಲಿ ಇದೆ. ಈ ಹಿನ್ನಲೆಯಲ್ಲಿ ಇದೇ 26 ರಂದು 3 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮುಈನುಸುನ್ನಾ  ಸಂಸ್ಥೆಯ ನಿರ್ದೇಶಕ ಕೆ.ಎಂ.ಮುಸ್ತಫಾ ನಮಿ ಹಾವೇರಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮದೀನಾ ಆಧ್ಯಾತ್ಮಿಕ ನಾಯಕ ಸೈಯದ್ ಹಬೀಬ್ ಆದಿಲ್ ಉಮರ್ ಅಲ್ ಜಿಫ್ರೀ ಭಾಗವಹಿಸಿ ಉದ್ಘಾಟನೆ ಮಾಡಲಿದ್ದಾರೆ. ದಕ್ಷಿಣ ಕರ್ನಾಟಕ  ಸುನ್ನಿ ಸೆಂಟರ್‌ನ ಅಧ್ಯಕ್ಷ ಸಯ್ಯಿದ್ ಕೆ.ಎಸ್.ಆಟಕ್ಕೋಯ ತಂಳ್ ಕುಂಬೋಳ್ ದುಆ ಆಶೀರ್ವಚನ ನೀಡಲಿದ್ದಾರೆ.  ಮುಈನುಸುನ್ನಾ ಸಂಸ್ಥೆಯ ಅಧ್ಯಕ್ಷ ಸಯ್ಯಿದ್ ಅಬ್ದುಲ್ ರೆಹ್ಮಾನ್ ಶಹೀರ್ ಅಲ್ ಬುಖಾರಿ ಅಧ್ಯಕ್ಷೆಯಲ್ಲಿ  ನಡೆಯಲಿರುವ ಕಾರ್ಯಕ್ರಮವನ್ನು  ಯೆನೆಪೋಯ ವಿವಿ ಕುಲಾಧಿಪತಿ ಡಾ.ಯೆನೆಪೋಯ ಅಬ್ದುಲ್ಲ  ಕುಂಞಿ ಹಾಜಿ  ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.

  1.  

ಮಲಪ್ಪುರಂ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ತ್ವಾಹಿರ್  ಸಖಾಫಿ ಮಂಜೇರಿ, ಕರ್ನಾಟಕ ಉಲಮಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಪಿ ಹುಸೈನ್ ಸಅದಿ ಕೆ.ಸಿ ರೋಡ್, ಎಸ್‌ಎಂಎ ರಾಜ್ಯ ಘಟಕದ ಆಧ್ಯಕ್ಷ ಸಯ್ಯದ್ ಇಸ್ಮಾಯಿಲ್ ಅಲ್ ಹಾದಿ ತಂಳ್, ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಘಟಕದ ಅಧ್ಯಕ್ಷ ಡಾ. ಫಾಝಿಲ್ ರಝ್ವಿ ಹಝ್ರತ್ ಕಾವಳಕಟ್ಟೆ, ಎಸ್‌ವೈಎಸ್ ರಾಜ್ಯ ಘಟಕದ ಆಧ್ಯಕ್ಷ ಹಫೀಳ್ ಸಅದಿ ಕೊಡಗು, ಮಾಜಿ ರಾಜ್ಯಾಧ್ಯಕ್ಷ ಡಾ. ಝೈನಿ ಕಾಮಿಲ್, ಎಸ್‌ಜೆಎಂ ರಾಜ್ಯಾಧ್ಯಕ್ಷ ಅಬ್ದುಲ್ ರೆಹಮಾನ್ ಮದನಿ, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ,  ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಅಲ್‌ಹಾಜ್ ಕೆ.ಎಸ್.ಮುಹಮ್ಮದ್ ಮಸೂದ್, ಸಾಮಾಜಿಕ ಮುಖಂಡರಾದ ಎಸ್ಸೆಂ ರಶೀದ್ ಹಾಜಿ, ಮುಮ್ತ್ತಾಜ್ ಆಲಿ ಕೃಷ್ಣಾಪುರ, ಆಝಾದ್ ಮನ್ಸೂರ್ ಹಾಜಿ, ಇನಾಯತ್ ಅಲಿ, ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್,  ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ಬಿ.ಜಿ .ಹನೀಫ್ ಹಾಜಿ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಮುಈನುಸುನ್ನಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಅಬೂಬಕರ್ ಸಿದ್ದೀಖ್ ಮೊಂಟುಗೋಳಿ, ದಶಮ ಸಂಭ್ರಮ ಸಮಿತಿಯ ಚೆಯರ್ಮನ್  ಡಾ.ಶೇಖ್ ಬಾವಾ ಮಂಗಳೂರು, ಸದಸ್ಯರಾದ  ಹಾಫಿಳ್  ಅಬ್ದುಲ್ ರೆಹಮಾನ್ ಸಖಾಫಿ ಪಂಪ್‌ವೆಲ್ ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com