Breaking News

ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆ

 

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಕಾರ್ಯಕಾರಿಣಿ  ಸಭೆಯ  ಜಿಲ್ಲಾಧ್ಯಕ್ಷ  ಅನ್ವರ್ ಸಾದಾತ್ ಬಜತ್ತೂರು  ಅವರ ಅಧ್ಯಕ್ಷತೆಯಲ್ಲಿ  ಬಂಟ್ವಾಳದಲ್ಲಿ ನಡೆಯಿತು.

ವೀಕ್ಷಕರಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಲತೀಫ್ ಪುತ್ತೂರು  ಸಭೆಯಲ್ಲಿ ಸಲಹೆ ಸೂಚನೆಗಳನ್ನು ನೀಡಿದರು.

  1.  

ಸಭೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಬಗ್ಗೆ ಅವಲೋಕನ ನಡೆಸಿ ಜಿಲ್ಲೆಯಲ್ಲಿ  ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಿತು. ಪಕ್ಷದ ಹೋರಾಟ ರಾಜಕೀಯವನ್ನು ಎಂದಿನಂತೆ ಮುಂದುವರಿಸುವುದರೊಂದಿಗೆ

ಮುಂಬರಲಿರುವ ಜಿಲ್ಲಾ  ಪಂಚಾಯಿತಿ ಮತ್ತು  ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಹೇಗೆ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು, ಬೂತ್ ಸಮಿತಿಗಳ ಬಲವರ್ಧನೆಯ ಕಾರ್ಯತಂತ್ರಗಳ ಕುರಿತು ಸಮಾಲೋಚನೆ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್, ಮಿಸ್ರಿಯಾ ಕಣ್ಣೂರು, ಪ್ರಧಾನ  ಕಾರ್ಯದರ್ಶಿಗಳಾದ ಜಮಾಲ್ ಜೋಕಟ್ಟೆ , ಅಶ್ರಫ್ ಅಡ್ಡೂರು  ಕಾರ್ಯದರ್ಶಿ ಗಳಾದ ಅಕ್ಬರ್ ಬೆಳ್ತಂಗಡಿ, ಸುಹೈಲ್ ಖಾನ್ ಶಾಕೀರ್ ಅಳಕೆಮಜಲು,  ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಮತ್ತು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಮತ್ತು ಕಾರ್ಯದರ್ಶಿಗಳು  ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com