ಪುತ್ತೂರು: ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ನಮಾಜ್ ಗೆ ಸಂಬಂಧಿಸಿದಂತೆ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ತಕ್ಷಣವೇ ಬಂಧನ ಮಾಡಬೇಕು ಎಂದು ಆಗ್ರಹಿಸಿ ಮುಸ್ಲಿಂ ಯುವಜನ ಪರಿಷತ್ ವತಿಯಿಂದ ಪುತ್ತೂರು ಡಿವೈಎಸ್ಪಿ ಗಾನ ಪಿ. ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಅರುಣ್ ಪುತ್ತಿಲ ಬ್ರಿಗೇಡ್ ಪಾಣಾಜೆ ಎಂಬ ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಸಂದೀಪ್ ಪನಿಯನ್ ಎಂಬಾತ ಕಾರ್ಟೂನ್ ರಚಿಸಿ ಅದರಲ್ಲಿ ನಮಾಜ್ನ ವ್ಯಂಗ್ಯಚಿತ್ರ ಹಾಕಿ ಅವಹೇಳನ ಮಾಡಿದ್ದು, ಇದರಿಂದಾಗಿ ಭಾವನೆಗಳಿಗೆ ಧಕ್ಕೆಯಾಗಿದೆ. ಜತೆಗೆ ತೀವ್ರ ನೋವುಂಟಾಗಿದೆ. ಸಮಾಜದಲ್ಲಿ ಕೋಮು ಭಾವನೆ ಕೆರಳಿಸಿ ಅಶಾಂತಿ ಉಂಟು ಮಾಡಲು ಈ ಕೃತ್ಯ ಮಾಡಲಾಗಿದೆ. ಈತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಉಪಾಧ್ಯಕ್ಷ ಇಬ್ರಾಹಿಂ ಸಾಗರ್, ಜೊತೆ ಕಾರ್ಯದರ್ಶಿ ನೌಶಾದ್ ಬೊಳುವಾರು, ಸದಸ್ಯ ಝೈನುದ್ದೀನ್ ವಿಟ್ಲ ಇದ್ದರು.